Advertisement
The Rural Mirror ಕಾಳಜಿ

ಸಮಾಜದ ಕಟ್ಟಕಡೆಯ ಗ್ರಾಮವನ್ನು ತಲುಪಿದ ಯಾದಗಿರಿಯ ಜಿಲ್ಲಾಧಿಕಾರಿ | ತಾಂಡಾ ಗ್ರಾಮವೊಂದಕ್ಕೆ ತೆರಳಿ ಅಲ್ಲಿನ ಮಕ್ಕಳಿಗೆ ಪಾಠ ಮಾಡಿದ ಜಿಲ್ಲಾಧಿಕಾರಿ ಬಿ ಸುಶೀಲಾ |

Share

ಅದೆಷ್ಟೋ ಮಂದಿ ಸಮಾಜ ಸೇವೆ ಮಾಡಬೇಕು ಅನ್ನೋ ಗುರಿಯನ್ನು ಇಟ್ಟುಕೊಂಡು ಸರ್ಕಾರಿ ಅಧಿಕಾರಿಗಳಾಗಿ ಕೆಲಸಕ್ಕೆ ಬರ್ತಾರೆ. ಆದರೆ ಆಮೇಲೆ ಸಮಾಜ ಸೇವೆ ಬಿಟ್ಟು ತಮ್ಮ ಸ್ವಾರ್ಥ ನೋಡಿ ಕೊಳ್ಳುತ್ತಾರೆ. ಆದರೆ ಯಾದಗಿರಿ ಜಿಲ್ಲಾಧಿಕಾರಿ ಸುಶೀಲಾ ಅವರು ಈ ಮಾತಿಗೆ ಅಪವಾದ ಎನ್ನುವಂತೆ ತಮ್ಮ ಕೆಲಸ ನಿರ್ವಹಿಸುತ್ತಿದ್ದಾರೆ. ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ರೇವುನಾಯ್ಕ ತಾಂಡಾಕ್ಕೆ ಭೇಟಿ ನೀಡಿ ಅಲ್ಲಿನ ಮಕ್ಕಳಿಗೆ ಕನ್ನಡ ಪಾಠ ಮಾಡಿ ಗಮನ ಸೆಳೆದರು.

ಯಾದಗಿರಿ ಜಿಲ್ಲೆಯ ಪ್ರಥಮ ಸರ್ಕಾರಿ ಅಧಿಕಾರಿ ಸ್ವತಃ ತಾಂಡಾ ಗ್ರಾಮವೊಂದಕ್ಕೆ ಬಂದು ಅಲ್ಲಿನ ಮಕ್ಕಳಿಗೆ ಪಾಠ ಮಾಡಿದ್ದಾರೆ. ಮತ್ತು ಆ ಮಕ್ಕಳ ಜ್ಞಾನವನ್ನು ಮೆಚ್ಚಿ ಕೊಂಡಾಡಿದ್ದಾರೆ. ಜಿಲ್ಲಾಧಿಕಾರಿ ಯಾದಗಿರಿ ಸ್ವತಃ ಶಿಕ್ಷಕಿಯಾಗಿ ಪ್ರಾಥಮಿಕ ಶಾಲಾ ಮಕ್ಕಳಿಗೆ ಪಾಠಮಾಡಿದ್ದಾರೆ. ಹೀಗೆ ತಾಂಡಾ ಮಕ್ಕಳಿಗೆ ಪಾಠ ಮಾಡಿದವರು ಬಿ. ಸುಶೀಲಾ, ಯಾದಗಿರಿ ಡಿಸಿ.  ಜಿಲ್ಲಾಧಿಕಾರಿ ಡಾ. ಸುಶೀಲಾ ಅವರು ಪಾಠದ ಜೊತೆಗೆ ತಾಂಡಾ ಮಕ್ಕಳಿಗೆ ಶಬ್ದಗಳ ಪರಿಚಯ ಮಾಡಿಸಿದರು. ಆ ವೇಳೆ ಮಕ್ಕಳ ಕನ್ನಡ ಜ್ಞಾನಕ್ಕೆ ಜಿಲ್ಲಾಧಿಕಾರಿ ಫಿದಾ ಆದರು.

ಕನ್ನಡ ಬಂದರೂ ಇಂಗ್ಲಿಷ್‌ ನಲ್ಲೇ ಮಾತನಾಡಿಸುವ ಅಧಿಕಾರಿಗಳಿರುವಾಗ ಇವರು ಮಕ್ಕಳಿಗೆ ಕನ್ನಡ ಪಾಠ ಮಾಡಿ ನಿಜಕ್ಕೂ ಕನ್ನಡ ಮಾತೆಗೆ ಅಪಾರ ಗೌರವ ಸಲ್ಲಿಸಿದ್ದಾರೆ. ಇವರಂಂತಹ ಅಧಿಕಾರಿಗಳಿಂದ ಇನ್ನುಳಿದ ಅಧಿಕಾರಿಗಳು ಕಲಿಯೋದು ಬಹಳವಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಬೇವಿನ ಬೀಜದಿಂದ ಆದಾಯದ ಅವಕಾಶ ! ಚಿಕ್ಕಮಗಳೂರಿನ ಯುವ ರೈತನ ಸಕ್ಸಸ್ ಸ್ಟೋರಿ

ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…

9 hours ago

ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು : ಭಾರತದ ಕೃಷಿಗೆ ಎದುರಾಗುತ್ತಿರುವ ಸವಾಲು

ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…

16 hours ago

ಯಾದಗಿರಿಯಲ್ಲಿ ಬಿಸಿಗಾಳಿ ಎಚ್ಚರಿಕೆ – ‘ಯೆಲ್ಲೋ ಅಲರ್ಟ್’ ಘೋಷಣೆ, ಮುನ್ನೆಚ್ಚರಿಕೆ ಪಾಲಿಸಿ..!

ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…

16 hours ago

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ದಾಖಲೆ: ಕಲಬುರಗಿ ಯುವ ರೈತನಿಗೆ ರಾಜ್ಯದ ಮೆಚ್ಚುಗೆ!

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…

2 days ago

2026 ಮುಂಗಾರು ಮುನ್ಸೂಚನೆ – ಕೇರಳಕ್ಕೆ ನಿರೀಕ್ಷೆಗಿಂತ ಮುನ್ನವೇ ಆಗಮನ? – ಮಳೆ ಕಡಿಮೆಯಾಗುವ ಸಾಧ್ಯತೆ- ಕೃಷಿಗೆ ದೊಡ್ಡ ಸವಾಲು

2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…

2 days ago

ಈರುಳ್ಳಿಯಲ್ಲಿ ಇಳುವರಿ ಹೆಚ್ಚಿಸುವ ರಹಸ್ಯ..! ಜೇನುನೊಣಗಳ ಪರಾಗಸ್ಪರ್ಶದಿಂದ ಡಬಲ್ ಲಾಭ

ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…

2 days ago