ರಾಜ್ಯದ ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ‘ಡೇ ಕೇರ್ ಕಿಮೋ ಥೆರಫಿ’ ಕೇಂದ್ರಗಳನ್ನು ಶೀಘ್ರದಲ್ಲೇ ಆರಂಭಿಸಲಾಗುವುದು. ಈ ತಿಂಗಳಲ್ಲೇ ಮುಖ್ಯಮಂತ್ರಿಗಳಿಂದ ಈ ಯೋಜನೆಗೆ ಚಾಲನೆ ನೀಡಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಚಿಕ್ಕಬಳ್ಳಾಪುರ ಜಿಲ್ಲೆಯ ನಂದಿ ಗ್ರಾಮದಲ್ಲಿಂದು ಉನ್ನತೀಕರಿಸಿದ ಪ್ರಾಥಮಿಕ ಆರೋಗ್ಯ ಕೇಂದ್ರದ ಕಟ್ಟಡವನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಉದ್ಘಾಟಿಸಿ, ಅಲ್ಲಿನ ಸೌಲಭ್ಯವನ್ನು ವೀಕ್ಷಿಸಿದರು.ಈ ವೇಳೆ ಡಾ. ಎಂ.ಸಿ. ಸುಧಾಕರ್, ಶಾಸಕರಾದ ಪ್ರದೀಪ್ ಈಶ್ವರ್, ಕೆ.ಎಚ್. ಪುಟ್ಟಸ್ವಾಮಿ ಗೌಡ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಬಳಿಕ ಮಾತನಾಡಿದ ದಿನೇಶ್ ಗುಂಡೂರಾವ್, ರಾಜ್ಯದ ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ‘ಡೇ ಕೇರ್ ಕಿಮೋ ಥೆರಫಿ’ ಕೇಂದ್ರಗಳನ್ನು ಶೀಘ್ರದಲ್ಲೇ ಆರಂಭಿಸಲಾಗುವುದು. ಈ ತಿಂಗಳಲ್ಲೇ ಮುಖ್ಯಮಂತ್ರಿಗಳಿಂದ ಈ ಯೋಜನೆಗೆ ಚಾಲನೆ ನೀಡಲಾಗುವುದು. ಕ್ಯಾನ್ಸರ್ ರೋಗಿಗಳಿಗೆ ಅಗತ್ಯವಿರುವ ಕಿಮೋ ಥೆರಪಿಗೆ ಹೆಚ್ಚಿನ ಬೇಡಿಕೆ ಇದ್ದು, ಬಡವರು ಹಾಗೂ ಸಾಮಾನ್ಯ ರೋಗಿಗಳು ದುಬಾರಿ ವೆಚ್ಚವನ್ನು ಭರಿಸಲು ಪಡದಾಡುವ ಹಿನ್ನೆಲೆಯಲ್ಲಿ ಅವರಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಈ ಯೋಜನೆಯನ್ನು ಆರಂಭಿಸಲಾಗುತ್ತಿದೆ ಎಂದು ತಿಳಿಸಿದರು. ನಟ ಪುನೀತ್ ರಾಜ್ ಕುಮಾರ್ ಹೆಸರಲ್ಲಿ ಆರಂಭಿಸಿರುವ ಹೃದಯ ಜ್ಯೋತಿ ಯೋಜನೆಯಡಿ ಸದ್ಯ 75ಕ್ಕೂ ಹೆಚ್ಚು ಜನರ ಜೀವ ಉಳಿಸಿದ್ದು , 1 ಸಾವಿರದ 200ಕ್ಕೂ ಹೆಚ್ಚು ಜನರು ಹೃದಯ ಸಮಸ್ಯೆಗೆ ಸೂಕ್ತ ಚಿಕಿತ್ಸೆ ಪಡೆಯುತ್ತಿದ್ದಾರೆ. ರಾಜ್ಯದ ಎಲ್ಲ ತಾಲೂಕು ಆಸ್ಪತ್ರೆಗಳಿಗೂ ಈ ಯೋಜನೆಯನ್ನು ವಿಸ್ತರಿಸಲು ನಿರ್ಧರಿಸಲಾಗಿದೆ ಎಂದು ಹೇಳಿದರು.
ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…
ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…
ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…
ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…
2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…