Advertisement
ಸುದ್ದಿಗಳು

ಹಗಲು ನಿದ್ರೆ ಅನೇಕ ರೋಗಗಳಿಗೆ ಆಹ್ವಾನ ; ಔಷಧಿಗಿಂತ ಉತ್ತಮ ಜೀವನಶೈಲಿಯೇ ಪರಿಹಾರ: ರಾಘವೇಶ್ವರ ಶ್ರೀ

Share

ಹಗಲು ಸಮಯದಲ್ಲಿ ಅನಗತ್ಯವಾಗಿ ನಿದ್ರೆ ಮಾಡುವ ಅಭ್ಯಾಸ ಮಧುಮೇಹ, ರಕ್ತದೊತ್ತಡ, ಹೃದಯ ಸಂಬಂಧಿ ಸಮಸ್ಯೆಗಳು ಸೇರಿದಂತೆ ಹಲವು ಕಾಯಿಲೆಗಳ ಅಪಾಯವನ್ನು ಹೆಚ್ಚಿಸಬಹುದು ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು.

ಗೋಕರ್ಣದ ಅಶೋಕೆಯ ಮೂಲಮಠದಲ್ಲಿ ನಡೆಯುತ್ತಿರುವ ‘ಅನ್ನಬ್ರಹ್ಮ ಚಾತುರ್ಮಾಸ್ಯ’ ಧರ್ಮಸಭೆಯ ‘ಅನ್ನಂ ಬ್ರಹ್ಮ’ ಪ್ರವಚನ ಮಾಲಿಕೆಯಲ್ಲಿ ಅವರು ನಿದ್ರೆಯ ಮಹತ್ವದ ಕುರಿತು ಮಾತನಾಡಿದರು.

ಮಾನವನ ದೈಹಿಕ ಹಾಗೂ ಮಾನಸಿಕ ಆರೋಗ್ಯಕ್ಕೆ ಸರಿಯಾದ ನಿದ್ರೆ ಅತ್ಯಗತ್ಯವಾಗಿದ್ದು, ರಾತ್ರಿ ಸಮಯದಲ್ಲಿ ಸುಖನಿದ್ರೆ ಮಾಡುವುದೇ ಆರೋಗ್ಯಕರ ಜೀವನದ ಮೂಲಾಧಾರವಾಗಿದೆ ಎಂದು ಅವರು ತಿಳಿಸಿದರು. ದೇಹದಲ್ಲಿನ ಜಠರಾಗ್ನಿ, ಧಾತುಗಳ ಕಾರ್ಯ ಹಾಗೂ ನಿದ್ರೆಯ ನಡುವೆ ಅವಿನಾಭಾವ ಸಂಬಂಧವಿದ್ದು, ಸಮರ್ಪಕ ನಿದ್ರೆಯಿಂದ ದೇಹದ ಅಂಗಾಂಗಗಳಿಗೆ ವಿಶ್ರಾಂತಿ ದೊರೆತು ಹೊಸ ಚೈತನ್ಯ ಮೂಡುತ್ತದೆ ಎಂದರು.

ಆಯುರ್ವೇದದ ಪ್ರಕಾರ ರಾತ್ರಿ ಜಾಗರಣೆ ಹಾಗೂ ಹಗಲು ನಿದ್ರೆ ಎರಡೂ ಆರೋಗ್ಯಕ್ಕೆ ಹಾನಿಕಾರಕ. ಹಗಲು ನಿದ್ರೆಯಿಂದ ಕಫದೋಷ ಹೆಚ್ಚಾಗಿ ಮಧುಮೇಹ, ರಕ್ತದೊತ್ತಡ, ಹೃದಯ ಸಂಬಂಧಿ ಕಾಯಿಲೆಗಳ ಅಪಾಯ ಹೆಚ್ಚುವ ಸಾಧ್ಯತೆ ಇದೆ ಎಂದು ಎಚ್ಚರಿಸಿದರು. ವಿಶೇಷ ಸಂದರ್ಭಗಳನ್ನು ಹೊರತುಪಡಿಸಿ ಹಗಲು ನಿದ್ರೆಯನ್ನು ತಪ್ಪಿಸಬೇಕು ಎಂದು ಸಲಹೆ ನೀಡಿದರು.

ಆದರೆ ಬಾಲಕರು, ವೃದ್ಧರು, ಶ್ರಮಜೀವಿಗಳು, ಗಾಯಗೊಂಡವರು ಹಾಗೂ ಪ್ರಯಾಣದಿಂದ ದಣಿದವರಿಗೆ ಹಗಲು ನಿದ್ರೆಗೆ ಆಯುರ್ವೇದದಲ್ಲಿ ವಿನಾಯಿತಿ ನೀಡಲಾಗಿದೆ. ಇಂತಹವರು ಖಾಲಿ ಹೊಟ್ಟೆಯಲ್ಲಿ ಸುಮಾರು 48 ನಿಮಿಷ (ಒಂದು ಮುಹೂರ್ತ) ವಿಶ್ರಾಂತಿ ಪಡೆಯಬಹುದು ಎಂದು ಹೇಳಿದರು.

ಸುಖನಿದ್ರೆಯಿಂದ ಜಠರಾಗ್ನಿ ಪ್ರಬಲವಾಗಿ ಆಹಾರ ಸರಿಯಾಗಿ ಜೀರ್ಣವಾಗುತ್ತದೆ. ದೇಹಕ್ಕೆ ಬಲ, ಮನಸ್ಸಿಗೆ ಪ್ರಸನ್ನತೆ ಹಾಗೂ ರೋಗನಿರೋಧಕ ಶಕ್ತಿ ಹೆಚ್ಚುತ್ತದೆ. ನಿದ್ರೆಯ ಕೊರತೆಯಿಂದ ಮಾನಸಿಕ ಒತ್ತಡ, ದೌರ್ಬಲ್ಯ, ಜ್ಞಾನಕ್ಷಯ ಹಾಗೂ ಜೀವನದ ಗುಣಮಟ್ಟ ಕುಸಿಯುವ ಸಾಧ್ಯತೆ ಇದೆ ಎಂದರು.

ಸರಿಯಾದ ನಿದ್ರೆ ದೈಹಿಕ ಆರೋಗ್ಯಕ್ಕೆ ಮಾತ್ರವಲ್ಲದೆ ಮಾನಸಿಕ ಸಮತೋಲನ, ನೆನಪಿನ ಶಕ್ತಿ ಹಾಗೂ ನಿರ್ಧಾರ ತೆಗೆದುಕೊಳ್ಳುವ ಸಾಮರ್ಥ್ಯಕ್ಕೂ ಅತ್ಯಂತ ಮುಖ್ಯವಾಗಿದೆ. ಆದ್ದರಿಂದ ನಿದ್ರೆಯನ್ನು ಆರೋಗ್ಯಕರ ಜೀವನಶೈಲಿಯ ಅವಿಭಾಜ್ಯ ಅಂಗವಾಗಿ ಪರಿಗಣಿಸಬೇಕು ಎಂದು ತಿಳಿಸಿದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಫಾಲೋಮಾಡಲು ಇಲ್ಲಿ ಕ್ಲಿಕ್‌ ಮಾಡಿ

ಆಯುರ್ವೇದ ಮತ್ತು ಆಧುನಿಕ ವೈದ್ಯಕೀಯ ಎರಡೂ ಆರೋಗ್ಯಕರ ಜೀವನಕ್ಕಾಗಿ ಒಂದೇ ಸಂದೇಶ ನೀಡುತ್ತವೆ. ರಾತ್ರಿ ಮಿತವಾದ ಆಹಾರ ಸೇವನೆ, ನಿಯಮಿತ ನಿದ್ರೆ ಹಾಗೂ ಬೆಳಗ್ಗೆ ಸಕಾಲದಲ್ಲಿ ಏಳುವ ಅಭ್ಯಾಸ ಬೆಳೆಸಿಕೊಂಡರೆ ಉತ್ತಮ ಆರೋಗ್ಯದೊಂದಿಗೆ ಸಂತೋಷಕರ ಜೀವನ ನಡೆಸಬಹುದು. “ಆರೋಗ್ಯ ಕಾಪಾಡಿಕೊಳ್ಳಲು ಔಷಧಿಗಿಂತ ಉತ್ತಮ ಜೀವನಶೈಲಿಯೇ ಅತ್ಯುತ್ತಮ ಪರಿಹಾರ” ಎಂದು ಅವರು ಅಭಿಪ್ರಾಯಪಟ್ಟರು.

“ವಿದ್ಯಾರ್ಥಿಗಳು ಹಾಗೂ ಯುವಜನರು ರಾತ್ರಿ ತಡವಾಗಿ ಜಾಗರಣೆ ಮಾಡುವುದನ್ನು ಮತ್ತು ಮೊಬೈಲ್ ಸೇರಿದಂತೆ ಡಿಜಿಟಲ್ ಸಾಧನಗಳ ಅತಿಯಾದ ಬಳಕೆಯನ್ನು ಕಡಿಮೆ ಮಾಡಬೇಕು. ನಿಗದಿತ ಸಮಯದಲ್ಲಿ ಮಲಗಿ, ಬೆಳಗ್ಗೆ ಸಕಾಲದಲ್ಲಿ ಏಳುವ ಅಭ್ಯಾಸ ಆರೋಗ್ಯಕರ ಜೀವನಕ್ಕೆ ಅತ್ಯಗತ್ಯ.” ಎಂದು ಇದೇ ವೇಳೆ ಶ್ರೀಗಳು ಯುವಜನರನ್ನು ಎಚ್ಚರಿಸಿದರು.

Jagadguru Sri Raghaveshwara Bharathi Swamiji said that unnecessary daytime sleep may increase the risk of diabetes, hypertension and heart disease. Speaking at the Annabrahma Chaturmasya discourse in Gokarna, he stressed that proper night sleep, balanced food and a disciplined lifestyle are the foundation of good health.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 12.09.2026 | ಸೆ.15ರಿಂದ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು? ಕರಾವಳಿ–ಮಲೆನಾಡಿನಲ್ಲಿ ಸದ್ಯ ಬಿಸಿಲಿನ ವಾತಾವರಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…

18 hours ago

ಹಸುವಿನ ಹಾಲಿಗೆ ಬದಲಾಗಿ ‘ಲ್ಯಾಬ್‌ ಹಾಲು’ – ಇನ್ನು ಕೇವಲ ವಿಜ್ಞಾನಕಲ್ಪನೆ ಅಲ್ಲ..! ಹೊಸ ಅಧ್ಯಯನದ ಲೆಕ್ಕಾಚಾರ

ಇಂಪೀರಿಯಲ್ ಕಾಲೇಜ್ ಲಂಡನ್‌ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…

23 hours ago

ಅಡಿಕೆಗೆ ಉತ್ತಮ ಬೆಲೆ , ಆದರೂ ಬೆಳೆಗಾರರ ಚಿಂತೆ ಮುಂದುವರಿದಿದೆ – ಕಾರಣವೇನು?

ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…

24 hours ago

ಚಂಡಮಾರುತಗಳು ಏಕೆ ಕಡಿಮೆಯಾಗುತ್ತಿವೆ? ಎಲ್ ನಿನೋದಿಂದ ಮಳೆ–ಬಿಸಿಲಿನ ಚಿತ್ರಣ ಬದಲಾಗುತ್ತಿದೆಯೇ?

ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…

1 day ago

ಹವಾಮಾನ ವರದಿ | 11-09-2026 | ಸೆ.12ರಿಂದ ಬಿಸಿಲು ಹೆಚ್ಚಳ, ಕೆಲವೆಡೆ ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ ಕೆಲವು ದಿನ ಬಿಸಿಲಿನ ವಾತಾವರಣ ಹೆಚ್ಚಾಗುವ…

2 days ago

ಕ್ಯಾಂಪ್ಕೊ ದಾಖಲೆ ಸಾಧನೆ – ₹3,735 ಕೋಟಿ ವಹಿವಾಟು, ₹49.62 ಕೋಟಿ ಲಾಭ – 14% ಡಿವಿಡೆಂಡ್ ಶಿಫಾರಸು

2025-26ರಲ್ಲಿ ಕ್ಯಾಂಪ್ಕೊ ₹3,735 ಕೋಟಿ ವಹಿವಾಟು ಮತ್ತು ₹49.62 ಕೋಟಿ ಲಾಭ ದಾಖಲಿಸಿದ್ದು,…

2 days ago