Advertisement
ಸುದ್ದಿಗಳು

ತೋರಿಕೆಗೆ ನನ್ನತ್ರ ಗಿಡ ನೆಡಸಬೇಡಿ : ಅರಣ್ಯಾಧಿಕಾರಿಗಳಿಗೆ ಕ್ಲಾಸ್ ತಗೊಂಡ ಡಿಸಿಎಂ

Share

ಇಂದು ವಿಶ್ವ ಪರಿಸರ ದಿನಾಚರಣೆ. ಸಾಮಾನ್ಯಾಯವಾಗಿ ಮಂತ್ರಿಗಳನ್ನು ಕರೆಸಿ ಅನೇಕ ಸಂಘ ಸಂಸ್ಥೆಗಳು, ಕಂಪನಿಗಳು, ಅಡಳಿತ ಮಂಡಳಿಗಳು ಗಿಡಿ ನೆಡುವ ಕಾರ್ಯಕ್ರಮ ಮಾಡಿಸಿ, ಪೋಟೋ ತೆಗೆಯಿಸಿ ಕಳುಹಿಸುತ್ತಾರೆ. ಮತ್ತೆ ಈ ಬಗ್ಗೆ ನೆನಪಾಗೋದು ಮುಂದಿನ ವರ್ಷದ ಪರಿಸರ ದಿನದಂದು.  ಮಂತ್ರಿಗಳು ಅವರು ಹೇಳಿದಂತೆ ಗಿಡ ನೆಟ್ಟು ಒಂದು ಫೋಸ್ ಕೊಟ್ಟು ಹೋಗುತ್ತಾರೆ. ಆದರೆ ಈ ಬಾರಿ ಡಿಸಿಎಂ ಡಿ ಕೆ ಶಿವಕುಮಾರ್ ಮೂಲಕ ಪರಿಸರ ಕಾರ್ಯಕ್ರಮ ಮಾಡಿಸಿದ  ಅರಣ್ಯಾಧಿಕಾರಿಗಳಿಗೆ ಉಪಮುಖ್ಯಮಂತ್ರಿಗಳು ಚೆನ್ನಾಗೆ ಕ್ಲಾಸ್ ತೆಗೆದುಕೊಂಡಿದ್ದಾರೆ.

ಇಂದು ಬ್ಯಾಟರಾಯನಪುರ ವಿಧಾನ ಸಭಾ ಕ್ಷೇತ್ರದ ಥಣಿಸಂದ್ರ ರಾಚೇನಹಳ್ಳಿಗೆ ಕೆರೆ ಬಳಿ ಬಿಬಿಎಂಪಿಯಿಂದ ಗಿಡ ನೆಡುವ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಪಾಲಿಕೆ ಅಧಿಕಾರಿಗಳು ಪಾರ್ಕ್ ಮಧ್ಯದಲ್ಲಿ ಗಿಡ ನೆಡುವ ಕಾರ್ಯಕ್ರಮ ಹಮ್ಮಿಕೊಂಡಿದ್ದರು. ಇದರಿಂದ ಸಿಟ್ಟಿಗೆದ್ದ ಡಿಕೆಶಿ, ಬಿಬಿಎಂಪಿ ಮಹಿಳಾ ಅಧಿಕಾರಿಗೆ ಬೈದರು. ಕಾಮನ್ ಸೆನ್ಸ್ ಇರಬೇಕು ಎಲ್ಲಿ ಗಿಡ ನಡಬೇಕು ಅಂತ ಹೇಳಿದರು. ಪಾರ್ಕ್ ನಲ್ಲಿ ಗಿಡ ನಡುವ ಕಾರ್ಯಕ್ರಮ ಮಾಡಿದ್ದಕ್ಕೆ ಡಿಕೆಶಿ ಬಳಿಕ ನಡೆದ ತಮ್ಮ ಭಾಷಣದಲ್ಲೂ ಅಸಮಾಧಾನ ವ್ಯಕ್ತಪಡಿಸಿದರು.
ಪರಿಸರಕ್ಕೆ ನಾವು ಅಡ್ಜಸ್ಟ್ ಆಗಿಲ್ಲ, ಪರಿಸರವೇ ನಮಗೆ ಅಡ್ಜಸ್ಟ್ ಆಗಿದೆ. ಬಹಳ ಪ್ಯಾಷನ್ ನಿಂದ ಬೆಂಗಳೂರು ಅಭಿವೃದ್ಧಿ ಮಾಡಬೇಕು ಅನ್ನೋದು ನನ್ನ ಉದ್ದೇಶ ಎಂದರು. ಕೇವಲ ಫೋಟೋಗೆ ಪೋಸ್ ಕೊಡಲು ಗಿಡ ನೆಡುವುದು ನನಗೆ ಇಷ್ಟ ಇಲ್ಲ. ನಾವು ಮಾಡುವ ಕೆಲಸ ಶಾಶ್ವತವಾಗಿ ಇರಬೇಕು, ಹೊರತು ತೋರಿಕೆಗೆ ಇರಬಾರದು. ಮರ ಇರುವ ಕಡೆ ಗಿಡ ನೆಡಿಸುವುದಲ್ಲ, ಮರ ಇಲ್ಲದ ಕಡೆ ಗಿಡ ನೆಡಿಸಬೇಕು ಎಂದರು.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಜುಲೈನಲ್ಲಿ ದೇಶಾದ್ಯಂತ ಸಾಮಾನ್ಯಕ್ಕಿಂತ ಕಡಿಮೆ ಮಳೆ ಸಾಧ್ಯತೆ : ಐಎಂಡಿ ಎಚ್ಚರಿಕೆ

ಜುಲೈ ತಿಂಗಳಲ್ಲಿ ದೇಶದ ಬಹುತೇಕ ಭಾಗಗಳಲ್ಲಿ ಸಾಮಾನ್ಯಕ್ಕಿಂತ ಕಡಿಮೆ ಮಳೆಯಾಗುವ ಸಾಧ್ಯತೆ ಇದೆ…

40 minutes ago

ಕಾಪುವಿನಲ್ಲಿ ರಾಜ್ಯ ಸ್ಕೂಲ್ ಚೆಸ್ ಚಾಂಪಿಯನ್‌ಶಿಪ್ – 24 ಪ್ರತಿಭೆಗಳು ರಾಷ್ಟ್ರ ಮಟ್ಟಕ್ಕೆ ಆಯ್ಕೆ

ಕಾಪುವಿನಲ್ಲಿ ನಡೆದ 9ನೇ ಕರ್ನಾಟಕ ರಾಜ್ಯ ಸ್ಕೂಲ್ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 390 ಆಟಗಾರರು…

9 hours ago

ಭಾರೀ ಮಳೆ ಮುನ್ಸೂಚನೆ – ಕಾಸರಗೋಡು ಜಿಲ್ಲೆಯಲ್ಲಿ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಣೆ

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಕಾಸರಗೋಡು ಜಿಲ್ಲೆಯಲ್ಲಿ ಜುಲೈ 1ರಂದು ಎಲ್ಲಾ ಶಿಕ್ಷಣ…

9 hours ago

ಮಳೆ ಕೊರತೆ ಆತಂಕ – ಬೆಳೆ ಆಯ್ಕೆಯಲ್ಲಿ ಎಚ್ಚರಿಕೆ ವಹಿಸಿ – ಯಾದಗಿರಿ ರೈತರಿಗೆ ಕೃಷಿ ಇಲಾಖೆಯ ಮಹತ್ವದ ಸಲಹೆ

ಯಾದಗಿರಿ ಜಿಲ್ಲೆಯಲ್ಲಿ ಮಳೆ ಕೊರತೆಯ ಸಾಧ್ಯತೆಯಿರುವುದರಿಂದ ರೈತರು ಬೆಳೆ ಆಯ್ಕೆಯಲ್ಲಿ ಎಚ್ಚರಿಕೆ ವಹಿಸುವಂತೆ…

11 hours ago

ಮಲೆನಾಡು ಮತ್ತೆ ಮಳೆಯಲ್ಲಿ ಮಿಂದೆದ್ದಿದೆ…! ಮಳೆ ಬಂದರೆ ಶಿರಾಡಿ ಹೀಗಿರುತ್ತೆ…?

ಮಲೆನಾಡು ಮತ್ತು ಶಿರಾಡಿ ಘಾಟಿಯ ಮಳೆಗಾಲದ ಸೌಂದರ್ಯ ಪ್ರಕೃತಿಪ್ರಿಯರನ್ನು ಮಂತ್ರಮುಗ್ಧರನ್ನಾಗಿಸುತ್ತದೆ. ಆದರೆ ಈ…

11 hours ago

ಮಲೆನಾಡು ಸೇರಿದಂತೆ ಹಲವೆಡೆ ಮುಂಗಾರು ಮಳೆ ಚುರುಕು-ಕೃಷಿಗೆ ಹೊಸ ಚೈತನ್ಯ, ರೈತರಲ್ಲಿ ಖುಷಿ

ಒಂದು ತಿಂಗಳ ತಡದ ಬಳಿಕ ಮಲೆನಾಡು ಮತ್ತು ಕರಾವಳಿಯಲ್ಲಿ ಮುಂಗಾರು ಚುರುಕುಗೊಂಡಿದ್ದು, ರೈತರಲ್ಲಿ…

17 hours ago