Advertisement
MIRROR FOCUS

ಕೆರೆಯಲ್ಲಿ ಸಾಕಿದ್ದ ಮೀನುಗಳ ಮಾರಣಹೋಮ | ಬೃಹತ್‌ ಗಾತ್ರ ಮೀನು ಸಾವು | ಅಪಾರ ನಷ್ಟ |

Share

ದಾವಣಗೆರೆ(Davanagere) ತಾಲೂಕಿನ ಬೇತೂರು ಗ್ರಾಮದಲ್ಲಿರುವ  ಕೆರೆಯಲ್ಲಿ(Lake) ಮೀನುಗಳ(Fish) ಮಾರಣಹೋಮವಾಗಿದೆ(Dead). ಈ ಕೆರೆಯಲ್ಲಿ 3 ವರ್ಷಗಳ ಹಿಂದೆ ಗ್ರಾಮ ಪಂಚಾಯಿತಿಯಿಂದ ಟೆಂಡರ್(Tender)​​​​​ ಪಡೆದು ನಾಲ್ಕು ಲಕ್ಷಕ್ಕೂ ಅಧಿಕ ಮೀನಿನ ಮರಿಗಳನ್ನು ಬಿಟ್ಟು ಪೋಷಣೆ ಮಾಡಿ, ಮಾರುಕಟ್ಟೆಯಲ್ಲಿ(Market) ಮಾರಾಟ ಮಾಡಲಾಗುತ್ತಿತ್ತು. ಆದರೆ ಈಗ ಲಕ್ಷಾಂತರ ಮತ್ಸ್ಯಗಳು ಸಾವನ್ನಪ್ಪಿದ್ದು, ಟೆಂಡರ್​​​​ ಪಡೆದವರಿಗೆ ನಷ್ಟವಾಗಿದೆ. ಕಿಡಿಗೇಡಿಗಳ್ಯಾರೋ ಕೆರೆಗೆ ವಿಷ ಹಾಕಿದ್ದು ಮೀನುಗಳು ಸಾವನ್ನಪ್ಪಿದೆ ಎಂದು ಸ್ಥಳೀಯರು ಆರೋಪ ಮಾಡಿದ್ದಾರೆ.

‘ಲಕ್ಷ್ಮಿ ವೆಂಕಟೇಶ್ವರ ಮೀನು ಉತ್ಪಾದಕ, ಮಾರಾಟ ಮತ್ತು ಸಂಸ್ಕರಣ ಸಹಾಯಕ ಸಂಘ’ದಿಂದ ಮಂಜುನಾಥ್, ಸಿದ್ದೇಶ್, ಹನುಮಂತ ಎಂಬುವರು ಗ್ರಾಮಪಂಚಾಯತ್​​ ಮುಖೇನಾ ಟೆಂಡರ್ ಪಡೆದು ಮೀನು ಸಾಕಾಣಿಕೆ ಮಾಡುತ್ತಿದ್ದರು. ಈಗಾಗಲೇ ಮೀನುಗಳನ್ನು ಬಲೆ ಹಾಕಿ ಮಾರುಕಟ್ಟೆಗೆ ಮಾರಾಟ ಮಾಡಲಾಗುತ್ತಿತ್ತು. ಅಲ್ಲದೆ ಕೆರೆಯಲ್ಲಿ ಒಂದೊಂದು ಮೀನು 5 ರಿಂದ 10 ಕೆಜಿ ಇದ್ದು ಒಳ್ಳೆ ಬೆಲೆಗೆ ಮಾರಾಟ ಆಗುತಿತ್ತು. ಮೀನಿನ ಗಾತ್ರ ಕಂಡು ಕಿಡಿಗೇಡಿಗಳು ರಾತ್ರಿ ಸಮಯದಲ್ಲಿ ಕಳ್ಳತನದಿಂದ ಮೀನು ಹಿಡಿಯುತ್ತಿದ್ದರು. ಹೀಗಾಗಿ ಮೀನುಗಳ ರಕ್ಷಣೆಗೆ ಟೆಂಡರ್​ ಪಡೆದವರು ಕೆರೆ ಬಳಿ ಕಾಯುತ್ತಿದ್ದರು. ಇದರಿಂದ ಮೀನು ಸಿಗದೆ ಇದ್ದಾಗ ಕೆಲ ಖದೀಮರು ಕೆರೆಗೆ ವಿಷ ಹಾಕಿರಬಹುದೆಂದು ಗ್ರಾಮಸ್ಥರು ಆರೋಪ ಮಾಡುತ್ತಿದ್ದಾರೆ.

ಕೆರೆಯಲ್ಲಿ ಸಣ್ಣ ಮೀನುಗಳಿಗಿಂತಲೂ ದೊಡ್ಡ ಗಾತ್ರದ ಮೀನುಗಳೇ ಸಾವನ್ನಪ್ಪಿರುವುದು ಮೀನುಗಾರರ ಆಕ್ರೋಶಕ್ಕೆ ಕಾರಣವಾಗಿದೆ. ಇಲ್ಲಿತನಕ ಒಟ್ಟು 1-2 ಲಕ್ಷ ಮೀನುಗಳು ಸತ್ತಿರಬಹುದೆಂದು ಅಂದಾಜಿಸಲಾಗಿದೆ. ಮೀನುಗಳ ಸಾವಿಗೆ ಕಾರಣರಾದವರನ್ನು ಪತ್ತೆ ಹಚ್ಚುವಂತೆ ಒತ್ತಾಯಿಸಿದ್ದಾರೆ. ಹಾಗೇ ಮೀನುಗಾರಿಕೆ ಇಲಾಖೆ ಅಧಿಕಾರಿಗಳು ಇತ್ತ ಗಮನ ಹರಿಸಿ ಪರಿಹಾರ ನೀಡುವಂತೆ ಮನವಿ ಮಾಡಿದ್ದಾರೆ.

ಮೂಲ : ಅಂತರ್ಜಾಲ ಮಾಹಿತಿ

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಪ್ರತೀ ವರ್ಷ “ಕ್ಲೈಮೇಟ್ ರಿಪೋರ್ಟ್ ಕಾರ್ಡ್” ಏಕೆ ಬೇಕು..? ನಮ್ಮ ನಗರ-ಹಳ್ಳಿಗಳು ಹವಾಮಾನ ಬದಲಾವಣೆಗೆ ಎಷ್ಟು ಸಿದ್ಧ?

ಭಾರತದ 126 ಪ್ರಮುಖ ನಗರಗಳ ಹವಾಮಾನ ಸಿದ್ಧತೆಯನ್ನು ಅಳೆಯಲಾಗಿದ್ದರೂ, 2021ರ ಮೌಲ್ಯಮಾಪನದಲ್ಲಿ ರಾಷ್ಟ್ರೀಯ…

10 hours ago

ಭಾರತದ ಕಾಫಿಗೆ ಜಾಗತಿಕ ಬೇಡಿಕೆ ಹೆಚ್ಚಳ : ‘ಇಂಡಿ ಕಾಫಿ’ಗೆ ಹೊಸ ಬ್ರ್ಯಾಂಡ್‌ ಒತ್ತು

ಭಾರತದ ಕಾಫಿ ರಫ್ತು ಗಳಿಕೆ 2021-22ರ ಸುಮಾರು 1 ಶತಕೋಟಿ ಡಾಲರ್‌ನಿಂದ 2025-26ರಲ್ಲಿ…

16 hours ago

ಕಸವೆಂದು ಎಸೆಯುವ ಮೀನಿನ ಮುಳ್ಳು–ಹುರುಪೆಯಲ್ಲಿ ‘ಸಂಜೀವಿನಿ’!

ಮೀನಿನ ಮುಳ್ಳು ಮತ್ತು ಹುರುಪೆಯನ್ನು ವೈಜ್ಞಾನಿಕವಾಗಿ ಸಂಸ್ಕರಿಸಿ ಹಲ್ಲುಗಳ ಪುನರ್ ನಿರ್ಮಾಣ ಹಾಗೂ…

16 hours ago

ಕರ್ನಾಟಕ–ತಮಿಳುನಾಡು ಗಡಿಯಲ್ಲಿ ಆನೆಗಳಿಗಾಗಿ 3 ಹೊಸ ಕಾರಿಡಾರ್‌

ಕರ್ನಾಟಕ–ತಮಿಳುನಾಡು ಗಡಿಯಲ್ಲಿ ಆನೆಗಳ ಸುರಕ್ಷಿತ ಸಂಚಾರಕ್ಕೆ ಅನುಕೂಲವಾಗುವಂತೆ ತಮಿಳುನಾಡು ಮೂರು ಹೊಸ ಆನೆ…

1 day ago

ಹವಾಮಾನ ವರದಿ | 29-08-2026 | ಕರ್ನಾಟಕದಲ್ಲಿ ಸೆಪ್ಟೆಂಬರ್‌ ಆರಂಭದಲ್ಲಿ ಮಳೆ ಚುರುಕಾಗುವ ಲಕ್ಷಣ…?

ಬಂಗಾಳಕೊಲ್ಲಿಯ ಬಾಂಗ್ಲಾದೇಶ ಕರಾವಳಿ ಭಾಗದಲ್ಲಿ ಮಧ್ಯಮ ಸ್ತರದ ತಿರುವಿಕೆ ಉಂಟಾಗಿದ್ದು, ಇದರ ಪ್ರಭಾವದಿಂದ…

1 day ago

ಕಸ್ತೂರಿ ರಂಗನ್ ವರದಿ ಜಾರಿಗೆ ಅವಕಾಶವಿಲ್ಲ: ಪಶ್ಚಿಮಘಟ್ಟದ 1,449 ಗ್ರಾಮಗಳ ಬಗ್ಗೆ ಆತಂಕ ಬೇಡ ಎಂದ ಪರಮೇಶ್ವರ್

ಕಸ್ತೂರಿ ರಂಗನ್ ವರದಿಯನ್ನು ಯಾವುದೇ ಕಾರಣಕ್ಕೂ ಜಾರಿಗೆ ಅವಕಾಶ ನೀಡುವುದಿಲ್ಲ ಎಂದು ಉಪಮುಖ್ಯಮಂತ್ರಿ…

2 days ago