Advertisement
ಸುದ್ದಿಗಳು

ಬೇಸಿಗೆ ಕುಡಿಯುವ ನೀರು ಸಮಸ್ಯೆ ಎದುರಾಗದಂತೆ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ

Share

ಮುಂಬರುವ ಬೇಸಿಗೆಯಲ್ಲಿ ಕುಡಿಯುವ ನೀರು ಪೂರೈಕೆಗೆ ಯಾವುದೇ ರೀತಿ ತೊಂದರೆಯಾಗದಂತೆ  ಅಗತ್ಯ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ  ದರ್ಶನ್ ಹೆಚ್ ವಿ   ಸೂಚಿಸಿದ್ದಾರೆ.

ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ  ನಡೆದ ಜಿಲ್ಲೆಯ ಕುಡಿಯುವ ನೀರಿನ ಸಮಗ್ರ ನಿರ್ವಹಣೆ ಕುರಿತು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯ ಎಲ್ಲಾ ಗ್ರಾಮ ಹಾಗೂ  ನಗರ ಸ್ಥಳೀಯ   ವಾರ್ಡುಗಳಲ್ಲಿ ಬೇಸಿಗೆಯಲ್ಲಿ ಕುಡಿಯುವ ನೀರು  ಪೂರೈಕೆಗೆ ಯಾವುದೇ ಅಡಚಣೆಯಾಗದಂತೆ  ಹಾಗೂ ನೀರಿನ ಕೊರತೆಯಾಗದಂತೆ ಎಲ್ಲಾ ಸ್ಥಳೀಯ ಸಂಸ್ಥೆಗಳಲ್ಲಿ  ತಕ್ಷಣವೇ ಯೋಜನೆ ರೂಪಿಸಿ ಸಿದ್ಧಗೊಂಡಿರಬೇಕು. ಲಭ್ಯವಿರುವ ನೀರಿನ ಮೂಲಗಳನ್ನು ಗುರುತಿಸಿ ಅಗತ್ಯ ಸಂದರ್ಭದಲ್ಲಿ ನೀರು ಪೂರೈಕೆ ಆಗುವಂತೆ  ಗಮನಹರಿಸಬೇಕು ಎಂದು ಹೇಳಿದರು.

ಜಿಲ್ಲೆಯ ಎಲ್ಲಾ 14 ನಗರ ಸ್ಥಳೀಯ ಸಂಸ್ಥೆಗಳು  ಮತ್ತು ಗ್ರಾಮ ಪಂಚಾಯತ್‍ಗಳಲ್ಲಿ ನೀರಿನ ಮೂಲ ವಿತರಣಾ ಜಾಲವನ್ನು  ಆಗ್ಗಿಂದಾಗೆ ಅಧಿಕಾರಿಗಳು ಖುದ್ದು ಮೇಲ್ವಿಚಾರಣೆ ನಡೆಸಬೇಕು. ಅವಶ್ಯಕತೆ ಇದ್ದಲ್ಲಿ ಮಾತ್ರ ನೀರು ಒದಗಿಸಲು ಟ್ಯಾಂಕರ್‍ಗಳನ್ನು ಬಳಸಿಕೊಳ್ಳುವಂತೆ ಜಿಲ್ಲಾಧಿಕಾರಿಗಳು ತಿಳಿಸಿದರು. ಸ್ಥಳೀಯ ಸಂಸ್ಥೆಗಳು ಬೇಸಿಗೆಯಲ್ಲಿ ನೀರು ಒದಗಿಸಲು ತಮ್ಮಲ್ಲಿ ಲಭ್ಯವಿರುವ  ಅನುದಾನ ಬಳಸಿಕೊಳ್ಳಬೇಕು ಎಂದರು.  ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ನೀರು ಪೂರೈಕೆ ಕುರಿತು ಮಾಹಿತಿ ಪಡೆದ ಜಿಲ್ಲಾಧಿಕಾರಿಗಳು,  ತುಂಬೆಯಿಂದ ನೇತ್ರಾವತಿ ನೀರು ಪೂರೈಕೆ ಜಾಲದಲ್ಲಿ ಕೆಲವೆಡೆ ಅನಧಿಕೃತ ಸಂಪರ್ಕ ಪಡೆದಿರುವ ಬಗ್ಗೆ ಕೂಡಲೇ ಕ್ರಮ ವಹಿಸಿ,  ಸಂಬಂಧಿಸಿದ ಗ್ರಾಮ ಪಂಚಾಯತ್‍ಗಳೊಂದಿಗೆ ಒಪ್ಪಂದ ಮಾಡಿಕೊಂಡು ಶುಲ್ಕ ಪಡೆಯುವಂತೆ ತಿಳಿಸಿದರು.
ತುಂಬೆ ನೇತ್ರಾವತಿ ಡ್ಯಾಮ್ ನಲ್ಲಿ ಮಹಾನಗರ ಪಾಲಿಕೆ ಸೇರಿದಂತೆ  ವಿವಿಧ ಇಲಾಖೆ ಹಾಗೂ ಕೈಗಾರಿಕೆಗಳ ಒಟ್ಟು 7 ಜಾಕ್‍ವೆಲ್‍ಗಳು  ಕಾರ್ಯನಿರ್ವಹಿಸುತ್ತಿದೆ ಎಂದು  ನಗರಪಾಲಿಕೆ ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು. ಪ್ರಸ್ತುತ ನೇತ್ರಾವತಿ ಡ್ಯಾಮ್‍ನಲ್ಲಿ ಲಭ್ಯವಿರುವ ನೀರು ಮುಂದಿನ ಬೇಸಿಗೆಯಲ್ಲಿ   ಕುಡಿಯುವ ನೀರಿನ ನಿರ್ವಹಣೆಗೆ  ಈಗಿನ ಅಂದಾಜಿನಂತೆ ಸಾಕಾಗಲಿದೆ  ಎಂದು ತಿಳಿಸಿದರು.  ಕುಡಿಯುವ ನೀರಿನ ಬಗ್ಗೆ ಸಾರ್ವಜನಿಕರಿಂದ ಯಾವುದೇ ದೂರುಗಳು ಬರದಂತೆ  ನಗರ ಸ್ಥಳೀಯ ಸಂಸ್ಥೆ ಹಾಗೂ ಗ್ರಾಮ ಪಂಚಾಯತ್‍ಗಳು ಗಮನಹರಿಸಬೇಕು ಎಂದು ಜಿಲ್ಲಾಧಿಕಾರಿಗಳು ಹೇಳಿದರು. ಸಭೆಗೆ ಸಮರ್ಪಕ ಮಾಹಿತಿ ಒದಗಿಸದ ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆಯ ಅಧಿಕಾರಿಗಳ ವಿರುದ್ಧ ಜಿಲ್ಲಾಧಿಕಾರಿಗಳು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ರಾಜು ಕೆ, ಉಪ ಅರಣ್ಯ ಸಂರಕ್ಷಣಾಧಿಕಾರಿ    ಆ್ಯಂಟನಿ ಮರಿಯಪ್ಪ, ಮಂಗಳೂರು ಉಪವಿಭಾಗಾಧಿಕಾರಿ ಮೀನಾಕ್ಷಿ ಆರ್ಯ  ಮತ್ತಿತರರು ಉಪಸ್ಥಿತರಿದ್ದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

6 hours ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

6 hours ago

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುತ್ತಿದೆಯೇ? – ಹೊಸ ಅಧ್ಯಯನದ ಎಚ್ಚರಿಕೆ

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…

6 hours ago

ಹವಾಮಾನ ಬದಲಾವಣೆಯಿಂದ ರೈತರ ರಕ್ಷಣೆಗೆ ಸರ್ಕಾರದ ತಂತ್ರ – 310 ಜಿಲ್ಲೆಗಳು ಅಪಾಯದಲ್ಲಿ, 2,661 ಸಹಿಷ್ಣು ತಳಿಗಳ ಅಭಿವೃದ್ಧಿ

ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…

16 hours ago

ಗುಟ್ಕಾ ನಿಷೇಧದ ಹೆಸರಿನಲ್ಲಿ ಅಡಿಕೆ ಬೆಳೆಗಾರರಿಗೆ ತೊಂದರೆ ಆಗದಂತೆ ಸರ್ಕಾರ ಸ್ಪಷ್ಟ ಮಾರ್ಗಸೂಚಿ ನೀಡಲಿ

ಗುಟ್ಕಾ ಮತ್ತು ಪಾನ್‌ಮಸಾಲಾ ನಿಷೇಧವನ್ನು ಅಡಿಕೆ ನಿಷೇಧದೊಂದಿಗೆ ಸಂಬಂಧಿಸಬಾರದು, ಅಡಿಕೆ ಬೆಳೆಗಾರರು ಗಾಬರಿಯಾಗಬಾರದು…

16 hours ago

ತಂಬಾಕು ನಿಷೇಧ ಜಾರಿ: ಅಡಿಕೆ ಬೆಳೆಗಾರರ ಹಿತ ಕಾಪಾಡಲು ಸ್ಪಷ್ಟ ಚೌಕಟ್ಟು ರೂಪಿಸಿ – ಕ್ಯಾಂಪ್ಕೊ

ತಂಬಾಕು ಮತ್ತು ನಿಕೋಟಿನ್ ಅಂಶವುಳ್ಳ ಉತ್ಪನ್ನಗಳ ನಿಷೇಧ ಜಾರಿಯಲ್ಲಿ ಅಡಿಕೆ ಬೆಳೆಗಾರರು ಹಾಗೂ…

17 hours ago