Advertisement
MIRROR FOCUS

ಜನರಲ್ಲಿ ಭೀತಿ ಹುಟ್ಟಿಸಿದ ಮಾರಕ ಝಿಕಾ ವೈರಸ್‌ | ಕೇರಳ ನಂತರ ಚಿಕ್ಕಬಳ್ಳಾಪುರದಲ್ಲಿ ಪತ್ತೆ| ಆರೋಗ್ಯ ಇಲಾಖೆಯಿಂದ ಸರ್ವೆ ಕಾರ್ಯ ರ‍್ಯಾಂಡಮ್‌ ಚೆಕಪ್‌ |

Share

ಕಳೆದ ಎರಡು ವರ್ಷಗಳ ಹಿಂದೆ ಇಡೀ ವಿಶ್ವವನ್ನೇ ಬೆಚ್ಚಿ ಬೀಳಿಸಿದ್ದ ಕೊರೋನಾ ವೈರಸ್‌ ಹಾವಳಿ ಏನೋ ನಿಂತಿದೆ. ಆದರೆ ಅದರ ಭಯ ಇನ್ನೂ ಹಾಗೆ ಇದೆ. ಅದರ ವಿವಿಧ ರೂಪಾಂತರ ತಳಿಗಳು ಹಾಗೆ ಬಂದು ಜನರನ್ನು ಹೆದರಿಸಿ ಹೋಗುತ್ತಿದ್ದಾವೆ. ಕೆಲ ದಿನಗಳ ಹಿಂದೆಯಷ್ಟೇ ಕೇರಳದ ಕೋಝಿಕೋಡ್‌ನಲ್ಲಿ ಪತ್ತೆಯಾಗಿ ಸ್ಥಳೀಯರಲ್ಲಿ ಆತಂಕ ಮೂಡಿಸಿದ್ದ ಝಿಕಾ ವೈರಸ್‌ (Zika Virus) ಇದೀಗ ಚಿಕ್ಕಬಳ್ಳಾಪುರದಲ್ಲಿ (Chikkaballapur) ಪತ್ತೆಯಾಗಿದೆ. ಆರೋಗ್ಯ ಇಲಾಖೆ ಹೈಅಲರ್ಟ್‌ ಆಗಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ತಲಕಾಯಲಬೆಟ್ಟ ಗ್ರಾಮದಲ್ಲಿ ಸೊಳ್ಳೆಗಳನ್ನ ಪರೀಕ್ಷೆಗೆ ಒಳಪಡಿಸಿದಾಗ ಸೊಳ್ಳೆಗಳಲ್ಲಿ ಝಿಕಾ ವೈರಸ್ ಇರೋದು ಧೃಡವಾಗಿದೆ.

ಹೀಗಾಗಿ ತಲಕಾಯಲಬೆಟ್ಟ ಗ್ರಾಮ ಸೇರಿದಂತೆ ಸುತ್ತಮುತ್ತಲ 5 ಕಿಮೀ ವ್ಯಾಪ್ತಿಯಲ್ಲಿ ಆರೋಗ್ಯ ಇಲಾಖೆಯಿಂದ (Health  Department) ಸರ್ವೆ ಕಾರ್ಯ ರ‍್ಯಾಂಡಮ್‌ ಚೆಕಪ್‌ ಮಾಡಲಾಗುತ್ತಿದೆ. ತಲಕಾಯಲಬೆಟ್ಟ, ದಿಬ್ಬೂರಹಳ್ಳಿ, ವಡ್ಡಹಳ್ಳಿ, ಬಚ್ಚಹಳ್ಳಿ ಗ್ರಾಮದ 880 ಮನೆಗಳಲ್ಲಿ ಸರಿಸುಮಾರು 4,800 ಜನರ ಮೇಲೆ ಆರೋಗ್ಯ ಇಲಾಖೆ ನಿಗಾವಹಿಸಿದೆ.  ಈಗಾಗಲೇ 30 ಮಂದಿ ಗರ್ಭಿಣಿಯರು ಹಾಗೂ ಜ್ವರದಿಂದ ಬಳಲುತ್ತಿರುವ 3 ಮಂದಿಯ ರಕ್ತ ಪರೀಕ್ಷೆ ಮಾಡಲಾಗಿದೆ. ಇನ್ನೂ ಮುಂಜಾಗ್ರತಾ ಕ್ರಮವಾಗಿ ಜ್ವರದಿಂದ ಬಳಲುತ್ತಿರುವವರ ಮೇಲೆ ನಿಗಾವಹಿಸಲಾಗಿದೆಯಾದರೂ ಝಿಕಾ ವೈರಸ್ ಸೋಂಕು ಹುಟ್ಟುವ ಮಕ್ಕಳ ಅಂಗವೈಕಲ್ಯಕ್ಕೆ ತುತ್ತಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಗರ್ಭಿಣಿಯರ ಮೇಲೂ ನಿಗಾ ವಹಿಸಲಾಗಿದೆ. ಇದುವರೆಗೂ ಮನುಷ್ಯರಲ್ಲಿ ಝಿಕಾ ವೈರಸ್ ಪತ್ತೆಯಾಗಿಲ್ಲ. ಈ ಬಗ್ಗೆ ಚಿಕ್ಕಬಳ್ಳಾಪುರ ಜಿಲ್ಲಾ ಆರೋಗ್ಯಾಧಿಕಾರಿ ಮಹೇಶ್ ಕುಮಾರ್ ಝಿಕಾ ವೈರಸ್ ಪತ್ತೆಯಾಗಿರುವ ಬಗ್ಗೆ ಸ್ಪಷ್ಟಪಡಿಸಿದ್ದಾರೆ.

ಝಿಕಾ ವೈರಸ್ ರೋಗ ಲಕ್ಷಣಗಳು: ಜ್ವರ, ತಲೆನೋವು, ತುರಿಕೆ, ಕಣ್ಣಿನ ಬಣ್ಣ ಬದಲಾವಣೆ, ಮೈ ಕೈ ನೋವು.

The Zika virus, which was detected in Kozhikode, Kerala a few days ago and caused concern among the locals, has now been detected in Chikkaballapur. The health department is on high alert. When mosquitoes were tested in Talakayalabetta village of Shidlaghatta taluk of Chikkaballapur district, the presence of Zika virus was confirmed in mosquitoes.
- ಅಂತರ್ಜಾಲ ಮಾಹಿತಿ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

7 hours ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

16 hours ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

17 hours ago

ರಸಗೊಬ್ಬರದಲ್ಲಿ ಆತ್ಮನಿರ್ಭರತೆ ಅನಿವಾರ್ಯ – ಸಂಕಷ್ಟದಿಂದ ಅವಕಾಶದತ್ತ ಭಾರತ ಸಾಗಬೇಕಿದೆ

ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…

21 hours ago

ಹವಾಮಾನ ವರದಿ | 24-07-2026 | ಕರಾವಳಿಯಲ್ಲಿ ಮುಂದುವರಿಯುವ ಮಳೆ, ಜುಲೈ ಅಂತ್ಯದ ವೇಳೆಗೆ ಮುಂಗಾರು ಹೇಗೆ..?

ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…

21 hours ago