ಕುಸುಮ್ ಯೋಜನೆ ಮೂಲಕ ಪ್ರತಿ ತಾಲ್ಲೂಕಿನಲ್ಲಿ 20 ಮೆ.ವ್ಯಾ ಸಾಮರ್ಥ್ಯದ ಸೋಲಾರ್ ವಿದ್ಯುತ್ ಘಟಕ ಸ್ಥಾಪನೆ ಮಾಡಿ ಇದರಿಂದ ಹಗಲು ಹೊತ್ತಿನಲ್ಲಿಯೇ ರೈತರ ಪಂಪ್ ಸೆಟ್ ಗಳಿಗೆ ವಿದ್ಯುತ್ ನೀಡಲು ಸರ್ಕಾರ ತೀರ್ಮಾನ ಮಾಡಿದೆ ಎಂದು ಉಪಮುಖ್ಯಮಂತ್ರಿ .ಕೆ.ಶಿವಕುಮಾರ್ ತಿಳಿಸಿದ್ದಾರೆ.
ಹಾವೇರಿ ಜಿಲ್ಲೆಯ ಹಾನಗಲ್ ವಿಧಾನಸಭಾ ಕ್ಷೇತ್ರದ ಅಕ್ಕಿ ಆಲೂರಿನಲ್ಲಿ ಭಾನುವಾರ ನಡೆದ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಮಾಜಿ ಮುಖ್ಯಮಂತ್ರಿ ಬಂಗಾರಪ್ಪ ಅವರ ಅವಧಿಯಲ್ಲಿ ರೈತರ ಪಂಪ್ ಸೆಟ್ ಗೆ ಉಚಿತ ವಿದ್ಯುತ್ ನೀಡಲಾಯಿತು. 2013 ರ ಕಾಂಗ್ರೆಸ್ ಸರ್ಕಾರದ ವೇಳೆ ನಾನು ಇಂಧನ ಸಚಿವನಾಗಿದ್ದಾಗ ರೈತರ ಪಂಪ್ ಸೆಟ್ ಗಳಿಗೆ ನೀಡುವ ತ್ರೀ ಫೇಸ್ ವಿದ್ಯುತ್ ಪೂರೈಕೆಯನ್ನು 6 ಗಂಟೆಯಿಂದ 7 ಗಂಟೆಗೆ ಹೆಚ್ಚಳ ಮಾಡಲಾಯಿತು ಎಂದು ಹೇಳಿದರು.
665.75 ಕೋಟಿ ಹಣವನ್ನು ಹಾನಗಲ್ ಕ್ಷೇತ್ರದ ಅಭಿವೃದ್ಧಿಗೆ ನೀಡುತ್ತಿದ್ದೇವೆ. 418 ಕೋಟಿ ವೆಚ್ಚದಲ್ಲಿ ಬಾಳಂಬೀಡು ಹಾಗೂ ಇತರೇ 72 ಗ್ರಾಮಗಳ 162 ಕೆರೆಗಳು. 116 ಕೋಟಿ ವೆಚ್ಚದಲ್ಲಿ ಹಿರೇಕೌಂಶಿ ಮತ್ತು ಇತರೇ 9 ಗ್ರಾಮಗಳ 77 ಕೆರೆಗಳನ್ನು ತುಂಬಿಸುವ ಕೆಲಸ ನಾವು ಮಾಡುತ್ತಿದ್ದೇವೆ. 2018 ಕೋಟಿ ವೆಚ್ಚದ ವರದಾ ಮತ್ತು ಬೇಡ್ತಿ ನದಿ ಜೋಡಣೆ ವಿಚಾರವನ್ನು ರಾಷ್ಟ್ರೀಯ ನದಿ ಪ್ರಾಧಿಕಾರದ ಮೂಲಕ ಕೇಂದ್ರ ಸರ್ಕಾರದ ಗಮನಕ್ಕೆ ತರಲಾಗಿದೆ ಎಂದರು. ರೈತರಿಗಾಗಿ ಹಾಲಿನ ಬೆಲೆ ಹೆಚ್ಚಳ ಮಾಡಿದ್ದೇವೆ. ಈ ಹಣವನ್ನು ಸರ್ಕಾರ ಏನಾದರೂ ತೆಗೆದುಕೊಂಡಿದೆಯೇ? ಇದನ್ನು ರೈತರಿಗೆ ನೀಡಿದ್ದೇವೆ ಎಂದರು.
ಗ್ರಾಮ ಮತ್ತು ನಗರ ಜೀವನ ಪರಸ್ಪರ ವಿರುದ್ಧವಲ್ಲ, ಪೂರಕ ಶಕ್ತಿಗಳು. ಸಮತೋಲನವೇ ಸಮೃದ್ಧ…
ದೇಶದಲ್ಲಿ ಹವಾಮಾನ ತೀವ್ರ ಬದಲಾವಣೆ ಕಂಡುಬರುತ್ತಿದ್ದು, 13 ರಾಜ್ಯಗಳಲ್ಲಿ ಮಳೆ ಮತ್ತು ಗಾಳಿ…
ಅಂಜನಾದ್ರಿ ಬೆಟ್ಟ ಏರಲು ಮಧ್ಯಾಹ್ನ 11ರಿಂದ ಸಂಜೆ 4ರವರೆಗೆ ನಿರ್ಬಂಧ ವಿಧಿಸಲಾಗಿದೆ. ಬಿಸಿಲಿನ…
ರಾಜ್ಯದಲ್ಲಿ ಉಷ್ಣಾಂಶ ಏರಿಕೆ ಮುಂದುವರಿದಿದ್ದು, ಕಲಬುರಗಿಯಲ್ಲಿ 43.2°C ದಾಖಲಾಗಿದೆ. ಮುಂದಿನ ದಿನಗಳಲ್ಲಿ ಕರಾವಳಿಯಲ್ಲಿ…
ಏಪ್ರಿಲ್ 18ರಿಂದ ರಾಜ್ಯದಲ್ಲಿ ಹವಾಮಾನ ಬದಲಾವಣೆ ಕಂಡುಬರುತ್ತಿದ್ದು, ಹಂತ ಹಂತವಾಗಿ ಮಳೆಯ ಚಟುವಟಿಕೆ…
ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…