ರಾಜ್ಯದ ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ‘ಡೇ ಕೇರ್ ಕಿಮೋ ಥೆರಫಿ’ ಕೇಂದ್ರಗಳನ್ನು ಶೀಘ್ರದಲ್ಲೇ ಆರಂಭಿಸಲಾಗುವುದು. ಈ ತಿಂಗಳಲ್ಲೇ ಮುಖ್ಯಮಂತ್ರಿಗಳಿಂದ ಈ ಯೋಜನೆಗೆ ಚಾಲನೆ ನೀಡಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಚಿಕ್ಕಬಳ್ಳಾಪುರ ಜಿಲ್ಲೆಯ ನಂದಿ ಗ್ರಾಮದಲ್ಲಿಂದು ಉನ್ನತೀಕರಿಸಿದ ಪ್ರಾಥಮಿಕ ಆರೋಗ್ಯ ಕೇಂದ್ರದ ಕಟ್ಟಡವನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಉದ್ಘಾಟಿಸಿ, ಅಲ್ಲಿನ ಸೌಲಭ್ಯವನ್ನು ವೀಕ್ಷಿಸಿದರು.ಈ ವೇಳೆ ಡಾ. ಎಂ.ಸಿ. ಸುಧಾಕರ್, ಶಾಸಕರಾದ ಪ್ರದೀಪ್ ಈಶ್ವರ್, ಕೆ.ಎಚ್. ಪುಟ್ಟಸ್ವಾಮಿ ಗೌಡ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಬಳಿಕ ಮಾತನಾಡಿದ ದಿನೇಶ್ ಗುಂಡೂರಾವ್, ರಾಜ್ಯದ ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ‘ಡೇ ಕೇರ್ ಕಿಮೋ ಥೆರಫಿ’ ಕೇಂದ್ರಗಳನ್ನು ಶೀಘ್ರದಲ್ಲೇ ಆರಂಭಿಸಲಾಗುವುದು. ಈ ತಿಂಗಳಲ್ಲೇ ಮುಖ್ಯಮಂತ್ರಿಗಳಿಂದ ಈ ಯೋಜನೆಗೆ ಚಾಲನೆ ನೀಡಲಾಗುವುದು. ಕ್ಯಾನ್ಸರ್ ರೋಗಿಗಳಿಗೆ ಅಗತ್ಯವಿರುವ ಕಿಮೋ ಥೆರಪಿಗೆ ಹೆಚ್ಚಿನ ಬೇಡಿಕೆ ಇದ್ದು, ಬಡವರು ಹಾಗೂ ಸಾಮಾನ್ಯ ರೋಗಿಗಳು ದುಬಾರಿ ವೆಚ್ಚವನ್ನು ಭರಿಸಲು ಪಡದಾಡುವ ಹಿನ್ನೆಲೆಯಲ್ಲಿ ಅವರಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಈ ಯೋಜನೆಯನ್ನು ಆರಂಭಿಸಲಾಗುತ್ತಿದೆ ಎಂದು ತಿಳಿಸಿದರು. ನಟ ಪುನೀತ್ ರಾಜ್ ಕುಮಾರ್ ಹೆಸರಲ್ಲಿ ಆರಂಭಿಸಿರುವ ಹೃದಯ ಜ್ಯೋತಿ ಯೋಜನೆಯಡಿ ಸದ್ಯ 75ಕ್ಕೂ ಹೆಚ್ಚು ಜನರ ಜೀವ ಉಳಿಸಿದ್ದು , 1 ಸಾವಿರದ 200ಕ್ಕೂ ಹೆಚ್ಚು ಜನರು ಹೃದಯ ಸಮಸ್ಯೆಗೆ ಸೂಕ್ತ ಚಿಕಿತ್ಸೆ ಪಡೆಯುತ್ತಿದ್ದಾರೆ. ರಾಜ್ಯದ ಎಲ್ಲ ತಾಲೂಕು ಆಸ್ಪತ್ರೆಗಳಿಗೂ ಈ ಯೋಜನೆಯನ್ನು ವಿಸ್ತರಿಸಲು ನಿರ್ಧರಿಸಲಾಗಿದೆ ಎಂದು ಹೇಳಿದರು.
17.12.2025 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ…
ಚಳಿಗಾಲ ಎಂದರೆ ಒಂದು ರೀತಿಯಲ್ಲಿ ಕಿರಿಕಿರಿ. ವಯಸ್ಸಾದವರಂತೆ ಚರ್ಮ ಸುಕ್ಕು ಕಟ್ಟುವುದು, ಆರೋಗ್ಯದಲ್ಲಿ…
ಚಳಿಗಾಲದಲ್ಲಿ ಆರೋಗ್ಯ ಸಮಸ್ಯೆಗಳು ಹೆಚ್ಚಾಗಿ ಕಾಣುತ್ತದೆ. ಆದರಲ್ಲೂ ಹೃದಯದ ಸಮಸ್ಯೆಗಳ ಬಗ್ಗೆ ಕಾಳಜಿ…
ಮಹಿಳೆಯರು ಸಹ ಉದ್ಯೋಗವನ್ನು ಮಾಡಬೇಕೆಂದು ಸರ್ಕಾರವು ಅನೇಕ ರೀತಿಯ ಯೋಜನೆಯನ್ನು ಜಾರಿಗೊಳಿಸಿದ್ದು, ಟ್ರೈಲರಿಂಗ್…
ಮೊಟ್ಟೆಗಳು ಉತ್ತಮ ಗುಣಮಟ್ಟದ ಪ್ರೋಟೀನ್ ಅಂಶ ವಾಗಿದ್ದು, ಮಕ್ಕಳಿಗೆ ಮತ್ತು ಗರ್ಭಿಣಿಯರಿಗೆ ನೀಡುತ್ತಿದ್ದರು.…
ಹಣದ ಅವಶ್ಯಕತೆಯಿರುವ ಎಲ್ಲರೂ ಬ್ಯಾಂಕ್ ಗಳಲ್ಲಿ ಸಾಲಕ್ಕೆ ಮೊರೆ ಹೋಗಿ ಅಧಿಕ ಬಡ್ಡಿಯನ್ನು…