Advertisement
MIRROR FOCUS

ವಿದ್ಯುತ್ ಸ್ಪರ್ಶದಿಂದ ದಸರಾ ಮಹೋತ್ಸವದಲ್ಲಿ ಪಾಲ್ಗೊಂಡಿದ್ದ ‘ಅಶ್ವತ್ಥಾಮ’ ಸಾವು | ತನಿಖೆಗೆ ಅರಣ್ಯ ಸಚಿವ ಖಂಡ್ರೆ ಸೂಚನೆ

Share

ಇತ್ತೀಚೆಗೆ ಪ್ರಾಣಿಗಳು(Animal) ಕ್ಷುಲ್ಲಕ ಕಾರಣಕ್ಕೆ ಬಲಿಯಾಗುತ್ತಿವೆ(Death). ಅದರಲ್ಲೂ ಆನೆಗಳ(Elephant) ಸಾವು ಮೇಲಿಂದ ಮೇಲೆ ಸಂಭವಿಸುತ್ತಿದೆ. ಅನೇಕ ಕಾರಣಗಳು ಮನುಷ್ಯರ(Human beings) ನಿರ್ಲಕ್ಷ್ಯವೇ ಆಗಿರುತ್ತದೆ. ಇದೀಗ ಎರಡು ಬಾರಿ ನಾಡಹಬ್ಬ ದಸರಾ(Dasara) ಮಹೋತ್ಸವದಲ್ಲಿ ಭಾಗವಹಿಸಿದ್ದ ‘ಅಶ್ವತ್ಥಾಮ’ ಆನೆ ವಿದ್ಯುತ್‌ ಸ್ವರ್ಶದಿಂದ ಸಾವನ್ನಪ್ಪಿರುವ ಘಟನೆ ಮೈಸೂರು(Mysure) ಜಿಲ್ಲೆಯ ಭೀಮನಕಟ್ಟೆ ಆನೆ ಶಿಬಿರದ ಬಳಿ ನಡೆದಿದೆ.

ನಾಗರಹೊಳೆ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಭೀಮನಕಟ್ಟೆ ಆನೆ ಶಿಬಿರದಲ್ಲಿದ್ದ 38 ವರ್ಷದ ಅಶ್ವತ್ಥಾಮನನ್ನು ಸಾಕಾನೆ ಕಟ್ಟಿಹಾಕುವ ಜಾಗದಲ್ಲಿ ಕಟ್ಟಲಾಗಿತ್ತು. ಮಂಗಳವಾರ (ಜೂನ್​ 11)ರ ಬೆಳಗ್ಗೆ 5:30ಕ್ಕೆ ಸಿಬ್ಬಂದಿ ಎಬ್ಬಿಸಲು ಹೋದಾಗ ಆನೆ ಮೃತಪಟ್ಟಿರುವುದು ಗೊತ್ತಾಗಿದೆ. ಕೂಲಂಕಷವಾಗಿ ಪರಿಶೀಲಿಸಿ ನೋಡಿದಾಗ ಆನೆಯ ಬೆನ್ನಿನ ಮೇಲೆ ಸೋಲಾರ ತಂತಿ ಬಿದ್ದು, ಶಾಕ್​ ತಗುಲಿರುವುದರಿಂದ ಸಾವನ್ನಪ್ಪಿದೆ ಎಂಬುದು ಮೇಲ್ನೋಟಕ್ಕೆ ಗೊತ್ತಾಗಿದೆ ಎಂದು ಅರಣ್ಯ ಇಲಾಖೆ ತಿಳಿಸಿದೆ.

2017ರಲ್ಲಿ ಹಾಸನ ಜಿಲ್ಲೆಯ ಸಕಲೇಶಪುರ ಸಮೀಪದ ಅರಣ್ಯ ಪ್ರದೇಶದಲ್ಲಿ ಇದನ್ನು ಸೆರೆ ಹಿಡಿಯಲಾಗಿತ್ತು. 4 ವರ್ಷಗಳ ಕಾಲ ಪಳಗಿಸಿದ ಬಳಿಕ 2021 ಹಾಗೂ 2022ರಲ್ಲಿ ಮೈಸೂರು ದಸರಾದ ಗಜ ಪಯಣದಲ್ಲಿ ಹೆಜ್ಜೆ ಹಾಕಿತ್ತು. ಶಾಂತ ಸ್ವಭಾವ ಹಾಗೂ ಗಾಂಭೀರ್ಯಕ್ಕೆ ಅಶ್ವತ್ಥಾಮ ಹೆಸರುವಾಸಿಯಾಗಿತ್ತು. ಘಟನೆಗೆ ಸಂಬಂಧಿಸಿದಂತೆ ಆನೆಯ ಮಾದರಿ ಸಂಗ್ರಹಿಸಿ ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ವರದಿ ಬಂದ ಬಳಿಕ ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಅರಣ್ಯ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ತನಿಖೆ ನಡೆಸಿ, ವರದಿ ನೀಡಲು ಸಚಿವ ಖಂಡ್ರೆ ಸೂಚನೆ: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವದ ಪ್ರಧಾನ ಆಕರ್ಷಣೆಯಾದ ಜಂಬೂಸವಾರಿಯಲ್ಲಿ ಪಾಲ್ಗೊಳ್ಳುತ್ತಿದ್ದ ಅಶ್ವತ್ಥಾಮ (38) ಆನೆಯ ನಿಧನಕ್ಕೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಸಂತಾಪ ಸೂಚಿಸಿದ್ದಾರೆ.ದಸರಾ ಮಹೋತ್ಸವದಲ್ಲಿ 2 ಬಾರಿ ಭಾಗಿಯಾಗಿದ್ದ ನಾಗರಹೊಳೆ ಅರಣ್ಯ ವ್ಯಾಪ್ತಿಯ ಭೀಮನಕಟ್ಟೆ ಶಿಬಿರದಲ್ಲಿದ್ದ ಅಶ್ವತ್ಥಾಮ ಸೌರ ವಿದ್ಯುತ್ ಬೇಲಿ ಬಿದ್ದು ಸಾವಿಗೀಡಾಗಿರುವುದಾಗಿ ವರದಿಯಾಗಿದೆ. ಈ ಆಕಸ್ಮಿಕ ಸಾವಿನ ಬಗ್ಗೆ ಸೂಕ್ತ ತನಿಖೆ ನಡೆಸಿ ವರದಿ ನೀಡಲು ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!

ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…

1 hour ago

ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!

ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…

1 hour ago

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

1 day ago

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…

2 days ago

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

2 days ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

2 days ago