Advertisement
MIRROR FOCUS

ಕೆರೆಯಲ್ಲಿ ಸಾಕಿದ್ದ ಮೀನುಗಳ ಮಾರಣಹೋಮ | ಬೃಹತ್‌ ಗಾತ್ರ ಮೀನು ಸಾವು | ಅಪಾರ ನಷ್ಟ |

Share

ದಾವಣಗೆರೆ(Davanagere) ತಾಲೂಕಿನ ಬೇತೂರು ಗ್ರಾಮದಲ್ಲಿರುವ  ಕೆರೆಯಲ್ಲಿ(Lake) ಮೀನುಗಳ(Fish) ಮಾರಣಹೋಮವಾಗಿದೆ(Dead). ಈ ಕೆರೆಯಲ್ಲಿ 3 ವರ್ಷಗಳ ಹಿಂದೆ ಗ್ರಾಮ ಪಂಚಾಯಿತಿಯಿಂದ ಟೆಂಡರ್(Tender)​​​​​ ಪಡೆದು ನಾಲ್ಕು ಲಕ್ಷಕ್ಕೂ ಅಧಿಕ ಮೀನಿನ ಮರಿಗಳನ್ನು ಬಿಟ್ಟು ಪೋಷಣೆ ಮಾಡಿ, ಮಾರುಕಟ್ಟೆಯಲ್ಲಿ(Market) ಮಾರಾಟ ಮಾಡಲಾಗುತ್ತಿತ್ತು. ಆದರೆ ಈಗ ಲಕ್ಷಾಂತರ ಮತ್ಸ್ಯಗಳು ಸಾವನ್ನಪ್ಪಿದ್ದು, ಟೆಂಡರ್​​​​ ಪಡೆದವರಿಗೆ ನಷ್ಟವಾಗಿದೆ. ಕಿಡಿಗೇಡಿಗಳ್ಯಾರೋ ಕೆರೆಗೆ ವಿಷ ಹಾಕಿದ್ದು ಮೀನುಗಳು ಸಾವನ್ನಪ್ಪಿದೆ ಎಂದು ಸ್ಥಳೀಯರು ಆರೋಪ ಮಾಡಿದ್ದಾರೆ.

Advertisement

‘ಲಕ್ಷ್ಮಿ ವೆಂಕಟೇಶ್ವರ ಮೀನು ಉತ್ಪಾದಕ, ಮಾರಾಟ ಮತ್ತು ಸಂಸ್ಕರಣ ಸಹಾಯಕ ಸಂಘ’ದಿಂದ ಮಂಜುನಾಥ್, ಸಿದ್ದೇಶ್, ಹನುಮಂತ ಎಂಬುವರು ಗ್ರಾಮಪಂಚಾಯತ್​​ ಮುಖೇನಾ ಟೆಂಡರ್ ಪಡೆದು ಮೀನು ಸಾಕಾಣಿಕೆ ಮಾಡುತ್ತಿದ್ದರು. ಈಗಾಗಲೇ ಮೀನುಗಳನ್ನು ಬಲೆ ಹಾಕಿ ಮಾರುಕಟ್ಟೆಗೆ ಮಾರಾಟ ಮಾಡಲಾಗುತ್ತಿತ್ತು. ಅಲ್ಲದೆ ಕೆರೆಯಲ್ಲಿ ಒಂದೊಂದು ಮೀನು 5 ರಿಂದ 10 ಕೆಜಿ ಇದ್ದು ಒಳ್ಳೆ ಬೆಲೆಗೆ ಮಾರಾಟ ಆಗುತಿತ್ತು. ಮೀನಿನ ಗಾತ್ರ ಕಂಡು ಕಿಡಿಗೇಡಿಗಳು ರಾತ್ರಿ ಸಮಯದಲ್ಲಿ ಕಳ್ಳತನದಿಂದ ಮೀನು ಹಿಡಿಯುತ್ತಿದ್ದರು. ಹೀಗಾಗಿ ಮೀನುಗಳ ರಕ್ಷಣೆಗೆ ಟೆಂಡರ್​ ಪಡೆದವರು ಕೆರೆ ಬಳಿ ಕಾಯುತ್ತಿದ್ದರು. ಇದರಿಂದ ಮೀನು ಸಿಗದೆ ಇದ್ದಾಗ ಕೆಲ ಖದೀಮರು ಕೆರೆಗೆ ವಿಷ ಹಾಕಿರಬಹುದೆಂದು ಗ್ರಾಮಸ್ಥರು ಆರೋಪ ಮಾಡುತ್ತಿದ್ದಾರೆ.

ಕೆರೆಯಲ್ಲಿ ಸಣ್ಣ ಮೀನುಗಳಿಗಿಂತಲೂ ದೊಡ್ಡ ಗಾತ್ರದ ಮೀನುಗಳೇ ಸಾವನ್ನಪ್ಪಿರುವುದು ಮೀನುಗಾರರ ಆಕ್ರೋಶಕ್ಕೆ ಕಾರಣವಾಗಿದೆ. ಇಲ್ಲಿತನಕ ಒಟ್ಟು 1-2 ಲಕ್ಷ ಮೀನುಗಳು ಸತ್ತಿರಬಹುದೆಂದು ಅಂದಾಜಿಸಲಾಗಿದೆ. ಮೀನುಗಳ ಸಾವಿಗೆ ಕಾರಣರಾದವರನ್ನು ಪತ್ತೆ ಹಚ್ಚುವಂತೆ ಒತ್ತಾಯಿಸಿದ್ದಾರೆ. ಹಾಗೇ ಮೀನುಗಾರಿಕೆ ಇಲಾಖೆ ಅಧಿಕಾರಿಗಳು ಇತ್ತ ಗಮನ ಹರಿಸಿ ಪರಿಹಾರ ನೀಡುವಂತೆ ಮನವಿ ಮಾಡಿದ್ದಾರೆ.

ಮೂಲ : ಅಂತರ್ಜಾಲ ಮಾಹಿತಿ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 19-02-2026 | ಕರಾವಳಿ–ಮಲೆನಾಡಿನಲ್ಲಿ ಫೆ.21 ರಿಂದ ಮಳೆ ಸಾಧ್ಯತೆ ಹೆಚ್ಚಳ

ಬಂಗಾಳಕೊಲ್ಲಿಯಲ್ಲಿ ಉಂಟಾಗುವ ತಿರುವಿಕೆಯ ಪರಿಣಾಮವಾಗಿ ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ…

1 hour ago

ಬೆಂಗಳೂರು ಕಸ ವಿಲೇವಾರಿ ತಡೆದರೆ ಕಠಿಣ ಕ್ರಮ : ಎಸ್ಮಾ ಕಾಯ್ದೆ ಜಾರಿ ಎಚ್ಚರಿಕೆ

ಬೆಂಗಳೂರು ಕಸ ವಿಲೇವಾರಿಗೆ ಅಡ್ಡಿಪಡಿಸುವವರ ವಿರುದ್ಧ ಎಸ್ಮಾ ಕಾಯ್ದೆಯಡಿ ಪ್ರಕರಣ ದಾಖಲಿಸುವುದಾಗಿ ಡಿ.ಕೆ.…

6 hours ago

ಅಡಿಕೆ ಕ್ಯಾನ್ಸರ್‌ಕಾರಕ ಅಲ್ಲ – WHOಗೆ ಅಧಿಕೃತ ಮನವಿ ಮಾಡಿದ ಉತ್ತರ ಕನ್ನಡ ಸಂಸದ

ಅಡಿಕೆಯನ್ನು Group-1 ಕ್ಯಾನ್ಸರ್ ಕಾರಕ ಪಟ್ಟಿಯಿಂದ ಮರುಪರಿಶೀಲನೆ ಮಾಡಲು WHO ಮತ್ತು IARCಗೆ…

7 hours ago

ಕ್ಯಾಂಪ್ಕೊಗೆ ಸಂಸದ ಬ್ರಿಜೇಶ್ ಚೌಟ ಭೇಟಿ, ಅಡಿಕೆ ಸಮಸ್ಯೆಗಳ ಕುರಿತು ಚರ್ಚೆ

ಪುತ್ತೂರಿನ ಕ್ಯಾಂಪ್ಕೋ ಚಾಕಲೇಟ್ ಫ್ಯಾಕ್ಟರಿಯಲ್ಲಿ ಸಂಸದ ಬ್ರಿಜೇಶ್ ಚೌಟರೊಂದಿಗೆ ಅಡಿಕೆ ಬೆಳೆಗಾರರ ಸಮಸ್ಯೆಗಳು,…

7 hours ago

ಹವಾಮಾನ ವರದಿ | 18-02-2026 | ಕರ್ನಾಟಕದಲ್ಲಿ ಬಿಸಿಲಿನ ನಡುವೆ ತುಂತುರು ಮಳೆ ಸಾಧ್ಯತೆ

19.02.2026 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ…

15 hours ago

ಅಡಿಕೆ ವೈಜ್ಞಾನಿಕ ವಿಶ್ಲೇಷಣೆಯ ಪುಸ್ತಕ “ARECANUT” ಬಿಡುಗಡೆ

 ಮಂಗಳೂರು ಕ್ಯಾಂಪ್ಕೊ ಕೇಂದ್ರ ಕಚೇರಿಯಲ್ಲಿ ಅಡಿಕೆ ಕುರಿತಾದ ವೈಜ್ಞಾನಿಕ ಸಂಶೋಧನಾ ಪುಸ್ತಕ"ARECANUT" ಬಿಡುಗಡೆ…

15 hours ago