ಇತ್ತೀಚೆಗೆ ಪ್ರಾಣಿಗಳು(Animal) ಕ್ಷುಲ್ಲಕ ಕಾರಣಕ್ಕೆ ಬಲಿಯಾಗುತ್ತಿವೆ(Death). ಅದರಲ್ಲೂ ಆನೆಗಳ(Elephant) ಸಾವು ಮೇಲಿಂದ ಮೇಲೆ ಸಂಭವಿಸುತ್ತಿದೆ. ಅನೇಕ ಕಾರಣಗಳು ಮನುಷ್ಯರ(Human beings) ನಿರ್ಲಕ್ಷ್ಯವೇ ಆಗಿರುತ್ತದೆ. ಇದೀಗ ಎರಡು ಬಾರಿ ನಾಡಹಬ್ಬ ದಸರಾ(Dasara) ಮಹೋತ್ಸವದಲ್ಲಿ ಭಾಗವಹಿಸಿದ್ದ ‘ಅಶ್ವತ್ಥಾಮ’ ಆನೆ ವಿದ್ಯುತ್ ಸ್ವರ್ಶದಿಂದ ಸಾವನ್ನಪ್ಪಿರುವ ಘಟನೆ ಮೈಸೂರು(Mysure) ಜಿಲ್ಲೆಯ ಭೀಮನಕಟ್ಟೆ ಆನೆ ಶಿಬಿರದ ಬಳಿ ನಡೆದಿದೆ.
ನಾಗರಹೊಳೆ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಭೀಮನಕಟ್ಟೆ ಆನೆ ಶಿಬಿರದಲ್ಲಿದ್ದ 38 ವರ್ಷದ ಅಶ್ವತ್ಥಾಮನನ್ನು ಸಾಕಾನೆ ಕಟ್ಟಿಹಾಕುವ ಜಾಗದಲ್ಲಿ ಕಟ್ಟಲಾಗಿತ್ತು. ಮಂಗಳವಾರ (ಜೂನ್ 11)ರ ಬೆಳಗ್ಗೆ 5:30ಕ್ಕೆ ಸಿಬ್ಬಂದಿ ಎಬ್ಬಿಸಲು ಹೋದಾಗ ಆನೆ ಮೃತಪಟ್ಟಿರುವುದು ಗೊತ್ತಾಗಿದೆ. ಕೂಲಂಕಷವಾಗಿ ಪರಿಶೀಲಿಸಿ ನೋಡಿದಾಗ ಆನೆಯ ಬೆನ್ನಿನ ಮೇಲೆ ಸೋಲಾರ ತಂತಿ ಬಿದ್ದು, ಶಾಕ್ ತಗುಲಿರುವುದರಿಂದ ಸಾವನ್ನಪ್ಪಿದೆ ಎಂಬುದು ಮೇಲ್ನೋಟಕ್ಕೆ ಗೊತ್ತಾಗಿದೆ ಎಂದು ಅರಣ್ಯ ಇಲಾಖೆ ತಿಳಿಸಿದೆ.
ತನಿಖೆ ನಡೆಸಿ, ವರದಿ ನೀಡಲು ಸಚಿವ ಖಂಡ್ರೆ ಸೂಚನೆ: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವದ ಪ್ರಧಾನ ಆಕರ್ಷಣೆಯಾದ ಜಂಬೂಸವಾರಿಯಲ್ಲಿ ಪಾಲ್ಗೊಳ್ಳುತ್ತಿದ್ದ ಅಶ್ವತ್ಥಾಮ (38) ಆನೆಯ ನಿಧನಕ್ಕೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಸಂತಾಪ ಸೂಚಿಸಿದ್ದಾರೆ.ದಸರಾ ಮಹೋತ್ಸವದಲ್ಲಿ 2 ಬಾರಿ ಭಾಗಿಯಾಗಿದ್ದ ನಾಗರಹೊಳೆ ಅರಣ್ಯ ವ್ಯಾಪ್ತಿಯ ಭೀಮನಕಟ್ಟೆ ಶಿಬಿರದಲ್ಲಿದ್ದ ಅಶ್ವತ್ಥಾಮ ಸೌರ ವಿದ್ಯುತ್ ಬೇಲಿ ಬಿದ್ದು ಸಾವಿಗೀಡಾಗಿರುವುದಾಗಿ ವರದಿಯಾಗಿದೆ. ಈ ಆಕಸ್ಮಿಕ ಸಾವಿನ ಬಗ್ಗೆ ಸೂಕ್ತ ತನಿಖೆ ನಡೆಸಿ ವರದಿ ನೀಡಲು ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…