ಕುಸುಮ್ ಯೋಜನೆ ಮೂಲಕ ಪ್ರತಿ ತಾಲ್ಲೂಕಿನಲ್ಲಿ 20 ಮೆ.ವ್ಯಾ ಸಾಮರ್ಥ್ಯದ ಸೋಲಾರ್ ವಿದ್ಯುತ್ ಘಟಕ ಸ್ಥಾಪನೆ ಮಾಡಿ ಇದರಿಂದ ಹಗಲು ಹೊತ್ತಿನಲ್ಲಿಯೇ ರೈತರ ಪಂಪ್ ಸೆಟ್ ಗಳಿಗೆ ವಿದ್ಯುತ್ ನೀಡಲು ಸರ್ಕಾರ ತೀರ್ಮಾನ ಮಾಡಿದೆ ಎಂದು ಉಪಮುಖ್ಯಮಂತ್ರಿ .ಕೆ.ಶಿವಕುಮಾರ್ ತಿಳಿಸಿದ್ದಾರೆ.
ಹಾವೇರಿ ಜಿಲ್ಲೆಯ ಹಾನಗಲ್ ವಿಧಾನಸಭಾ ಕ್ಷೇತ್ರದ ಅಕ್ಕಿ ಆಲೂರಿನಲ್ಲಿ ಭಾನುವಾರ ನಡೆದ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಮಾಜಿ ಮುಖ್ಯಮಂತ್ರಿ ಬಂಗಾರಪ್ಪ ಅವರ ಅವಧಿಯಲ್ಲಿ ರೈತರ ಪಂಪ್ ಸೆಟ್ ಗೆ ಉಚಿತ ವಿದ್ಯುತ್ ನೀಡಲಾಯಿತು. 2013 ರ ಕಾಂಗ್ರೆಸ್ ಸರ್ಕಾರದ ವೇಳೆ ನಾನು ಇಂಧನ ಸಚಿವನಾಗಿದ್ದಾಗ ರೈತರ ಪಂಪ್ ಸೆಟ್ ಗಳಿಗೆ ನೀಡುವ ತ್ರೀ ಫೇಸ್ ವಿದ್ಯುತ್ ಪೂರೈಕೆಯನ್ನು 6 ಗಂಟೆಯಿಂದ 7 ಗಂಟೆಗೆ ಹೆಚ್ಚಳ ಮಾಡಲಾಯಿತು ಎಂದು ಹೇಳಿದರು.
665.75 ಕೋಟಿ ಹಣವನ್ನು ಹಾನಗಲ್ ಕ್ಷೇತ್ರದ ಅಭಿವೃದ್ಧಿಗೆ ನೀಡುತ್ತಿದ್ದೇವೆ. 418 ಕೋಟಿ ವೆಚ್ಚದಲ್ಲಿ ಬಾಳಂಬೀಡು ಹಾಗೂ ಇತರೇ 72 ಗ್ರಾಮಗಳ 162 ಕೆರೆಗಳು. 116 ಕೋಟಿ ವೆಚ್ಚದಲ್ಲಿ ಹಿರೇಕೌಂಶಿ ಮತ್ತು ಇತರೇ 9 ಗ್ರಾಮಗಳ 77 ಕೆರೆಗಳನ್ನು ತುಂಬಿಸುವ ಕೆಲಸ ನಾವು ಮಾಡುತ್ತಿದ್ದೇವೆ. 2018 ಕೋಟಿ ವೆಚ್ಚದ ವರದಾ ಮತ್ತು ಬೇಡ್ತಿ ನದಿ ಜೋಡಣೆ ವಿಚಾರವನ್ನು ರಾಷ್ಟ್ರೀಯ ನದಿ ಪ್ರಾಧಿಕಾರದ ಮೂಲಕ ಕೇಂದ್ರ ಸರ್ಕಾರದ ಗಮನಕ್ಕೆ ತರಲಾಗಿದೆ ಎಂದರು. ರೈತರಿಗಾಗಿ ಹಾಲಿನ ಬೆಲೆ ಹೆಚ್ಚಳ ಮಾಡಿದ್ದೇವೆ. ಈ ಹಣವನ್ನು ಸರ್ಕಾರ ಏನಾದರೂ ತೆಗೆದುಕೊಂಡಿದೆಯೇ? ಇದನ್ನು ರೈತರಿಗೆ ನೀಡಿದ್ದೇವೆ ಎಂದರು.
ಅರಬ್ಬಿ ಸಮುದ್ರದ ವಾಯುಭಾರ ಕುಸಿತದಂತಹ ತಿರುವಿಕೆಯು ರಾಜಸ್ಥಾನ ತಲುಪಿದ್ದು, ಅಲ್ಲಿ ಶಿಥಿಲಗೊಳ್ಳುವ ಲಕ್ಷಣಗಳಿವೆ.…
2025 ರಲ್ಲಿ ಗುರು ಗ್ರಹವು ತನ್ನ ಸ್ವಂತ ರಾಶಿಯಾದ ಮೇಷದಲ್ಲಿ ಸಂಚರಿಸುತ್ತಿದ್ದಾಗ, ಶುಕ್ರ…
ಮಂಗಳೂರಿನಲ್ಲಿ ನಿರ್ಮಾಣಗೊಳ್ಳುತ್ತಿರುವ ರಾಜೀವ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾನಿಲಯದ ಪ್ರಾದೇಶಿಕ ಕಚೇರಿ ಕಟ್ಟಡ…
ಕೋಲಾರ ಜಿಲ್ಲೆಯಲ್ಲಿ ಸರ್ಕಾರಿ ಜಮೀನುಗಳಲ್ಲಿ ರೈತರಿಗೆ ಮಂಜೂರಾಗಿರುವ ಜಮೀನುಗಳಿಗೆ ಪೋಡಿ ದುರಸ್ತಿ ಮಾಡಲಾಗುತ್ತಿದೆ.…
ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಳೆಯಾಗಿದೆ. ಉತ್ತರ ಹಾಗೂ ದಕ್ಷಿಣ ಒಳನಾಡಿನ ಕೆಲವೆಡೆ ಮಳೆಯಾಗಿದೆ.…
ಅಕ್ವಡಕ್ಟ್ ಇಂಜಿನಿಯರಿಂಗ್ ತಂತ್ರಜ್ಞಾನದ ಮೂಲಕ ಆರೋಗ್ಯ, ಸುರಕ್ಷತೆ, ಪರಿಸರ ಸ್ನೇಹಿ ಮಾದರಿಯಲ್ಲಿ ಎತ್ತಿನಹೊಳೆ…