Advertisement
ಸುದ್ದಿಗಳು

ಬಿಸಿಲಿನ ಝಳ | ಕಾರ್ಮಿಕರ ಸುರಕ್ಷತೆಯ ಬಗ್ಗೆ ಕಾಳಜಿ ವಹಿಸಲು ಜಿಲ್ಲಾಧಿಕಾರಿ ಸೂಚನೆ

Share

ಬೇಸಿಗೆ  ಬಿಸಿಲಿನ ಬೇಗೆ ಹೆಚ್ಚಾಗುತ್ತಿದ್ದು, ಕಾರ್ಮಿಕರ ಸುರಕ್ಷತೆಯ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕಾಗಿದೆ ಎಂದು ದ  ಕ ಜಿಲ್ಲಾಧಿಕಾರಿ ಸೂಚನೆ ನೀಡಿದ್ದಾರೆ.

Advertisement
Advertisement
ಈ ದಿಸೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ವರ್ಗದ ಕಾರ್ಮಿಕರಿಗೆ ಕೆಲಸದ ಸ್ಥಳಗಳಲ್ಲಿ ಕಾರ್ಮಿಕರ ಸುರಕ್ಷತೆ ಬಗ್ಗೆ ಅಗತ್ಯ ಸೌಲಭ್ಯ, ಕಾರ್ಮಿಕರ ಆರೋಗ್ಯದ ಬಗ್ಗೆ ಕಾಳಜಿ, ಶುದ್ಧ ಕುಡಿಯುವ ನೀರು ಮತ್ತು ಆಹಾರದ ಲಭ್ಯತೆ ಮತ್ತು ಇತರೆ ಅಗತ್ಯ ಸೌಲಭ್ಯಗಳನ್ನು ಒದಗಿಸುವುದು ಎಲ್ಲಾ ಉದ್ಯೋಗದಾತರ, ಗುತ್ತಿಗೆದಾರರ ಹಾಗೂ ನಿಯೋಜಕರ ಆದ್ಯ ಕರ್ತವ್ಯವಾಗಿದೆ. ವಿಶೇಷವಾಗಿ ನಿರ್ಮಾಣ ಕಾಮಗಾರಿಗಳಲ್ಲಿ ತೊಡಗಿರುವ ಎಲ್ಲಾ ವಿವಿಧ ಕಾರ್ಮಿಕರು, ಕಾರ್ಖಾನೆಗಳಲ್ಲಿ ದುಡಿಯುತ್ತಿರುವ ಕಾರ್ಮಿಕರು, ವಾಣಿಜ್ಯ ಸಂಸ್ಥೆಗಳಲ್ಲಿ ದುಡಿಯುತ್ತಿರುವ ಕಾರ್ಮಿಕರು, ಹೋಟೆಲ್ ಸಂಬಂಧಿತ ಸಂಸ್ಥೆಗಳಲ್ಲಿನ ಕಾರ್ಮಿಕರು ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ವಿಧದ ಕಾರ್ಮಿಕರಿಗೆ ಈ ಕೆಳಕಂಡ ಅಗತ್ಯ ಸೌಲಭ್ಯಗಳನ್ನು ಒದಗಿಸಿಕೊಡುವಂತೆ ಜಿಲ್ಲಾಧಿಕಾರಿಯವರು ಸೂಚಿಸಿದ್ದಾರೆ.
1 ಕೆಲಸದ ಸ್ಥಳಗಳಲ್ಲಿ ಕಾರ್ಮಿಕರ ಸುರಕ್ಷತೆಯ ಬಗ್ಗೆ ಅಗತ್ಯವಾದ ಮುನ್ನೆಚ್ಚರಿಕಾ ಕ್ರಮಗಳನ್ನು ತಪ್ಪದೇ ಕೈಗೊಳ್ಳುವುದು ಮತ್ತು ಕಾರ್ಮಿಕರಿಗೆ ಅಗತ್ಯವಿರುವ ಸುರಕ್ಷತಾ ಸಾಮಾಗ್ರಿಗಳನ್ನು ತಪ್ಪದೇ ಒದಗಿಸುವುದು, (ಶೂಗಳು, ಹೆಲ್ಮೆಟ್, ಗ್ಲೌಸ್ ಇತ್ಯಾದಿ)
2. ಕೆಲಸದ ಸ್ಥಳದಲ್ಲಿ ಕಾರ್ಮಿಕರಿಗೆ ಅಗತ್ಯ ಸಂದರ್ಭದಲ್ಲಿ ಆರೋಗ್ಯ ತಪಾಸಣಾ ವ್ಯವಸ್ಥೆಯನ್ನು ಕೈಗೊಳ್ಳುವುದು. ಕೆಲಸದ ಸ್ಥಳದಲ್ಲಿ ಪ್ರಥಮ ಚಿಕಿತ್ಸಾ ಸೌಲಭ್ಯಗಳನ್ನು ಕಡ್ಡಾಯವಾಗಿ ವ್ಯವಸ್ಥೆಗೊಳಿಸುವುದು.
3. ಕಾರ್ಮಿಕರಿಗೆ ಶುದ್ಧ ಕುಡಿಯುವ ನೀರು ಮತ್ತು ಆಹಾರ ಸೌಲಭ್ಯವನ್ನು ವ್ಯವಸ್ಥೆಗೊಳಿಸುವುದು.
4. ಬಿಸಿಲಿನಲ್ಲಿ ಕೆಲಸ ನಿರ್ವಹಿಸುವ ಕಾರ್ಮಿಕರಿಗೆ ಅಗತ್ಯ ನೆರಳಿನ ಸೌಲಭ್ಯ ಕಲ್ಪಸುವುದು.
5. ವಯಸ್ಸಾದ ಹಿರಿಯ ಕಾರ್ಮಿಕರಿಗೆ ಮತ್ತು ಮಹಿಳಾ ಕಾರ್ಮಿಕರಿಗೆ ವಿಶೇಷವಾಗಿ ಗರ್ಭೀಣಿಯರಿಗೆ/ ಬಾಣಂತಿಯರಿಗೆ ಅಗತ್ಯ ಸುರಕ್ಷಿತ ಕ್ರಮಗಳನ್ನು ಕೈಗೊಳ್ಳುವುದು.
6. ಕಾರ್ಮಿಕದ ಚಿಕ್ಕ ಮಕ್ಕಳಿಗೆ ಕೆಲಸದ ಸ್ಥಳದಲ್ಲಿ ಅಗತ್ಯ ಶಿಶುಪಾಲನಾ (ಅಡಿeಛಿhe) ವ್ಯವಸ್ಥೆ ಕೈಗೊಳ್ಳುವುದು,
7. ಅಂತರ ಜಿಲ್ಲೆ ಮತ್ತು ಅಂತರ ರಾಜ್ಯಗಳಿಂದ ಕೆಲಸಕ್ಕಾಗಿ ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಿರುವ ಕಾರ್ಮಿಕರಿಗೆ ನಿರ್ಮಾಣ ಕಾಮಗಾರಿಗಳ ಮಾಲಕರು, ಗುತ್ತಿಗೆದಾರರು/ ನಿರ್ವಾಹಕರು ಕಲ್ಪಿಸಿರುವ ತಾತ್ಕಾಲಿಕ ಕಾರ್ಮಿಕರ ಶೆಡ್‍ಗಳಲ್ಲಿ ಅಗತ್ಯ ಮೂಲಭೂತ ಸೌಲಭ್ಯಗಳು ದೊರೆಯುವಂತೆ ಕ್ರಮವಹಿಸುವುದು, (ಕುಡಿಯುವ ನೀರು, ಶೌಚಾಲಯ, ವಸತಿ)
8. ಕಾರ್ಮಿಕರಿಗೆ ವಿವಿಧ ಕಾರ್ಮಿಕ ಕಾಯ್ದೆಗಳನ್ವಯ ದೊರೆಯಬೇಕಾದ ಕನಿಷ್ಠವೇತನ, ಸಕಾಲದಲ್ಲಿ ವೇತನ ಪಾವತಿ, ಶಾಸನಬದ್ಧ ಕಟಾವಣೆಗಳಾದ ಹಾಗೂ ಇತರ ಸೌಲಭ್ಯಗಳನ್ನು ತಪ್ಪದೇ ಕಾರ್ಮಿಕರಿಗೆ ಕಾರ್ಮಿಕ ಕಾಯ್ದೆಗಳನ್ವಯ ನೀಡಬೇಕು.
ಈ ಎಲ್ಲ ಸೌಲಭ್ಯಗಳನ್ನು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಕಾರ್ಮಿಕರಿಗೆ ದೊರೆಯುವಂತೆ ಕ್ರಮವಹಿಸಲು ಸಂಬಂಧಿಸಿದವರಿಗೆ ಜಿಲ್ಲಾಧಿಕಾರಿಯವರು ನಿರ್ದೇಶನ ನೀಡಿದ್ದಾರೆ.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!

ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ,  ಅದು ಗಂಭೀರ ಆರೋಗ್ಯ ಅಪಾಯಗಳಿಗೆ…

22 hours ago

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…

22 hours ago

ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ

ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…

23 hours ago

ಜಲಜೀವನ್ ಮಿಷನ್ ವೇಗಕ್ಕೆ ಕಟ್ಟುನಿಟ್ಟಿನ ಗಡಿ : ಉಳಿದ ಕಾಮಗಾರಿಗಳು ತ್ವರಿತ ಪೂರ್ಣಗೊಳಿಸಿ

ಜಲಜೀವನ್‌ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…

23 hours ago

ಕೃಷಿಯ ಮೌನ ಆಕ್ರಂದನ | ಕಾಡಂಚಿನ ಅಡಿಕೆ ತೋಟಗಳ ಅಳಲು

ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…

23 hours ago

ಜಾಗತಿಕ ಒತ್ತಡ – ಗ್ರಾಮೀಣ ಜೀವನೋಪಾಯ | ಅಡಿಕೆ ಕುರಿತ ನಿಜವಾದ ಚರ್ಚೆ ಈಗ ಆರಂಭವಾಗಬೇಕು

ಭಾರತವು ಜಗತ್ತಿನ ಅತಿದೊಡ್ಡ ಅಡಿಕೆ ಉತ್ಪಾದಕ ರಾಷ್ಟ್ರವಾಗಿದ್ದು, ಜಾಗತಿಕ ಉತ್ಪಾದನೆಯ ಸುಮಾರು 63…

23 hours ago