ಹಾಲಿನ ದರ ಹೆಚ್ಚಳ ಚರ್ಚೆ| ಹೈನುಗಾರರಿಗೆ ಪ್ರಯೋಜನವೇನು…? |

September 16, 2024
10:54 AM

ಹಾಲಿನ ದರ ಹೆಚ್ಚಳದ ಬಗ್ಗೆ ಚರ್ಚೆಗಳು ಆರಂಭವಾಗಿದೆ. ಆಡಳಿತ ಪಕ್ಷ ಹಾಗೂ ಪ್ರತಿಪಕ್ಷಗಳೂ ಈ ಬಗ್ಗೆ ವಾಗ್ವಾದ ನಡೆಸುತ್ತಿದ್ದಾರೆ. ಹೈನುಗಾರರಿಗೆ ಈ ಏರಿಕೆಯಿಂದ ಲಾಭವಾಗುತ್ತದಾ ಎನ್ನುವುದು ಪ್ರಶ್ನೆ. ಈಗಾಗಲೇ ಹಿಂಡಿ, ಮೇವು ದರ ಏರಿಕೆಯಾಗಿದೆ. ಹೈನುಗಾರರಿಗೆ ಹಾಲಿನ ಉತ್ಪನ್ನಗಳ ಮಾರಾಟದಿಂದ ಲಾಭಕ್ಕಿಂತ ನಷ್ಟವೇ ಹೆಚ್ಚು. ಹೀಗಾಗಿ ಹೈನುಗಾರರ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಹಾಲಿನ ದರ ಹೆಚ್ಚಳ ಮಾಡುವುದು ಅನಿವಾರ್ಯವಾಗಿದೆ.…..ಮುಂದೆ ಓದಿ….

ದಿನದಿಂದ ದಿನಕ್ಕೆ ಹೈನುಗಾರಿಕೆಯಲ್ಲಿ ಪಶುಸಾಕಾಣಿಕೆಯಲ್ಲಿ ಆರ್ಥಿಕ ಹೊರೆ ಅಧಿಕವಾಗುತ್ತಿರುವ ಹಿನ್ನೆಲೆಯಲ್ಲಿ ಹೈನುಗಾರರಿಗೆ ತೊಂದರೆಯಾಗುತ್ತಿದೆ, ಇದೀಗ ರಾಜ್ಯ ಸರ್ಕಾರ ಹಾಲಿನ ದರವನ್ನು ಸುಮಾರು 2ರೂ. ಗೆ ಹೆಚ್ಚಳ ಮಾಡುವ ಬಗ್ಗೆ ಚಿಂತನೆ ನಡೆಸಿರುವುದು, ಉತ್ತಮ ಬೆಳವಣೆಗೆಯಾಗಿದೆ ಎಂದು ಹೈನುಗಾರರು ಸ್ವಾಗತಿಸಿದ್ದಾರೆ. ಆದರೆ ದರ ಏರಿಕೆಯ ಬಗ್ಗೆ ಚರ್ಚೆಗಳು ಆರಂಭವಾಗಿದೆ.

ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಹೈನುಗಾರರು ಬದುಕುವುದು ಬೇಡವೇ ಎಂದು ಪ್ರಶ್ನೆ ಮಾಡಿದ್ದಾರೆ. ಹಾಲಿನ ಬೆಲೆ ಹೆಚ್ಚಳ ಮಾಡಿದ ಕೂಡಲೇ ಬಿಜೆಪಿ ನಾಯಕರು ಅಸಮಾಧಾನ ವ್ಯಕ್ತಪಡಿಸುತ್ತಿದ್ದು, ಹೈನುಗಾರರು ಬದುಕುವುದು ಬೇಡವೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಮಾಜಿಕ ಜಾಲ ತಾಣದಲ್ಲಿ ಪ್ರಶ್ನಿಸಿದ್ದಾರೆ.

ರಾಜ್ಯ ಸರ್ಕಾರದ ಹಾಲಿನ ದರ ಹೆಚ್ಚಳ ನಿರ್ಧಾರಕ್ಕೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. , ಜನಸಾಮಾನ್ಯರಿಗೆ ಮತ್ತೊಂದು ದರ ಏರಿಕೆಯ ಬಿಸಿ ತಟ್ಟಲಿದೆ ಎಂದು ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ
March 24, 2026
7:12 AM
by: ಮಿರರ್‌ ಡೆಸ್ಕ್
ಇನ್ಸ್ಪೈರ್ ಅವಾರ್ಡ್ ಗೆ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಯ್ಕೆ
March 23, 2026
10:18 PM
by: ದ ರೂರಲ್ ಮಿರರ್.ಕಾಂ
ನೆಮ್ಮದಿಗಾಗಿ ಬದುಕಿ; ಹಣ-ಅಧಿಕಾರಕ್ಕಾಗಿ ಅಲ್ಲ
March 23, 2026
9:12 PM
by: ದ ರೂರಲ್ ಮಿರರ್.ಕಾಂ
ಅಡಿಕೆ ಆಮದು ಎಂಬ ‘ಮಾಯಾಜಾಲ’: ನಡೆಯುತ್ತಿದೆಯೇ ಬೆಳೆಗಾರರ ಮೇಲೆ ಸೈಕಲಾಜಿಕಲ್ ಅಟ್ಯಾಕ್…!?
March 23, 2026
8:55 PM
by: ಅರುಣ್‌ ಕುಮಾರ್ ಕಾಂಚೋಡು

You cannot copy content of this page - Copyright -The Rural Mirror