ರಾಜ್ಯದ ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ‘ಡೇ ಕೇರ್ ಕಿಮೋ ಥೆರಫಿ’ ಕೇಂದ್ರಗಳನ್ನು ಶೀಘ್ರದಲ್ಲೇ ಆರಂಭಿಸಲಾಗುವುದು. ಈ ತಿಂಗಳಲ್ಲೇ ಮುಖ್ಯಮಂತ್ರಿಗಳಿಂದ ಈ ಯೋಜನೆಗೆ ಚಾಲನೆ ನೀಡಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಚಿಕ್ಕಬಳ್ಳಾಪುರ ಜಿಲ್ಲೆಯ ನಂದಿ ಗ್ರಾಮದಲ್ಲಿಂದು ಉನ್ನತೀಕರಿಸಿದ ಪ್ರಾಥಮಿಕ ಆರೋಗ್ಯ ಕೇಂದ್ರದ ಕಟ್ಟಡವನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಉದ್ಘಾಟಿಸಿ, ಅಲ್ಲಿನ ಸೌಲಭ್ಯವನ್ನು ವೀಕ್ಷಿಸಿದರು.ಈ ವೇಳೆ ಡಾ. ಎಂ.ಸಿ. ಸುಧಾಕರ್, ಶಾಸಕರಾದ ಪ್ರದೀಪ್ ಈಶ್ವರ್, ಕೆ.ಎಚ್. ಪುಟ್ಟಸ್ವಾಮಿ ಗೌಡ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಬಳಿಕ ಮಾತನಾಡಿದ ದಿನೇಶ್ ಗುಂಡೂರಾವ್, ರಾಜ್ಯದ ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ‘ಡೇ ಕೇರ್ ಕಿಮೋ ಥೆರಫಿ’ ಕೇಂದ್ರಗಳನ್ನು ಶೀಘ್ರದಲ್ಲೇ ಆರಂಭಿಸಲಾಗುವುದು. ಈ ತಿಂಗಳಲ್ಲೇ ಮುಖ್ಯಮಂತ್ರಿಗಳಿಂದ ಈ ಯೋಜನೆಗೆ ಚಾಲನೆ ನೀಡಲಾಗುವುದು. ಕ್ಯಾನ್ಸರ್ ರೋಗಿಗಳಿಗೆ ಅಗತ್ಯವಿರುವ ಕಿಮೋ ಥೆರಪಿಗೆ ಹೆಚ್ಚಿನ ಬೇಡಿಕೆ ಇದ್ದು, ಬಡವರು ಹಾಗೂ ಸಾಮಾನ್ಯ ರೋಗಿಗಳು ದುಬಾರಿ ವೆಚ್ಚವನ್ನು ಭರಿಸಲು ಪಡದಾಡುವ ಹಿನ್ನೆಲೆಯಲ್ಲಿ ಅವರಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಈ ಯೋಜನೆಯನ್ನು ಆರಂಭಿಸಲಾಗುತ್ತಿದೆ ಎಂದು ತಿಳಿಸಿದರು. ನಟ ಪುನೀತ್ ರಾಜ್ ಕುಮಾರ್ ಹೆಸರಲ್ಲಿ ಆರಂಭಿಸಿರುವ ಹೃದಯ ಜ್ಯೋತಿ ಯೋಜನೆಯಡಿ ಸದ್ಯ 75ಕ್ಕೂ ಹೆಚ್ಚು ಜನರ ಜೀವ ಉಳಿಸಿದ್ದು , 1 ಸಾವಿರದ 200ಕ್ಕೂ ಹೆಚ್ಚು ಜನರು ಹೃದಯ ಸಮಸ್ಯೆಗೆ ಸೂಕ್ತ ಚಿಕಿತ್ಸೆ ಪಡೆಯುತ್ತಿದ್ದಾರೆ. ರಾಜ್ಯದ ಎಲ್ಲ ತಾಲೂಕು ಆಸ್ಪತ್ರೆಗಳಿಗೂ ಈ ಯೋಜನೆಯನ್ನು ವಿಸ್ತರಿಸಲು ನಿರ್ಧರಿಸಲಾಗಿದೆ ಎಂದು ಹೇಳಿದರು.
ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ರೈತರಿಗಾಗಿ ಹಮ್ಮಿಕೊಂಡಿದ್ದ ರೈತ ದಸರಾ ಕಾರ್ಯಕ್ರಮಕ್ಕೆ…
ಅಧಿಕಾರಿಗಳು ಬಗರ್ ಹುಕುಂ ಅರ್ಜಿಗಳ ವಿಲೇವಾರಿಗೆ ಆಸಕ್ತಿ ತೋರದಿದ್ದರೆ, ಕಾನೂನುಕ್ರಮ ಎದುರಿಸಬೇಕಾಗುತ್ತದೆ ಎಂದು…
ಅಕ್ಟೊಬರ್ 10ರ ನಂತರದ ಅರಬ್ಬಿ ಸಮುದ್ರ ಹಾಗೂ ಬಂಗಾಳಕೊಲ್ಲಿಯ ವಾಯುಭಾರ ಕುಸಿತದ ಸ್ವಷ್ಠತೆ…
ಹುಲಿ ನೃತ್ಯ ಮೇಲ್ನೋಟಕ್ಕೆ ಮನರಂಜನೆಯ ವಿಷಯವಾಗಿ ಕಂಡರೂ ಇದು ದೇವಿಯ ಆರಾಧನೆಯ ಇನ್ನೊಂದು…
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಪಿಎಂ ಕೃಷಿ ಸಮ್ಮಾನ್ ನಿಧಿಯ 18ನೇ ಕಂತಿನ…
ದೆಹಲಿಯಲ್ಲಿ ಮೂರು ದಿನಗಳ ಕಾಲ ಕೌಟಿಲ್ಯ ಆರ್ಥಿಕ ಸಮಾವೇಶ ಆರಂಭಗೊಂಡಿದೆ. ಉದ್ಯೋಗ ಸೃಷ್ಟಿ,…