Advertisement
MIRROR FOCUS

ಕೆರೆಯಲ್ಲಿ ಸಾಕಿದ್ದ ಮೀನುಗಳ ಮಾರಣಹೋಮ | ಬೃಹತ್‌ ಗಾತ್ರ ಮೀನು ಸಾವು | ಅಪಾರ ನಷ್ಟ |

Share

ದಾವಣಗೆರೆ(Davanagere) ತಾಲೂಕಿನ ಬೇತೂರು ಗ್ರಾಮದಲ್ಲಿರುವ  ಕೆರೆಯಲ್ಲಿ(Lake) ಮೀನುಗಳ(Fish) ಮಾರಣಹೋಮವಾಗಿದೆ(Dead). ಈ ಕೆರೆಯಲ್ಲಿ 3 ವರ್ಷಗಳ ಹಿಂದೆ ಗ್ರಾಮ ಪಂಚಾಯಿತಿಯಿಂದ ಟೆಂಡರ್(Tender)​​​​​ ಪಡೆದು ನಾಲ್ಕು ಲಕ್ಷಕ್ಕೂ ಅಧಿಕ ಮೀನಿನ ಮರಿಗಳನ್ನು ಬಿಟ್ಟು ಪೋಷಣೆ ಮಾಡಿ, ಮಾರುಕಟ್ಟೆಯಲ್ಲಿ(Market) ಮಾರಾಟ ಮಾಡಲಾಗುತ್ತಿತ್ತು. ಆದರೆ ಈಗ ಲಕ್ಷಾಂತರ ಮತ್ಸ್ಯಗಳು ಸಾವನ್ನಪ್ಪಿದ್ದು, ಟೆಂಡರ್​​​​ ಪಡೆದವರಿಗೆ ನಷ್ಟವಾಗಿದೆ. ಕಿಡಿಗೇಡಿಗಳ್ಯಾರೋ ಕೆರೆಗೆ ವಿಷ ಹಾಕಿದ್ದು ಮೀನುಗಳು ಸಾವನ್ನಪ್ಪಿದೆ ಎಂದು ಸ್ಥಳೀಯರು ಆರೋಪ ಮಾಡಿದ್ದಾರೆ.

‘ಲಕ್ಷ್ಮಿ ವೆಂಕಟೇಶ್ವರ ಮೀನು ಉತ್ಪಾದಕ, ಮಾರಾಟ ಮತ್ತು ಸಂಸ್ಕರಣ ಸಹಾಯಕ ಸಂಘ’ದಿಂದ ಮಂಜುನಾಥ್, ಸಿದ್ದೇಶ್, ಹನುಮಂತ ಎಂಬುವರು ಗ್ರಾಮಪಂಚಾಯತ್​​ ಮುಖೇನಾ ಟೆಂಡರ್ ಪಡೆದು ಮೀನು ಸಾಕಾಣಿಕೆ ಮಾಡುತ್ತಿದ್ದರು. ಈಗಾಗಲೇ ಮೀನುಗಳನ್ನು ಬಲೆ ಹಾಕಿ ಮಾರುಕಟ್ಟೆಗೆ ಮಾರಾಟ ಮಾಡಲಾಗುತ್ತಿತ್ತು. ಅಲ್ಲದೆ ಕೆರೆಯಲ್ಲಿ ಒಂದೊಂದು ಮೀನು 5 ರಿಂದ 10 ಕೆಜಿ ಇದ್ದು ಒಳ್ಳೆ ಬೆಲೆಗೆ ಮಾರಾಟ ಆಗುತಿತ್ತು. ಮೀನಿನ ಗಾತ್ರ ಕಂಡು ಕಿಡಿಗೇಡಿಗಳು ರಾತ್ರಿ ಸಮಯದಲ್ಲಿ ಕಳ್ಳತನದಿಂದ ಮೀನು ಹಿಡಿಯುತ್ತಿದ್ದರು. ಹೀಗಾಗಿ ಮೀನುಗಳ ರಕ್ಷಣೆಗೆ ಟೆಂಡರ್​ ಪಡೆದವರು ಕೆರೆ ಬಳಿ ಕಾಯುತ್ತಿದ್ದರು. ಇದರಿಂದ ಮೀನು ಸಿಗದೆ ಇದ್ದಾಗ ಕೆಲ ಖದೀಮರು ಕೆರೆಗೆ ವಿಷ ಹಾಕಿರಬಹುದೆಂದು ಗ್ರಾಮಸ್ಥರು ಆರೋಪ ಮಾಡುತ್ತಿದ್ದಾರೆ.

Advertisement

ಕೆರೆಯಲ್ಲಿ ಸಣ್ಣ ಮೀನುಗಳಿಗಿಂತಲೂ ದೊಡ್ಡ ಗಾತ್ರದ ಮೀನುಗಳೇ ಸಾವನ್ನಪ್ಪಿರುವುದು ಮೀನುಗಾರರ ಆಕ್ರೋಶಕ್ಕೆ ಕಾರಣವಾಗಿದೆ. ಇಲ್ಲಿತನಕ ಒಟ್ಟು 1-2 ಲಕ್ಷ ಮೀನುಗಳು ಸತ್ತಿರಬಹುದೆಂದು ಅಂದಾಜಿಸಲಾಗಿದೆ. ಮೀನುಗಳ ಸಾವಿಗೆ ಕಾರಣರಾದವರನ್ನು ಪತ್ತೆ ಹಚ್ಚುವಂತೆ ಒತ್ತಾಯಿಸಿದ್ದಾರೆ. ಹಾಗೇ ಮೀನುಗಾರಿಕೆ ಇಲಾಖೆ ಅಧಿಕಾರಿಗಳು ಇತ್ತ ಗಮನ ಹರಿಸಿ ಪರಿಹಾರ ನೀಡುವಂತೆ ಮನವಿ ಮಾಡಿದ್ದಾರೆ.

ಮೂಲ : ಅಂತರ್ಜಾಲ ಮಾಹಿತಿ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಎಲ್ ನಿನೋ ಎಚ್ಚರಿಕೆ – ದೇಶದಲ್ಲಿ 43% ಮಳೆ ಕೊರತೆ, ಕರ್ನಾಟಕ ಸೇರಿ 12 ರಾಜ್ಯಗಳ 315 ಜಿಲ್ಲೆಗಳಿಗೆ ಕೇಂದ್ರದ ವಿಶೇಷ ಕೃಷಿ ಯೋಜನೆ

ದೇಶದಲ್ಲಿ 43% ಮಳೆ ಕೊರತೆ ದಾಖಲಾಗಿರುವ ಹಿನ್ನೆಲೆ ಎಲ್ ನಿನೋ ಪರಿಣಾಮ ಎದುರಿಸಲು…

1 hour ago

ತೆಂಗು ಬೆಳೆಗೂ ಏರಿದ ಉತ್ಪಾದನಾ ವೆಚ್ಚ, ರೈತರು ಸಂಕಷ್ಟದಲ್ಲಿ – ತಮಿಳುನಾಡಿನಲ್ಲಿ ತೆಂಗು ಬೆಳೆಗಾರರಿಗೆ ಕಾರ್ಮಿಕರ ಕೊರತೆ

ತೆಂಗು ಬೆಳೆಗಾರರು ಕಾರ್ಮಿಕ ಕೊರತೆ ಮತ್ತು ಹೆಚ್ಚುತ್ತಿರುವ ಕೂಲಿ ವೆಚ್ಚದಿಂದ ಸಂಕಷ್ಟ ಎದುರಿಸುತ್ತಿದ್ದಾರೆ.…

10 hours ago

ಮುಂಗಾರು ಮತ್ತಷ್ಟು ಚುರುಕು – ಕರಾವಳಿ ಕರ್ನಾಟಕದಲ್ಲಿ ಜೂನ್ 26 ರವರೆಗೆ ಭಾರೀ ಮಳೆ ಎಚ್ಚರಿಕೆ

ಕರಾವಳಿ ಕರ್ನಾಟಕದಲ್ಲಿ ಜೂನ್ 26ರವರೆಗೆ ಭಾರೀದಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ…

1 day ago

ಅಡಿಕೆ ಬೆಳೆಗಾರರ ಸಮಸ್ಯೆಗಳ ಪರಿಹಾರಕ್ಕೆ ತಕ್ಷಣ ಕ್ರಮ – ಸರ್ಕಾರಕ್ಕೆ ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಒತ್ತಾಯ

ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಕಾಪರ್ ಸಲ್ಫೇಟ್ ಕೊರತೆ, ಬೆಳೆ ವಿಮೆ ವಿಳಂಬ, ಕಳಪೆ…

2 days ago

ಹವಾಮಾನ ವರದಿ | 23-06-2026 | ಕರ್ನಾಟಕದಲ್ಲಿ ಜೂನ್ 25 ರಿಂದ ಮುಂಗಾರು ಚುರುಕು? ಕರಾವಳಿ-ಮಲೆನಾಡಿನಲ್ಲಿ ಮಳೆ ಹೆಚ್ಚಳದ ನಿರೀಕ್ಷೆ

ಜೂನ್ 25ರಿಂದ ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕುಗೊಳ್ಳುವ ಸಾಧ್ಯತೆ ಇದೆ. ಕರಾವಳಿ ಮತ್ತು…

2 days ago

ಕೀಟನಾಶಕಗಳ ಅತಿಯಾದ ಬಳಕೆ ನಿಯಂತ್ರಣಕ್ಕೆ ನೈಸರ್ಗಿಕ ಕೃಷಿಯೇ ಮದ್ದು

ಕೀಟನಾಶಕ ಮತ್ತು ರಾಸಾಯನಿಕ ಗೊಬ್ಬರಗಳ ಅತಿಯಾದ ಬಳಕೆಯಿಂದ ಕೃಷಿ ಹಾಗೂ ಆರೋಗ್ಯಕ್ಕೆ ಹಾನಿಯಾಗುತ್ತಿದೆ…

2 days ago