Advertisement
ಸುದ್ದಿಗಳು

ಜಿಲ್ಲಾಸ್ಪತ್ರೆಗಳಲ್ಲಿ ‘ಡೇ ಕೇರ್ ಕಿಮೋ ಥೆರಫಿ’ ಕೇಂದ್ರ ಶೀಘ್ರದಲ್ಲೇ ಆರಂಭ | ಸಚಿವ ದಿನೇಶ್ ಗುಂಡೂರಾವ್

Share

ರಾಜ್ಯದ ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ‘ಡೇ ಕೇರ್ ಕಿಮೋ ಥೆರಫಿ’ ಕೇಂದ್ರಗಳನ್ನು ಶೀಘ್ರದಲ್ಲೇ ಆರಂಭಿಸಲಾಗುವುದು. ಈ ತಿಂಗಳಲ್ಲೇ ಮುಖ್ಯಮಂತ್ರಿಗಳಿಂದ ಈ ಯೋಜನೆಗೆ ಚಾಲನೆ ನೀಡಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

Advertisement
Advertisement

ಚಿಕ್ಕಬಳ್ಳಾಪುರ ಜಿಲ್ಲೆಯ ನಂದಿ ಗ್ರಾಮದಲ್ಲಿಂದು ಉನ್ನತೀಕರಿಸಿದ ಪ್ರಾಥಮಿಕ ಆರೋಗ್ಯ ಕೇಂದ್ರದ ಕಟ್ಟಡವನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಉದ್ಘಾಟಿಸಿ, ಅಲ್ಲಿನ ಸೌಲಭ್ಯವನ್ನು ವೀಕ್ಷಿಸಿದರು.ಈ ವೇಳೆ ಡಾ. ಎಂ.ಸಿ. ಸುಧಾಕರ್, ಶಾಸಕರಾದ ಪ್ರದೀಪ್ ಈಶ್ವರ್, ಕೆ.ಎಚ್. ಪುಟ್ಟಸ್ವಾಮಿ ಗೌಡ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Advertisement

ಬಳಿಕ ಮಾತನಾಡಿದ ದಿನೇಶ್ ಗುಂಡೂರಾವ್, ರಾಜ್ಯದ ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ‘ಡೇ ಕೇರ್ ಕಿಮೋ ಥೆರಫಿ’ ಕೇಂದ್ರಗಳನ್ನು ಶೀಘ್ರದಲ್ಲೇ ಆರಂಭಿಸಲಾಗುವುದು. ಈ ತಿಂಗಳಲ್ಲೇ ಮುಖ್ಯಮಂತ್ರಿಗಳಿಂದ ಈ ಯೋಜನೆಗೆ ಚಾಲನೆ ನೀಡಲಾಗುವುದು. ಕ್ಯಾನ್ಸರ್ ರೋಗಿಗಳಿಗೆ ಅಗತ್ಯವಿರುವ ಕಿಮೋ ಥೆರಪಿಗೆ ಹೆಚ್ಚಿನ ಬೇಡಿಕೆ ಇದ್ದು, ಬಡವರು ಹಾಗೂ ಸಾಮಾನ್ಯ ರೋಗಿಗಳು ದುಬಾರಿ ವೆಚ್ಚವನ್ನು ಭರಿಸಲು ಪಡದಾಡುವ ಹಿನ್ನೆಲೆಯಲ್ಲಿ ಅವರಿಗೆ ಅನುಕೂಲ  ಮಾಡಿಕೊಡುವ ನಿಟ್ಟಿನಲ್ಲಿ  ಈ ಯೋಜನೆಯನ್ನು ಆರಂಭಿಸಲಾಗುತ್ತಿದೆ ಎಂದು ತಿಳಿಸಿದರು. ನಟ ಪುನೀತ್ ರಾಜ್ ಕುಮಾರ್ ಹೆಸರಲ್ಲಿ ಆರಂಭಿಸಿರುವ ಹೃದಯ ಜ್ಯೋತಿ ಯೋಜನೆಯಡಿ ಸದ್ಯ 75ಕ್ಕೂ ಹೆಚ್ಚು ಜನರ ಜೀವ ಉಳಿಸಿದ್ದು , 1 ಸಾವಿರದ 200ಕ್ಕೂ ಹೆಚ್ಚು ಜನರು ಹೃದಯ ಸಮಸ್ಯೆಗೆ  ಸೂಕ್ತ ಚಿಕಿತ್ಸೆ ಪಡೆಯುತ್ತಿದ್ದಾರೆ. ರಾಜ್ಯದ ಎಲ್ಲ ತಾಲೂಕು ಆಸ್ಪತ್ರೆಗಳಿಗೂ ಈ ಯೋಜನೆಯನ್ನು ವಿಸ್ತರಿಸಲು ನಿರ್ಧರಿಸಲಾಗಿದೆ ಎಂದು ಹೇಳಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮೈಸೂರು ದಸರದಲ್ಲಿ ರೈತರಿಗೆ ಗೌರವ | ಬೆಳೆ ಇಳುವರಿ ಹೆಚ್ಚು ಮಾಡಲು ಹಲವು ಕ್ರಮ – ಕೃಷಿ ಸಚಿವ ಚಲುವರಾಯಸ್ವಾಮಿ

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ರೈತರಿಗಾಗಿ ಹಮ್ಮಿಕೊಂಡಿದ್ದ ರೈತ ದಸರಾ ಕಾರ್ಯಕ್ರಮಕ್ಕೆ…

6 mins ago

ಬಗರ್‌ಹುಕುಂ ಅರ್ಜಿಗಳ ವಿಲೇವಾರಿಗಾಗಿ 2 ತಿಂಗಳು ಗಡುವು | ಕಂದಾಯ ಸಚಿವ ಕೃಷ್ಣ ಭೈರೇಗೌಡ

ಅಧಿಕಾರಿಗಳು ಬಗರ್ ಹುಕುಂ ಅರ್ಜಿಗಳ ವಿಲೇವಾರಿಗೆ ಆಸಕ್ತಿ ತೋರದಿದ್ದರೆ, ಕಾನೂನುಕ್ರಮ ಎದುರಿಸಬೇಕಾಗುತ್ತದೆ ಎಂದು…

15 mins ago

ಹವಾಮಾನ ವರದಿ | 06-10-2024 | ಸಂಜೆ ಗುಡುಗು ಸಹಿತ ಮಳೆ ನಿರೀಕ್ಷೆ | ಅ.15 ರವರೆಗೆ ಮಳೆ ಸಾಧ್ಯತೆ |

ಅಕ್ಟೊಬರ್ 10ರ ನಂತರದ ಅರಬ್ಬಿ ಸಮುದ್ರ ಹಾಗೂ ಬಂಗಾಳಕೊಲ್ಲಿಯ ವಾಯುಭಾರ ಕುಸಿತದ ಸ್ವಷ್ಠತೆ…

3 hours ago

ನವರಾತ್ರಿ ಸಂಭ್ರಮ | ಕರಾವಳಿಯಲ್ಲಿಈಗ ಹುಲಿ ವೇಷದ ಕುಣಿತ | ಸ್ಥಾನಪಡೆಯುತ್ತಿರುವ “ಪಿಲಿಗೊಬ್ಬು” |

ಹುಲಿ ನೃತ್ಯ ಮೇಲ್ನೋಟಕ್ಕೆ ಮನರಂಜನೆಯ ವಿಷಯವಾಗಿ ಕಂಡರೂ ಇದು ದೇವಿಯ  ಆರಾಧನೆಯ  ಇನ್ನೊಂದು…

5 hours ago

ಕೃಷಿ ಸಮ್ಮಾನ್‌ ನಿಧಿಯ 18 ನೇ ಕಂತು ಬಿಡುಗಡೆ | 9.4 ಕೋಟಿ ರೈತರ ಖಾತೆಗೆ ಹಣ ಜಮೆ |

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು  ಪಿಎಂ ಕೃಷಿ ಸಮ್ಮಾನ್‌ ನಿಧಿಯ 18ನೇ ಕಂತಿನ…

8 hours ago