Advertisement
ಪ್ರಮುಖ

#CrudeOilPrice | ದಿನದಿಂದ ದಿನಕ್ಕೆ ಏರುತ್ತಿರುವ ತೈಲ ಬೆಲೆ | 1 ವರ್ಷದ ಬಳಿಕ ಕಚ್ಚಾ ತೈಲದ ದರ ಭಾರೀ ಏರಿಕೆ |

Share

ಪೆಟ್ರೋಲ್‌ ಹಾಗೂ ಡೀಸೇಲ್‌ ಬೆಲೆ ದಿನದಿಂದ ದಿನಕ್ಕೆ ಏರುಗತಿಯಲ್ಲೇ ಸಾಗುತ್ತಿದೆ. ಯಾವ ಸರ್ಕಾರ ಬಂದ್ರು ಅದೇ ಕಥೆ. ಅಧಿಕಾರಕ್ಕೆ ಬರುವ ಮುಂಚೆ ಮಾತ್ರ ಘೋಷಣೆ ತೈಲ ಬೆಲೆ ಇಳಿಸುತ್ತೇವೆ ಅಂತ. ಆದ್ರೆ ಆಮೇಲೆ ಅದೇ ರಾಗ ಅದೇ ಹಾಡು. ಸಾರ್ವಜನಿಕರಿಗೆ ತೈಲ ಬೆಲೆ ಏರಿಕೆ ಬಹುದೊಡ್ಡ ತಲೆನೋವಾಗಿ ಪರಿಣಮಿಸುತ್ತಿದೆ. ಇದೀಗ ಕಚ್ಚಾ ತೈಲದ ಉತ್ಪಾದನೆ ಹಾಗೂ ರಫ್ತು ಕಡಿತವನ್ನು ಈ ವರ್ಷದ ಅಂತ್ಯದವರೆಗೆ ಮುಂದುವರಿಸಲು ರಷ್ಯಾ ಮತ್ತು ಸೌದಿ ಅರೇಬಿಯಾ ತೀರ್ಮಾನಿಸಿದ ಬೆನ್ನಲ್ಲೇ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಭಾರೀ ಏರಿಕೆಯಾಗಿದೆ.

Advertisement
Advertisement

ಭಾರತಕ್ಕೆ  ಪೂರೈಕೆ ಆಗುತ್ತಿರುವ ಬ್ರೆಂಟ್‌ ಕಚ್ಚಾ ತೈಲದ ಬೆಲೆ 1.05% ಏರಿಕೆಯಾಗಿದ್ದು ಒಂದು ಬ್ಯಾರೆಲ್‌ ಕಚ್ಚಾ ತೈಲದ ಬೆಲೆ ಈಗ 97.56 ಡಾಲರ್‌ (ಅಂದಾಜು 8,110 ರೂ.) ತಲುಪಿದೆ. ಒಂದು ಬ್ಯಾರೆಲ್‌ ಅಮೆರಿಕದ ವೆಸ್ಟ್‌ ಟೆಕ್ಸಸ್‌ ಇಂಟರ್‌ಮಿಡಿಯೇಟ್‌ ತೈಲದ ಬೆಲೆ 95.03 ಡಾಲರ್‌ಗೆ (ಅಂದಾಜು 7,900 ರೂ.) ಏರಿಕೆಯಾಗಿದೆ. ಈ ಹಿಂದೆ ಆಗಸ್ಟ್‌ 2022ರಲ್ಲಿ 94.61 ಡಾಲರ್‌ಗೆ ತಲುಪಿತ್ತು.

ಎಷ್ಟು ಕಡಿತ? : ಒಪೆಕ್‌+ ಒಕ್ಕೂಟದಲ್ಲಿ ಅತಿ ಹೆಚ್ಚು ತೈಲ ಉತ್ಪಾದನೆ ಮಾಡುವ ಸೌದಿ ಅರೇಬಿಯಾ ಈ ವರ್ಷದ ಅಂತ್ಯದ ವರೆಗೆ 1 ದಶಲಕ್ಷ ಬಿಪಿಡಿ (ಬ್ಯಾರೆಲ್‌ ಪರ್‌ ಡೇ) ತೈಲವನ್ನು ಕಡಿತ ಮಾಡುವುದಾಗಿ ಹೇಳಿದೆ. ಈ ನಿರ್ಧಾರದಿಂದ ಸೌದಿ ಈಗ ಪ್ರತಿ ದಿನ 9 ದಶಲಕ್ಷ ಬಿಪಿಡಿ ತೈಲವನ್ನು ಉತ್ಪಾದನೆ ಮಾಡುತ್ತಿದೆ. ರಷ್ಯಾವೂ ಈ ವರ್ಷದ ಅಂತ್ಯದವರೆಗೆ 3 ಲಕ್ಷ ಬಿಪಿಡಿ ತೈಲವನ್ನು ಕಡಿತ ಮಾಡುವುದಾಗಿ ಘೋಷಿಸಿದೆ. ಭಾರತಕ್ಕೆ ಪೂರೈಕೆಯಾಗುವ ಬ್ರೆಂಟ್ ಕಚ್ಚಾ ತೈಲದ ಬೆಲೆಯು ಆಗಸ್ಟ್‌ನಲ್ಲಿ ಸರಾಸರಿ 86.43 ಡಾಲರ್ ಇದ್ದರೆ ಈಗ ಇದು 97 ಡಾಲರ್‌ ಗಡಿಯನ್ನು ದಾಟಿದೆ. ಮೇ ಮತ್ತು ಜೂನ್‌ನಲ್ಲಿ ಸರಾಸರಿ ಬೆಲೆಯು 73ರಿಂದ 75 ಡಾಲರ್ ನಡುವೆ ಇತ್ತು.

– ಅಂತರ್ಜಾಲ ಮಾಹಿತಿ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!

ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ,  ಅದು ಗಂಭೀರ ಆರೋಗ್ಯ ಅಪಾಯಗಳಿಗೆ…

2 minutes ago

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…

44 minutes ago

ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ

ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…

55 minutes ago

ಜಲಜೀವನ್ ಮಿಷನ್ ವೇಗಕ್ಕೆ ಕಟ್ಟುನಿಟ್ಟಿನ ಗಡಿ : ಉಳಿದ ಕಾಮಗಾರಿಗಳು ತ್ವರಿತ ಪೂರ್ಣಗೊಳಿಸಿ

ಜಲಜೀವನ್‌ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…

1 hour ago

ಕೃಷಿಯ ಮೌನ ಆಕ್ರಂದನ | ಕಾಡಂಚಿನ ಅಡಿಕೆ ತೋಟಗಳ ಅಳಲು

ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…

1 hour ago

ಜಾಗತಿಕ ಒತ್ತಡ – ಗ್ರಾಮೀಣ ಜೀವನೋಪಾಯ | ಅಡಿಕೆ ಕುರಿತ ನಿಜವಾದ ಚರ್ಚೆ ಈಗ ಆರಂಭವಾಗಬೇಕು

ಭಾರತವು ಜಗತ್ತಿನ ಅತಿದೊಡ್ಡ ಅಡಿಕೆ ಉತ್ಪಾದಕ ರಾಷ್ಟ್ರವಾಗಿದ್ದು, ಜಾಗತಿಕ ಉತ್ಪಾದನೆಯ ಸುಮಾರು 63…

1 hour ago