Advertisement
MIRROR FOCUS

ಜನರಲ್ಲಿ ಭೀತಿ ಹುಟ್ಟಿಸಿದ ಮಾರಕ ಝಿಕಾ ವೈರಸ್‌ | ಕೇರಳ ನಂತರ ಚಿಕ್ಕಬಳ್ಳಾಪುರದಲ್ಲಿ ಪತ್ತೆ| ಆರೋಗ್ಯ ಇಲಾಖೆಯಿಂದ ಸರ್ವೆ ಕಾರ್ಯ ರ‍್ಯಾಂಡಮ್‌ ಚೆಕಪ್‌ |

Share

ಕಳೆದ ಎರಡು ವರ್ಷಗಳ ಹಿಂದೆ ಇಡೀ ವಿಶ್ವವನ್ನೇ ಬೆಚ್ಚಿ ಬೀಳಿಸಿದ್ದ ಕೊರೋನಾ ವೈರಸ್‌ ಹಾವಳಿ ಏನೋ ನಿಂತಿದೆ. ಆದರೆ ಅದರ ಭಯ ಇನ್ನೂ ಹಾಗೆ ಇದೆ. ಅದರ ವಿವಿಧ ರೂಪಾಂತರ ತಳಿಗಳು ಹಾಗೆ ಬಂದು ಜನರನ್ನು ಹೆದರಿಸಿ ಹೋಗುತ್ತಿದ್ದಾವೆ. ಕೆಲ ದಿನಗಳ ಹಿಂದೆಯಷ್ಟೇ ಕೇರಳದ ಕೋಝಿಕೋಡ್‌ನಲ್ಲಿ ಪತ್ತೆಯಾಗಿ ಸ್ಥಳೀಯರಲ್ಲಿ ಆತಂಕ ಮೂಡಿಸಿದ್ದ ಝಿಕಾ ವೈರಸ್‌ (Zika Virus) ಇದೀಗ ಚಿಕ್ಕಬಳ್ಳಾಪುರದಲ್ಲಿ (Chikkaballapur) ಪತ್ತೆಯಾಗಿದೆ. ಆರೋಗ್ಯ ಇಲಾಖೆ ಹೈಅಲರ್ಟ್‌ ಆಗಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ತಲಕಾಯಲಬೆಟ್ಟ ಗ್ರಾಮದಲ್ಲಿ ಸೊಳ್ಳೆಗಳನ್ನ ಪರೀಕ್ಷೆಗೆ ಒಳಪಡಿಸಿದಾಗ ಸೊಳ್ಳೆಗಳಲ್ಲಿ ಝಿಕಾ ವೈರಸ್ ಇರೋದು ಧೃಡವಾಗಿದೆ.

ಹೀಗಾಗಿ ತಲಕಾಯಲಬೆಟ್ಟ ಗ್ರಾಮ ಸೇರಿದಂತೆ ಸುತ್ತಮುತ್ತಲ 5 ಕಿಮೀ ವ್ಯಾಪ್ತಿಯಲ್ಲಿ ಆರೋಗ್ಯ ಇಲಾಖೆಯಿಂದ (Health  Department) ಸರ್ವೆ ಕಾರ್ಯ ರ‍್ಯಾಂಡಮ್‌ ಚೆಕಪ್‌ ಮಾಡಲಾಗುತ್ತಿದೆ. ತಲಕಾಯಲಬೆಟ್ಟ, ದಿಬ್ಬೂರಹಳ್ಳಿ, ವಡ್ಡಹಳ್ಳಿ, ಬಚ್ಚಹಳ್ಳಿ ಗ್ರಾಮದ 880 ಮನೆಗಳಲ್ಲಿ ಸರಿಸುಮಾರು 4,800 ಜನರ ಮೇಲೆ ಆರೋಗ್ಯ ಇಲಾಖೆ ನಿಗಾವಹಿಸಿದೆ.  ಈಗಾಗಲೇ 30 ಮಂದಿ ಗರ್ಭಿಣಿಯರು ಹಾಗೂ ಜ್ವರದಿಂದ ಬಳಲುತ್ತಿರುವ 3 ಮಂದಿಯ ರಕ್ತ ಪರೀಕ್ಷೆ ಮಾಡಲಾಗಿದೆ. ಇನ್ನೂ ಮುಂಜಾಗ್ರತಾ ಕ್ರಮವಾಗಿ ಜ್ವರದಿಂದ ಬಳಲುತ್ತಿರುವವರ ಮೇಲೆ ನಿಗಾವಹಿಸಲಾಗಿದೆಯಾದರೂ ಝಿಕಾ ವೈರಸ್ ಸೋಂಕು ಹುಟ್ಟುವ ಮಕ್ಕಳ ಅಂಗವೈಕಲ್ಯಕ್ಕೆ ತುತ್ತಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಗರ್ಭಿಣಿಯರ ಮೇಲೂ ನಿಗಾ ವಹಿಸಲಾಗಿದೆ. ಇದುವರೆಗೂ ಮನುಷ್ಯರಲ್ಲಿ ಝಿಕಾ ವೈರಸ್ ಪತ್ತೆಯಾಗಿಲ್ಲ. ಈ ಬಗ್ಗೆ ಚಿಕ್ಕಬಳ್ಳಾಪುರ ಜಿಲ್ಲಾ ಆರೋಗ್ಯಾಧಿಕಾರಿ ಮಹೇಶ್ ಕುಮಾರ್ ಝಿಕಾ ವೈರಸ್ ಪತ್ತೆಯಾಗಿರುವ ಬಗ್ಗೆ ಸ್ಪಷ್ಟಪಡಿಸಿದ್ದಾರೆ.

ಝಿಕಾ ವೈರಸ್ ರೋಗ ಲಕ್ಷಣಗಳು: ಜ್ವರ, ತಲೆನೋವು, ತುರಿಕೆ, ಕಣ್ಣಿನ ಬಣ್ಣ ಬದಲಾವಣೆ, ಮೈ ಕೈ ನೋವು.

The Zika virus, which was detected in Kozhikode, Kerala a few days ago and caused concern among the locals, has now been detected in Chikkaballapur. The health department is on high alert. When mosquitoes were tested in Talakayalabetta village of Shidlaghatta taluk of Chikkaballapur district, the presence of Zika virus was confirmed in mosquitoes.
- ಅಂತರ್ಜಾಲ ಮಾಹಿತಿ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

18 hours ago

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…

1 day ago

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

2 days ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

2 days ago

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುತ್ತಿದೆಯೇ? – ಹೊಸ ಅಧ್ಯಯನದ ಎಚ್ಚರಿಕೆ

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…

2 days ago

ಹವಾಮಾನ ಬದಲಾವಣೆಯಿಂದ ರೈತರ ರಕ್ಷಣೆಗೆ ಸರ್ಕಾರದ ತಂತ್ರ – 310 ಜಿಲ್ಲೆಗಳು ಅಪಾಯದಲ್ಲಿ, 2,661 ಸಹಿಷ್ಣು ತಳಿಗಳ ಅಭಿವೃದ್ಧಿ

ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…

2 days ago