Advertisement
MIRROR FOCUS

ಕೆರೆಯಲ್ಲಿ ಸಾಕಿದ್ದ ಮೀನುಗಳ ಮಾರಣಹೋಮ | ಬೃಹತ್‌ ಗಾತ್ರ ಮೀನು ಸಾವು | ಅಪಾರ ನಷ್ಟ |

Share

ದಾವಣಗೆರೆ(Davanagere) ತಾಲೂಕಿನ ಬೇತೂರು ಗ್ರಾಮದಲ್ಲಿರುವ  ಕೆರೆಯಲ್ಲಿ(Lake) ಮೀನುಗಳ(Fish) ಮಾರಣಹೋಮವಾಗಿದೆ(Dead). ಈ ಕೆರೆಯಲ್ಲಿ 3 ವರ್ಷಗಳ ಹಿಂದೆ ಗ್ರಾಮ ಪಂಚಾಯಿತಿಯಿಂದ ಟೆಂಡರ್(Tender)​​​​​ ಪಡೆದು ನಾಲ್ಕು ಲಕ್ಷಕ್ಕೂ ಅಧಿಕ ಮೀನಿನ ಮರಿಗಳನ್ನು ಬಿಟ್ಟು ಪೋಷಣೆ ಮಾಡಿ, ಮಾರುಕಟ್ಟೆಯಲ್ಲಿ(Market) ಮಾರಾಟ ಮಾಡಲಾಗುತ್ತಿತ್ತು. ಆದರೆ ಈಗ ಲಕ್ಷಾಂತರ ಮತ್ಸ್ಯಗಳು ಸಾವನ್ನಪ್ಪಿದ್ದು, ಟೆಂಡರ್​​​​ ಪಡೆದವರಿಗೆ ನಷ್ಟವಾಗಿದೆ. ಕಿಡಿಗೇಡಿಗಳ್ಯಾರೋ ಕೆರೆಗೆ ವಿಷ ಹಾಕಿದ್ದು ಮೀನುಗಳು ಸಾವನ್ನಪ್ಪಿದೆ ಎಂದು ಸ್ಥಳೀಯರು ಆರೋಪ ಮಾಡಿದ್ದಾರೆ.

‘ಲಕ್ಷ್ಮಿ ವೆಂಕಟೇಶ್ವರ ಮೀನು ಉತ್ಪಾದಕ, ಮಾರಾಟ ಮತ್ತು ಸಂಸ್ಕರಣ ಸಹಾಯಕ ಸಂಘ’ದಿಂದ ಮಂಜುನಾಥ್, ಸಿದ್ದೇಶ್, ಹನುಮಂತ ಎಂಬುವರು ಗ್ರಾಮಪಂಚಾಯತ್​​ ಮುಖೇನಾ ಟೆಂಡರ್ ಪಡೆದು ಮೀನು ಸಾಕಾಣಿಕೆ ಮಾಡುತ್ತಿದ್ದರು. ಈಗಾಗಲೇ ಮೀನುಗಳನ್ನು ಬಲೆ ಹಾಕಿ ಮಾರುಕಟ್ಟೆಗೆ ಮಾರಾಟ ಮಾಡಲಾಗುತ್ತಿತ್ತು. ಅಲ್ಲದೆ ಕೆರೆಯಲ್ಲಿ ಒಂದೊಂದು ಮೀನು 5 ರಿಂದ 10 ಕೆಜಿ ಇದ್ದು ಒಳ್ಳೆ ಬೆಲೆಗೆ ಮಾರಾಟ ಆಗುತಿತ್ತು. ಮೀನಿನ ಗಾತ್ರ ಕಂಡು ಕಿಡಿಗೇಡಿಗಳು ರಾತ್ರಿ ಸಮಯದಲ್ಲಿ ಕಳ್ಳತನದಿಂದ ಮೀನು ಹಿಡಿಯುತ್ತಿದ್ದರು. ಹೀಗಾಗಿ ಮೀನುಗಳ ರಕ್ಷಣೆಗೆ ಟೆಂಡರ್​ ಪಡೆದವರು ಕೆರೆ ಬಳಿ ಕಾಯುತ್ತಿದ್ದರು. ಇದರಿಂದ ಮೀನು ಸಿಗದೆ ಇದ್ದಾಗ ಕೆಲ ಖದೀಮರು ಕೆರೆಗೆ ವಿಷ ಹಾಕಿರಬಹುದೆಂದು ಗ್ರಾಮಸ್ಥರು ಆರೋಪ ಮಾಡುತ್ತಿದ್ದಾರೆ.

ಕೆರೆಯಲ್ಲಿ ಸಣ್ಣ ಮೀನುಗಳಿಗಿಂತಲೂ ದೊಡ್ಡ ಗಾತ್ರದ ಮೀನುಗಳೇ ಸಾವನ್ನಪ್ಪಿರುವುದು ಮೀನುಗಾರರ ಆಕ್ರೋಶಕ್ಕೆ ಕಾರಣವಾಗಿದೆ. ಇಲ್ಲಿತನಕ ಒಟ್ಟು 1-2 ಲಕ್ಷ ಮೀನುಗಳು ಸತ್ತಿರಬಹುದೆಂದು ಅಂದಾಜಿಸಲಾಗಿದೆ. ಮೀನುಗಳ ಸಾವಿಗೆ ಕಾರಣರಾದವರನ್ನು ಪತ್ತೆ ಹಚ್ಚುವಂತೆ ಒತ್ತಾಯಿಸಿದ್ದಾರೆ. ಹಾಗೇ ಮೀನುಗಾರಿಕೆ ಇಲಾಖೆ ಅಧಿಕಾರಿಗಳು ಇತ್ತ ಗಮನ ಹರಿಸಿ ಪರಿಹಾರ ನೀಡುವಂತೆ ಮನವಿ ಮಾಡಿದ್ದಾರೆ.

ಮೂಲ : ಅಂತರ್ಜಾಲ ಮಾಹಿತಿ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

2050 ರ ವೇಳೆಗೆ ಭೂಕುಸಿತದ ಅಪಾಯ ಮತ್ತಷ್ಟು ಹೆಚ್ಚಳ : ಮಳೆ ತೀವ್ರತೆ, ನಗರೀಕರಣವೇ ಪ್ರಮುಖ ಕಾರಣ – ಅಧ್ಯಯನ

2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…

13 hours ago

ಅಕಾಲದ ಹಸಿವು, ಅಸಮಯದ ನಿದ್ದೆ ದೇಹದ ಯಂತ್ರ ಕೆಟ್ಟಿರುವ ಸಂಕೇತ : ರಾಘವೇಶ್ವರ ಶ್ರೀ

ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…

15 hours ago

ಮತ್ತೆ ಚುರುಕುಗೊಂಡ ಮಳೆ | ಸುಳ್ಯ ಮಲೆನಾಡು ಭಾಗದಲ್ಲಿ ಬೆಳಗ್ಗಿನಿಂದ ಧಾರಾಕಾರ ಮಳೆ

ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…

15 hours ago

ದೇಶದ ಅಡಿಕೆ ಉತ್ಪಾದನೆಯಲ್ಲಿ ಕರ್ನಾಟಕದ ಮೊದಲು – 75.47% ಉತ್ಪಾದನೆ, 71.56% ವಿಸ್ತೀರ್ಣದಲ್ಲಿ ಅಡಿಕೆ ಬೆಳೆ

ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…

1 day ago

ಕಳಪೆ ವಿದೇಶಿ ಅಡಿಕೆ ಆಮದು ನಿಯಂತ್ರಿಸಿ – ಕೋಟ ಶ್ರೀನಿವಾಸ ಪೂಜಾರಿ ಒತ್ತಾಯ

ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…

1 day ago

ಹವಾಮಾನ ವರದಿ | 04-08-2026 | ರಾಜ್ಯದಲ್ಲಿ ಆಗಸ್ಟ್‌ 12 ರವರೆಗೆ ಮಳೆ ಸಾಧ್ಯತೆ – ಮುಂಗಾರು ದುರ್ಬಲವಾಗುವ ಲಕ್ಷಣ

ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್‌ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…

1 day ago