Advertisement
MIRROR FOCUS

ಕೆರೆಯಲ್ಲಿ ಸಾಕಿದ್ದ ಮೀನುಗಳ ಮಾರಣಹೋಮ | ಬೃಹತ್‌ ಗಾತ್ರ ಮೀನು ಸಾವು | ಅಪಾರ ನಷ್ಟ |

Share

ದಾವಣಗೆರೆ(Davanagere) ತಾಲೂಕಿನ ಬೇತೂರು ಗ್ರಾಮದಲ್ಲಿರುವ  ಕೆರೆಯಲ್ಲಿ(Lake) ಮೀನುಗಳ(Fish) ಮಾರಣಹೋಮವಾಗಿದೆ(Dead). ಈ ಕೆರೆಯಲ್ಲಿ 3 ವರ್ಷಗಳ ಹಿಂದೆ ಗ್ರಾಮ ಪಂಚಾಯಿತಿಯಿಂದ ಟೆಂಡರ್(Tender)​​​​​ ಪಡೆದು ನಾಲ್ಕು ಲಕ್ಷಕ್ಕೂ ಅಧಿಕ ಮೀನಿನ ಮರಿಗಳನ್ನು ಬಿಟ್ಟು ಪೋಷಣೆ ಮಾಡಿ, ಮಾರುಕಟ್ಟೆಯಲ್ಲಿ(Market) ಮಾರಾಟ ಮಾಡಲಾಗುತ್ತಿತ್ತು. ಆದರೆ ಈಗ ಲಕ್ಷಾಂತರ ಮತ್ಸ್ಯಗಳು ಸಾವನ್ನಪ್ಪಿದ್ದು, ಟೆಂಡರ್​​​​ ಪಡೆದವರಿಗೆ ನಷ್ಟವಾಗಿದೆ. ಕಿಡಿಗೇಡಿಗಳ್ಯಾರೋ ಕೆರೆಗೆ ವಿಷ ಹಾಕಿದ್ದು ಮೀನುಗಳು ಸಾವನ್ನಪ್ಪಿದೆ ಎಂದು ಸ್ಥಳೀಯರು ಆರೋಪ ಮಾಡಿದ್ದಾರೆ.

Advertisement
Advertisement
Advertisement
Advertisement

‘ಲಕ್ಷ್ಮಿ ವೆಂಕಟೇಶ್ವರ ಮೀನು ಉತ್ಪಾದಕ, ಮಾರಾಟ ಮತ್ತು ಸಂಸ್ಕರಣ ಸಹಾಯಕ ಸಂಘ’ದಿಂದ ಮಂಜುನಾಥ್, ಸಿದ್ದೇಶ್, ಹನುಮಂತ ಎಂಬುವರು ಗ್ರಾಮಪಂಚಾಯತ್​​ ಮುಖೇನಾ ಟೆಂಡರ್ ಪಡೆದು ಮೀನು ಸಾಕಾಣಿಕೆ ಮಾಡುತ್ತಿದ್ದರು. ಈಗಾಗಲೇ ಮೀನುಗಳನ್ನು ಬಲೆ ಹಾಕಿ ಮಾರುಕಟ್ಟೆಗೆ ಮಾರಾಟ ಮಾಡಲಾಗುತ್ತಿತ್ತು. ಅಲ್ಲದೆ ಕೆರೆಯಲ್ಲಿ ಒಂದೊಂದು ಮೀನು 5 ರಿಂದ 10 ಕೆಜಿ ಇದ್ದು ಒಳ್ಳೆ ಬೆಲೆಗೆ ಮಾರಾಟ ಆಗುತಿತ್ತು. ಮೀನಿನ ಗಾತ್ರ ಕಂಡು ಕಿಡಿಗೇಡಿಗಳು ರಾತ್ರಿ ಸಮಯದಲ್ಲಿ ಕಳ್ಳತನದಿಂದ ಮೀನು ಹಿಡಿಯುತ್ತಿದ್ದರು. ಹೀಗಾಗಿ ಮೀನುಗಳ ರಕ್ಷಣೆಗೆ ಟೆಂಡರ್​ ಪಡೆದವರು ಕೆರೆ ಬಳಿ ಕಾಯುತ್ತಿದ್ದರು. ಇದರಿಂದ ಮೀನು ಸಿಗದೆ ಇದ್ದಾಗ ಕೆಲ ಖದೀಮರು ಕೆರೆಗೆ ವಿಷ ಹಾಕಿರಬಹುದೆಂದು ಗ್ರಾಮಸ್ಥರು ಆರೋಪ ಮಾಡುತ್ತಿದ್ದಾರೆ.

Advertisement

ಕೆರೆಯಲ್ಲಿ ಸಣ್ಣ ಮೀನುಗಳಿಗಿಂತಲೂ ದೊಡ್ಡ ಗಾತ್ರದ ಮೀನುಗಳೇ ಸಾವನ್ನಪ್ಪಿರುವುದು ಮೀನುಗಾರರ ಆಕ್ರೋಶಕ್ಕೆ ಕಾರಣವಾಗಿದೆ. ಇಲ್ಲಿತನಕ ಒಟ್ಟು 1-2 ಲಕ್ಷ ಮೀನುಗಳು ಸತ್ತಿರಬಹುದೆಂದು ಅಂದಾಜಿಸಲಾಗಿದೆ. ಮೀನುಗಳ ಸಾವಿಗೆ ಕಾರಣರಾದವರನ್ನು ಪತ್ತೆ ಹಚ್ಚುವಂತೆ ಒತ್ತಾಯಿಸಿದ್ದಾರೆ. ಹಾಗೇ ಮೀನುಗಾರಿಕೆ ಇಲಾಖೆ ಅಧಿಕಾರಿಗಳು ಇತ್ತ ಗಮನ ಹರಿಸಿ ಪರಿಹಾರ ನೀಡುವಂತೆ ಮನವಿ ಮಾಡಿದ್ದಾರೆ.

ಮೂಲ : ಅಂತರ್ಜಾಲ ಮಾಹಿತಿ

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 23-02-2024 | ಇಂದು ಕೂಡಾ ಮೋಡ ಹಾಗೂ ಕೆಲವು ಕಡೆ ತುಂತುರು ಮಳೆ |

ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…

17 hours ago

ಹವಾಮಾನ ವರದಿ | 21-02-2025 | ಮೋಡದ ವಾತಾವರಣ | ಇಂದೂ ಕೆಲವು ಕಡೆ ಮಳೆ ಸಾಧ್ಯತೆ |

ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…

3 days ago

ಈ ಬಾರಿ ವರ್ಷದ ಮೊದಲ ಬೇಸಗೆ ಮಳೆ ಕೊಡಗಿನಲ್ಲಿ..!

ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.

3 days ago

ಹವಾಮಾನ ವರದಿ | 20-02-2025 | ಅಧಿಕ ತಾಪಮಾನ- ಕೆಲವು ಕಡೆ ತುಂತುರು ಮಳೆ ಸಾಧ್ಯತೆ | ಫೆ.25 ರಿಂದ ಮೋಡ-ಬಿಸಿಲು |

ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…

4 days ago

ಸ್ವರ್ಗಕ್ಕಾಗಿ ಮೂರು ಕಾಲ್ತುಳಿತಗಳು

ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…

4 days ago

ಅಡಿಕೆಗೆ ಮೈಟ್ | ಆತಂಕ ಬೇಡ, ಇರಲಿ ಎಚ್ಚರ | ವಿಜ್ಞಾನಿಗಳಿಂದ ಮಾಹಿತಿ |

ಅಡಿಕೆಯ ಮೈಟ್‌ ಬಗ್ಗೆ ಸಿಪಿಸಿಆರ್‌ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…

4 days ago