Advertisement
MIRROR FOCUS

ರೈತರ ಪಂಪ್ ಸೆಟ್ ಗಳಿಗೆ ಹಗಲು ಹೊತ್ತಿನಲ್ಲಿಯೇ ವಿದ್ಯುತ್ ನೀಡಲು ತೀರ್ಮಾನ

Share

ಕುಸುಮ್ ಯೋಜನೆ ಮೂಲಕ ಪ್ರತಿ ತಾಲ್ಲೂಕಿನಲ್ಲಿ 20 ಮೆ.ವ್ಯಾ ಸಾಮರ್ಥ್ಯದ ಸೋಲಾರ್ ವಿದ್ಯುತ್ ಘಟಕ ಸ್ಥಾಪನೆ ಮಾಡಿ ಇದರಿಂದ ಹಗಲು ಹೊತ್ತಿನಲ್ಲಿಯೇ ರೈತರ ಪಂಪ್ ಸೆಟ್ ಗಳಿಗೆ ವಿದ್ಯುತ್ ನೀಡಲು ಸರ್ಕಾರ ತೀರ್ಮಾನ ಮಾಡಿದೆ ಎಂದು ಉಪಮುಖ್ಯಮಂತ್ರಿ .ಕೆ.ಶಿವಕುಮಾರ್ ತಿಳಿಸಿದ್ದಾರೆ.

ಹಾವೇರಿ ಜಿಲ್ಲೆಯ ಹಾನಗಲ್ ವಿಧಾನಸಭಾ ಕ್ಷೇತ್ರದ ಅಕ್ಕಿ ಆಲೂರಿನಲ್ಲಿ ಭಾನುವಾರ ನಡೆದ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಮಾಜಿ ಮುಖ್ಯಮಂತ್ರಿ  ಬಂಗಾರಪ್ಪ ಅವರ ಅವಧಿಯಲ್ಲಿ ರೈತರ ಪಂಪ್ ಸೆಟ್ ಗೆ ಉಚಿತ ವಿದ್ಯುತ್ ನೀಡಲಾಯಿತು. 2013 ರ ಕಾಂಗ್ರೆಸ್ ಸರ್ಕಾರದ ವೇಳೆ ನಾನು ಇಂಧನ ಸಚಿವನಾಗಿದ್ದಾಗ ರೈತರ ಪಂಪ್ ಸೆಟ್ ಗಳಿಗೆ ನೀಡುವ ತ್ರೀ‌ ಫೇಸ್ ವಿದ್ಯುತ್ ಪೂರೈಕೆಯನ್ನು 6 ಗಂಟೆಯಿಂದ 7 ಗಂಟೆಗೆ ಹೆಚ್ಚಳ ಮಾಡಲಾಯಿತು ಎಂದು ಹೇಳಿದರು.

665.75 ಕೋಟಿ ಹಣವನ್ನು ಹಾನಗಲ್ ಕ್ಷೇತ್ರದ ಅಭಿವೃದ್ಧಿಗೆ ನೀಡುತ್ತಿದ್ದೇವೆ. 418 ಕೋಟಿ ವೆಚ್ಚದಲ್ಲಿ ಬಾಳಂಬೀಡು ಹಾಗೂ ಇತರೇ 72 ಗ್ರಾಮಗಳ 162 ಕೆರೆಗಳು. 116 ಕೋಟಿ ವೆಚ್ಚದಲ್ಲಿ ಹಿರೇಕೌಂಶಿ ಮತ್ತು ಇತರೇ 9 ಗ್ರಾಮಗಳ 77 ಕೆರೆಗಳನ್ನು ತುಂಬಿಸುವ ಕೆಲಸ ನಾವು ಮಾಡುತ್ತಿದ್ದೇವೆ. 2018 ಕೋಟಿ ವೆಚ್ಚದ ವರದಾ ಮತ್ತು ಬೇಡ್ತಿ ನದಿ ಜೋಡಣೆ ವಿಚಾರವನ್ನು ರಾಷ್ಟ್ರೀಯ ನದಿ ಪ್ರಾಧಿಕಾರದ ಮೂಲಕ ಕೇಂದ್ರ ಸರ್ಕಾರದ ಗಮನಕ್ಕೆ ತರಲಾಗಿದೆ ಎಂದರು.  ರೈತರಿಗಾಗಿ ಹಾಲಿನ ಬೆಲೆ ಹೆಚ್ಚಳ ಮಾಡಿದ್ದೇವೆ. ಈ ಹಣವನ್ನು ಸರ್ಕಾರ ಏನಾದರೂ ತೆಗೆದುಕೊಂಡಿದೆಯೇ? ಇದನ್ನು ರೈತರಿಗೆ ನೀಡಿದ್ದೇವೆ ಎಂದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಜಗತ್ತು ನಮ್ಮ ಜೊತೆಗಿದೆ ಎಂಬ ಭ್ರಮೆ

ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…

2 days ago

ತೆಂಗಿನ ಎಣ್ಣೆಯಿಂದ ವಿಮಾನದ ಇಂಧನ ? ಜೆಟ್‌ ಎಂಜಿನ್‌ ಪರೀಕ್ಷೆಯಲ್ಲಿ ಕುತೂಹಲ ಮೂಡಿಸಿದ ಫಲಿತಾಂಶ

ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…

2 days ago

ಕೃಷಿ ಇನ್ನು ಕೇವಲ ಬೆಳೆ ಬೆಳೆಯುವುದಲ್ಲ – ಯುವಕರಿಗೆ ಸ್ಟಾರ್ಟ್‌ಅಪ್ ಕ್ಷೇತ್ರ

ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…

2 days ago

ಬರಪೀಡಿತ ಪ್ರದೇಶಗಳ ರೈತರಿಗೆ ಗುಡ್‌ನ್ಯೂಸ್ ; ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ

ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…

2 days ago

ರಾಜ್ಯದ 102 ತಾಲೂಕುಗಳಲ್ಲಿ ಬರದ ಛಾಯೆ – ತಿಂಗಳಾಂತ್ಯಕ್ಕೆ ಕೇಂದ್ರಕ್ಕೆ ವರದಿ ಸಲ್ಲಿಕೆ

ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…

2 days ago

ಮಂಗಳೂರಿನ ಅಶ್ಮಿತ್ ಎ.ಜೆ. ಅವರಿಗೆ ‘ಸರಿಗಮಪ 2026’ರ ಕಿರೀಟ

ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…

2 days ago