Advertisement
MIRROR FOCUS

ಕೆರೆಯಲ್ಲಿ ಸಾಕಿದ್ದ ಮೀನುಗಳ ಮಾರಣಹೋಮ | ಬೃಹತ್‌ ಗಾತ್ರ ಮೀನು ಸಾವು | ಅಪಾರ ನಷ್ಟ |

Share

ದಾವಣಗೆರೆ(Davanagere) ತಾಲೂಕಿನ ಬೇತೂರು ಗ್ರಾಮದಲ್ಲಿರುವ  ಕೆರೆಯಲ್ಲಿ(Lake) ಮೀನುಗಳ(Fish) ಮಾರಣಹೋಮವಾಗಿದೆ(Dead). ಈ ಕೆರೆಯಲ್ಲಿ 3 ವರ್ಷಗಳ ಹಿಂದೆ ಗ್ರಾಮ ಪಂಚಾಯಿತಿಯಿಂದ ಟೆಂಡರ್(Tender)​​​​​ ಪಡೆದು ನಾಲ್ಕು ಲಕ್ಷಕ್ಕೂ ಅಧಿಕ ಮೀನಿನ ಮರಿಗಳನ್ನು ಬಿಟ್ಟು ಪೋಷಣೆ ಮಾಡಿ, ಮಾರುಕಟ್ಟೆಯಲ್ಲಿ(Market) ಮಾರಾಟ ಮಾಡಲಾಗುತ್ತಿತ್ತು. ಆದರೆ ಈಗ ಲಕ್ಷಾಂತರ ಮತ್ಸ್ಯಗಳು ಸಾವನ್ನಪ್ಪಿದ್ದು, ಟೆಂಡರ್​​​​ ಪಡೆದವರಿಗೆ ನಷ್ಟವಾಗಿದೆ. ಕಿಡಿಗೇಡಿಗಳ್ಯಾರೋ ಕೆರೆಗೆ ವಿಷ ಹಾಕಿದ್ದು ಮೀನುಗಳು ಸಾವನ್ನಪ್ಪಿದೆ ಎಂದು ಸ್ಥಳೀಯರು ಆರೋಪ ಮಾಡಿದ್ದಾರೆ.

‘ಲಕ್ಷ್ಮಿ ವೆಂಕಟೇಶ್ವರ ಮೀನು ಉತ್ಪಾದಕ, ಮಾರಾಟ ಮತ್ತು ಸಂಸ್ಕರಣ ಸಹಾಯಕ ಸಂಘ’ದಿಂದ ಮಂಜುನಾಥ್, ಸಿದ್ದೇಶ್, ಹನುಮಂತ ಎಂಬುವರು ಗ್ರಾಮಪಂಚಾಯತ್​​ ಮುಖೇನಾ ಟೆಂಡರ್ ಪಡೆದು ಮೀನು ಸಾಕಾಣಿಕೆ ಮಾಡುತ್ತಿದ್ದರು. ಈಗಾಗಲೇ ಮೀನುಗಳನ್ನು ಬಲೆ ಹಾಕಿ ಮಾರುಕಟ್ಟೆಗೆ ಮಾರಾಟ ಮಾಡಲಾಗುತ್ತಿತ್ತು. ಅಲ್ಲದೆ ಕೆರೆಯಲ್ಲಿ ಒಂದೊಂದು ಮೀನು 5 ರಿಂದ 10 ಕೆಜಿ ಇದ್ದು ಒಳ್ಳೆ ಬೆಲೆಗೆ ಮಾರಾಟ ಆಗುತಿತ್ತು. ಮೀನಿನ ಗಾತ್ರ ಕಂಡು ಕಿಡಿಗೇಡಿಗಳು ರಾತ್ರಿ ಸಮಯದಲ್ಲಿ ಕಳ್ಳತನದಿಂದ ಮೀನು ಹಿಡಿಯುತ್ತಿದ್ದರು. ಹೀಗಾಗಿ ಮೀನುಗಳ ರಕ್ಷಣೆಗೆ ಟೆಂಡರ್​ ಪಡೆದವರು ಕೆರೆ ಬಳಿ ಕಾಯುತ್ತಿದ್ದರು. ಇದರಿಂದ ಮೀನು ಸಿಗದೆ ಇದ್ದಾಗ ಕೆಲ ಖದೀಮರು ಕೆರೆಗೆ ವಿಷ ಹಾಕಿರಬಹುದೆಂದು ಗ್ರಾಮಸ್ಥರು ಆರೋಪ ಮಾಡುತ್ತಿದ್ದಾರೆ.

ಕೆರೆಯಲ್ಲಿ ಸಣ್ಣ ಮೀನುಗಳಿಗಿಂತಲೂ ದೊಡ್ಡ ಗಾತ್ರದ ಮೀನುಗಳೇ ಸಾವನ್ನಪ್ಪಿರುವುದು ಮೀನುಗಾರರ ಆಕ್ರೋಶಕ್ಕೆ ಕಾರಣವಾಗಿದೆ. ಇಲ್ಲಿತನಕ ಒಟ್ಟು 1-2 ಲಕ್ಷ ಮೀನುಗಳು ಸತ್ತಿರಬಹುದೆಂದು ಅಂದಾಜಿಸಲಾಗಿದೆ. ಮೀನುಗಳ ಸಾವಿಗೆ ಕಾರಣರಾದವರನ್ನು ಪತ್ತೆ ಹಚ್ಚುವಂತೆ ಒತ್ತಾಯಿಸಿದ್ದಾರೆ. ಹಾಗೇ ಮೀನುಗಾರಿಕೆ ಇಲಾಖೆ ಅಧಿಕಾರಿಗಳು ಇತ್ತ ಗಮನ ಹರಿಸಿ ಪರಿಹಾರ ನೀಡುವಂತೆ ಮನವಿ ಮಾಡಿದ್ದಾರೆ.

ಮೂಲ : ಅಂತರ್ಜಾಲ ಮಾಹಿತಿ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ತೆಂಗಿನಕಾಯಿ ರಫ್ತಿನಲ್ಲಿ ಭಾರತ ಶೇ.62ರಷ್ಟು ಏರಿಕೆ

ಭಾರತದ ತೆಂಗಿನಕಾಯಿ ರಫ್ತು ಮೌಲ್ಯ ಒಂದೇ ವರ್ಷದಲ್ಲಿ ಶೇ.62ರಷ್ಟು ಏರಿಕೆಯಾಗಿ ₹7,038 ಕೋಟಿಗೆ…

22 hours ago

ಸಮುದ್ರ ಮಾರ್ಗದಲ್ಲಿ ಅಡಿಕೆ ಸಾಗಾಟ : ಒಡಿಶಾದ ಬಾಲಸೋರ್‌ನಲ್ಲಿ ₹2 ಕೋಟಿಗೂ ಅಧಿಕ ಅಡಿಕೆ ವಶ- ಅಡಿಕೆ ಜಾಲದ ಹಿಂದೆ ಬಿದ್ದಿರುವ ಪೊಲೀಸರು

ಒಡಿಶಾದ ಬಾಲಸೋರ್‌ನಲ್ಲಿ ಸಮುದ್ರ ಮಾರ್ಗದ ಮೂಲಕ ಅಡಿಕೆ ಸಾಗಾಟದ ಹಲವು ಪ್ರಕರಣಗಳು ಪತ್ತೆಯಾಗಿದ್ದು,…

23 hours ago

ಹವಾಮಾನ ವರದಿ | 19-09-2026 | ಸೆ.22 ರಿಂದ ಮಳೆ ಹೆಚ್ಚಳದ ಸೂಚನೆ – ಬಂಗಾಳಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ

ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಮುಂದುವರಿಯುವ ಸೂಚನೆ ಇದ್ದು, ಸೆ.22ರಿಂದ ಕರಾವಳಿ–ಮಲೆನಾಡಿನಲ್ಲಿ ಮಳೆ…

23 hours ago

ಗೋಮಯದಿಂದ ಗಣೇಶನ ಮೂರ್ತಿ – ದೇಶದಾದ್ಯಂತ ಸಾವಿರಾರು ಪರಿಸರ ಸ್ನೇಹಿ ಗಣೇಶ ಮೂರ್ತಿಗಳ ವಿತರಣೆ

ತಂದೆಯ ನೆನಪಿಗಾಗಿ ಇಂದೋರ್‌ನ ವ್ಯಕ್ತಿಯೊಬ್ಬರು ಗೋಮಯದಿಂದ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ತಯಾರಿಸಿ…

1 day ago

ಹವಾಮಾನ ವರದಿ | 17-09-2026 | ಕರ್ನಾಟಕದಲ್ಲಿ ಇಂದಿನಿಂದ ಮಳೆ ಚುರುಕು ಸಾಧ್ಯತೆ

ಸೆ.18ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಚುರುಕಾಗುವ ಸೂಚನೆ ಇದ್ದು, ಸೆ.19ರಿಂದ ಉತ್ತರ…

3 days ago

ಬರಪೀಡಿತ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿಗೆ 12 ತಿಂಗಳ ವಿಸ್ತರಣೆ

ಬರಪೀಡಿತ ಎಂದು ಘೋಷಿಸಿರುವ ರಾಜ್ಯದ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿ ಅವಧಿಯನ್ನು…

3 days ago