ದಾವಣಗೆರೆ(Davanagere) ತಾಲೂಕಿನ ಬೇತೂರು ಗ್ರಾಮದಲ್ಲಿರುವ ಕೆರೆಯಲ್ಲಿ(Lake) ಮೀನುಗಳ(Fish) ಮಾರಣಹೋಮವಾಗಿದೆ(Dead). ಈ ಕೆರೆಯಲ್ಲಿ 3 ವರ್ಷಗಳ ಹಿಂದೆ ಗ್ರಾಮ ಪಂಚಾಯಿತಿಯಿಂದ ಟೆಂಡರ್(Tender) ಪಡೆದು ನಾಲ್ಕು ಲಕ್ಷಕ್ಕೂ ಅಧಿಕ ಮೀನಿನ ಮರಿಗಳನ್ನು ಬಿಟ್ಟು ಪೋಷಣೆ ಮಾಡಿ, ಮಾರುಕಟ್ಟೆಯಲ್ಲಿ(Market) ಮಾರಾಟ ಮಾಡಲಾಗುತ್ತಿತ್ತು. ಆದರೆ ಈಗ ಲಕ್ಷಾಂತರ ಮತ್ಸ್ಯಗಳು ಸಾವನ್ನಪ್ಪಿದ್ದು, ಟೆಂಡರ್ ಪಡೆದವರಿಗೆ ನಷ್ಟವಾಗಿದೆ. ಕಿಡಿಗೇಡಿಗಳ್ಯಾರೋ ಕೆರೆಗೆ ವಿಷ ಹಾಕಿದ್ದು ಮೀನುಗಳು ಸಾವನ್ನಪ್ಪಿದೆ ಎಂದು ಸ್ಥಳೀಯರು ಆರೋಪ ಮಾಡಿದ್ದಾರೆ.
‘ಲಕ್ಷ್ಮಿ ವೆಂಕಟೇಶ್ವರ ಮೀನು ಉತ್ಪಾದಕ, ಮಾರಾಟ ಮತ್ತು ಸಂಸ್ಕರಣ ಸಹಾಯಕ ಸಂಘ’ದಿಂದ ಮಂಜುನಾಥ್, ಸಿದ್ದೇಶ್, ಹನುಮಂತ ಎಂಬುವರು ಗ್ರಾಮಪಂಚಾಯತ್ ಮುಖೇನಾ ಟೆಂಡರ್ ಪಡೆದು ಮೀನು ಸಾಕಾಣಿಕೆ ಮಾಡುತ್ತಿದ್ದರು. ಈಗಾಗಲೇ ಮೀನುಗಳನ್ನು ಬಲೆ ಹಾಕಿ ಮಾರುಕಟ್ಟೆಗೆ ಮಾರಾಟ ಮಾಡಲಾಗುತ್ತಿತ್ತು. ಅಲ್ಲದೆ ಕೆರೆಯಲ್ಲಿ ಒಂದೊಂದು ಮೀನು 5 ರಿಂದ 10 ಕೆಜಿ ಇದ್ದು ಒಳ್ಳೆ ಬೆಲೆಗೆ ಮಾರಾಟ ಆಗುತಿತ್ತು. ಮೀನಿನ ಗಾತ್ರ ಕಂಡು ಕಿಡಿಗೇಡಿಗಳು ರಾತ್ರಿ ಸಮಯದಲ್ಲಿ ಕಳ್ಳತನದಿಂದ ಮೀನು ಹಿಡಿಯುತ್ತಿದ್ದರು. ಹೀಗಾಗಿ ಮೀನುಗಳ ರಕ್ಷಣೆಗೆ ಟೆಂಡರ್ ಪಡೆದವರು ಕೆರೆ ಬಳಿ ಕಾಯುತ್ತಿದ್ದರು. ಇದರಿಂದ ಮೀನು ಸಿಗದೆ ಇದ್ದಾಗ ಕೆಲ ಖದೀಮರು ಕೆರೆಗೆ ವಿಷ ಹಾಕಿರಬಹುದೆಂದು ಗ್ರಾಮಸ್ಥರು ಆರೋಪ ಮಾಡುತ್ತಿದ್ದಾರೆ.
ಕೆರೆಯಲ್ಲಿ ಸಣ್ಣ ಮೀನುಗಳಿಗಿಂತಲೂ ದೊಡ್ಡ ಗಾತ್ರದ ಮೀನುಗಳೇ ಸಾವನ್ನಪ್ಪಿರುವುದು ಮೀನುಗಾರರ ಆಕ್ರೋಶಕ್ಕೆ ಕಾರಣವಾಗಿದೆ. ಇಲ್ಲಿತನಕ ಒಟ್ಟು 1-2 ಲಕ್ಷ ಮೀನುಗಳು ಸತ್ತಿರಬಹುದೆಂದು ಅಂದಾಜಿಸಲಾಗಿದೆ. ಮೀನುಗಳ ಸಾವಿಗೆ ಕಾರಣರಾದವರನ್ನು ಪತ್ತೆ ಹಚ್ಚುವಂತೆ ಒತ್ತಾಯಿಸಿದ್ದಾರೆ. ಹಾಗೇ ಮೀನುಗಾರಿಕೆ ಇಲಾಖೆ ಅಧಿಕಾರಿಗಳು ಇತ್ತ ಗಮನ ಹರಿಸಿ ಪರಿಹಾರ ನೀಡುವಂತೆ ಮನವಿ ಮಾಡಿದ್ದಾರೆ.
ಮೂಲ : ಅಂತರ್ಜಾಲ ಮಾಹಿತಿ
ಗುಜ್ಜೆ ಬಳಸಿ ತಯಾರಿಸುವ ಮಂಚೂರಿ ರುಚಿಕರ ಫ್ಯೂಷನ್ ತಿನಿಸಾಗಿದೆ. ಮನೆಯಲ್ಲಿ ಸುಲಭವಾಗಿ ಮಾಡುವ…
ಬಲಮುರಿ, ಎಡಮುರಿ ಕಾವೇರಿ ತೀರಗಳಿಗೆ ಪ್ರವಾಸಿಗರ ಪ್ರವೇಶವನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ. ಮುಳುಗು ಪ್ರಕರಣಗಳು…
ರಾಜ್ಯದ ಕೆಲವೆಡೆ ಮಳೆಯಾದರೂ, ಕರಾವಳಿಯಲ್ಲಿ ಮುಂದಿನ ಐದು ದಿನ ಬಿಸಿ ಮತ್ತು ತೇವಾಂಶ…
ರಾಜ್ಯದಲ್ಲಿ ಸಿಡಿಲು ಬಡಿತದಿಂದ 1,026 ಸಾವುಗಳು ದಾಖಲಾಗಿದೆ. ‘ದಾಮಿನಿ’ ಆ್ಯಪ್ ಬಳಸಿ ಮುನ್ನೆಚ್ಚರಿಕೆ…
ರಕ್ಷಾ ಆಯುರ್ವೇದವು ಏಪ್ರಿಲ್ 24ರಂದು ಸ್ವರ್ಣಪ್ರಾಶನ ಕಾರ್ಯಕ್ರಮ ಆಯೋಜಿಸಿದೆ. ಇದು ಮಕ್ಕಳ ರೋಗ…
ಕರ್ನಾಟಕದಲ್ಲಿ ಇಂದಿನಿಂದ ಪ್ರೀ-ಮಾನ್ಸೂನ್ ಮಳೆ ಚಟುವಟಿಕೆ ಆರಂಭವಾಗಲಿದೆ. ಕರಾವಳಿ, ಮಲೆನಾಡಿನಲ್ಲಿ ತಕ್ಷಣ ಮಳೆ,…