ಕೆರೆಯಲ್ಲಿ ಸಾಕಿದ್ದ ಮೀನುಗಳ ಮಾರಣಹೋಮ | ಬೃಹತ್‌ ಗಾತ್ರ ಮೀನು ಸಾವು | ಅಪಾರ ನಷ್ಟ |

May 16, 2024
5:43 PM

ದಾವಣಗೆರೆ(Davanagere) ತಾಲೂಕಿನ ಬೇತೂರು ಗ್ರಾಮದಲ್ಲಿರುವ  ಕೆರೆಯಲ್ಲಿ(Lake) ಮೀನುಗಳ(Fish) ಮಾರಣಹೋಮವಾಗಿದೆ(Dead). ಈ ಕೆರೆಯಲ್ಲಿ 3 ವರ್ಷಗಳ ಹಿಂದೆ ಗ್ರಾಮ ಪಂಚಾಯಿತಿಯಿಂದ ಟೆಂಡರ್(Tender)​​​​​ ಪಡೆದು ನಾಲ್ಕು ಲಕ್ಷಕ್ಕೂ ಅಧಿಕ ಮೀನಿನ ಮರಿಗಳನ್ನು ಬಿಟ್ಟು ಪೋಷಣೆ ಮಾಡಿ, ಮಾರುಕಟ್ಟೆಯಲ್ಲಿ(Market) ಮಾರಾಟ ಮಾಡಲಾಗುತ್ತಿತ್ತು. ಆದರೆ ಈಗ ಲಕ್ಷಾಂತರ ಮತ್ಸ್ಯಗಳು ಸಾವನ್ನಪ್ಪಿದ್ದು, ಟೆಂಡರ್​​​​ ಪಡೆದವರಿಗೆ ನಷ್ಟವಾಗಿದೆ. ಕಿಡಿಗೇಡಿಗಳ್ಯಾರೋ ಕೆರೆಗೆ ವಿಷ ಹಾಕಿದ್ದು ಮೀನುಗಳು ಸಾವನ್ನಪ್ಪಿದೆ ಎಂದು ಸ್ಥಳೀಯರು ಆರೋಪ ಮಾಡಿದ್ದಾರೆ.

Advertisement
Advertisement
Advertisement
Advertisement

‘ಲಕ್ಷ್ಮಿ ವೆಂಕಟೇಶ್ವರ ಮೀನು ಉತ್ಪಾದಕ, ಮಾರಾಟ ಮತ್ತು ಸಂಸ್ಕರಣ ಸಹಾಯಕ ಸಂಘ’ದಿಂದ ಮಂಜುನಾಥ್, ಸಿದ್ದೇಶ್, ಹನುಮಂತ ಎಂಬುವರು ಗ್ರಾಮಪಂಚಾಯತ್​​ ಮುಖೇನಾ ಟೆಂಡರ್ ಪಡೆದು ಮೀನು ಸಾಕಾಣಿಕೆ ಮಾಡುತ್ತಿದ್ದರು. ಈಗಾಗಲೇ ಮೀನುಗಳನ್ನು ಬಲೆ ಹಾಕಿ ಮಾರುಕಟ್ಟೆಗೆ ಮಾರಾಟ ಮಾಡಲಾಗುತ್ತಿತ್ತು. ಅಲ್ಲದೆ ಕೆರೆಯಲ್ಲಿ ಒಂದೊಂದು ಮೀನು 5 ರಿಂದ 10 ಕೆಜಿ ಇದ್ದು ಒಳ್ಳೆ ಬೆಲೆಗೆ ಮಾರಾಟ ಆಗುತಿತ್ತು. ಮೀನಿನ ಗಾತ್ರ ಕಂಡು ಕಿಡಿಗೇಡಿಗಳು ರಾತ್ರಿ ಸಮಯದಲ್ಲಿ ಕಳ್ಳತನದಿಂದ ಮೀನು ಹಿಡಿಯುತ್ತಿದ್ದರು. ಹೀಗಾಗಿ ಮೀನುಗಳ ರಕ್ಷಣೆಗೆ ಟೆಂಡರ್​ ಪಡೆದವರು ಕೆರೆ ಬಳಿ ಕಾಯುತ್ತಿದ್ದರು. ಇದರಿಂದ ಮೀನು ಸಿಗದೆ ಇದ್ದಾಗ ಕೆಲ ಖದೀಮರು ಕೆರೆಗೆ ವಿಷ ಹಾಕಿರಬಹುದೆಂದು ಗ್ರಾಮಸ್ಥರು ಆರೋಪ ಮಾಡುತ್ತಿದ್ದಾರೆ.

Advertisement
ಮೃತ ಮೀನುಗಳು

ಕೆರೆಯಲ್ಲಿ ಸಣ್ಣ ಮೀನುಗಳಿಗಿಂತಲೂ ದೊಡ್ಡ ಗಾತ್ರದ ಮೀನುಗಳೇ ಸಾವನ್ನಪ್ಪಿರುವುದು ಮೀನುಗಾರರ ಆಕ್ರೋಶಕ್ಕೆ ಕಾರಣವಾಗಿದೆ. ಇಲ್ಲಿತನಕ ಒಟ್ಟು 1-2 ಲಕ್ಷ ಮೀನುಗಳು ಸತ್ತಿರಬಹುದೆಂದು ಅಂದಾಜಿಸಲಾಗಿದೆ. ಮೀನುಗಳ ಸಾವಿಗೆ ಕಾರಣರಾದವರನ್ನು ಪತ್ತೆ ಹಚ್ಚುವಂತೆ ಒತ್ತಾಯಿಸಿದ್ದಾರೆ. ಹಾಗೇ ಮೀನುಗಾರಿಕೆ ಇಲಾಖೆ ಅಧಿಕಾರಿಗಳು ಇತ್ತ ಗಮನ ಹರಿಸಿ ಪರಿಹಾರ ನೀಡುವಂತೆ ಮನವಿ ಮಾಡಿದ್ದಾರೆ.

ಮೀನುಗಳ ಮಾರಣಹೋಮ

ಮೂಲ : ಅಂತರ್ಜಾಲ ಮಾಹಿತಿ

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 22.10.2024 | ರಾಜ್ಯದಲ್ಲಿ ಸಾಮಾನ್ಯ ಮಳೆ ಮುಂದುವರಿಕೆ | ಅ.25ರಿಂದ ಮಳೆ ಕಡಿಮೆ ಸಾಧ್ಯತೆ| ಅ.24ರಂದು ಒಡಿಸ್ಸಾ ಪಶ್ಚಿಮ ಬಂಗಾಳ ಕರಾವಳಿಗೆ ಡಾನಾ ಚಂಡಮಾರುತ
October 22, 2024
12:34 PM
by: ಸಾಯಿಶೇಖರ್ ಕರಿಕಳ
ಚಿಕ್ಕಮಗಳೂರಿನಲ್ಲಿ ಭಾರೀ ಮಳೆ | ಪ್ರವಾಸ ಮುಂದೂಡಲು ಜಿಲ್ಲಾಡಳಿತ ಸೂಚನೆ |
October 22, 2024
7:29 AM
by: ದ ರೂರಲ್ ಮಿರರ್.ಕಾಂ
ಬೆಂಗಳೂರಿನಲ್ಲಿ ಮತ್ತೆ ಮಳೆಯ ಅಬ್ಬರ | ಸಿಲಿಕಾನ್‌ ಸಿಟಿಯ ಎಲ್ಲೆಲ್ಲೂ ನೀರು..! | ಇಂದು ಕೂಡಾ ಮಳೆ ಸಾಧ್ಯತೆ |
October 22, 2024
7:13 AM
by: The Rural Mirror ಸುದ್ದಿಜಾಲ
 ಕೋಲಾರದಲ್ಲಿ ಪಶು ಸಂಜೀವಿನಿ ಯೋಜನೆ ಅನುಷ್ಠಾನ | ಪಶು ಸಖಿಯರಿಗೆ ತರಬೇತಿ |
October 22, 2024
6:42 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror