ರಾಜ್ಯದಲ್ಲಿ ಖಾದಿ ಚಟುವಟಿಕೆ ಇಲ್ಲದಿರುವ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ಖಾದಿ ಚಟುವಟಿಕೆ ಉತ್ತೇಜಿಸಲು ಖಾದಿ ಮಂಡಳಿ ಸ್ಥಾಪನೆಗೆ ಉದ್ದೇಶಿಸಲಾಗಿದೆ ಎಂದು ಕರ್ನಾಟಕ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ಅಧ್ಯಕ್ಷ ಬಸನಗೌಡ ತುರವಿಹಾಳ ತಿಳಿಸಿದ್ದಾರೆ.
ದಾವಣಗೆರೆಯಲ್ಲಿ ಆರಂಭಗೊಂಡ ರಾಜ್ಯ ಮಟ್ಟದ ಖಾದಿ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳ ಉದ್ಘಾಟಿಸಿ ಅವರು ಮಾತನಾಡಿದರು. ಖಾದಿ ಚಟುವಟಿಕೆ ಇಲ್ಲದ ಈ ಐದು ಜಿಲ್ಲೆಗಳಲ್ಲಿ ಆಸಕ್ತ ಸಂಸ್ಥೆಗಳು ನೋಂದಣಿಯಾದಲ್ಲಿ ಖಾದಿ ಉತ್ಪಾದನೆ ಅಗತ್ಯವಿರುವ ಚರಕ ಮತ್ತು ಮಗ್ಗಗಳ ಖರೀದಿಗೆ ಸಹಕಾರ ಕಲ್ಪಿಸಲು ಉದ್ದೇಶಿಸಲಾಗಿದೆ ಎಂದು ಹೇಳಿದರು. ಖಾದಿ ಉತ್ಪನ್ನದ ಗುಣಮಟ್ಟ ಸುಧಾರಿಸುವ ತಂತ್ರಜ್ಞಾನ ಅಭಿವೃದ್ಧಿಪಡಿಸಲು ರಾಜ್ಯದಲ್ಲಿ ಟೆಕ್ಸ್ಟೈಲ್ ವಿಷಯದಲ್ಲಿ ಎಂಜಿನಿಯರಿಂಗ್ ಪದವಿ ನೀಡುತ್ತಿರುವ 3 ಕಾಲೇಜುಗಳಿಗೆ ಸಂಶೋಧನ ನೆರವು ನೀಡಲು ಉದ್ದೇಶಿಸಲಾಗಿದೆ ಎಂದು ಅವರು ತಿಳಿಸಿದರು.
ಮೇ 19 ಅಥವಾ 20ರಿಂದ ಕರ್ನಾಟಕದಲ್ಲಿ ಮುಂಗಾರು ಮಾದರಿಯ ಗಾಳಿಯ ಚಲನೆ ಆರಂಭವಾಗುವ…
ಹೆದ್ದಾರಿಯಲ್ಲಿ ಸಂಚರಿಸುವ ಖಾಸಗಿ ಬಸ್ಗಳ ಅತಿವೇಗ ಹಾಗೂ ಅತಿಯಾದ LED ಲೈಟುಗಳ ವಿರುದ್ಧ…
ಭಾರತ–ಆಸ್ಟ್ರೇಲಿಯಾ ಅಗ್ರಿಟೆಕ್ ಸಹಕಾರದಿಂದ ಹವಾಮಾನ ಸ್ನೇಹಿ ಕೃಷಿ, ಡ್ರೋನ್, AI ಹಾಗೂ ಸ್ಮಾರ್ಟ್…
ಕೋಟಿ ವೃಕ್ಷ ಅಭಿಯಾನದ ಪರಿಣಾಮವಾಗಿ ವಿಜಯಪುರದಲ್ಲಿ ಈ ವರ್ಷ ತಾಪಮಾನ 40 ಡಿಗ್ರಿ…
ಉತ್ತರ ಪ್ರದೇಶದಲ್ಲಿ ಭಾರೀ ಧೂಳುಗಾಳಿ, ಮಳೆ ಹಾಗೂ ಮಿಂಚಿನಿಂದ 140ಕ್ಕೂ ಹೆಚ್ಚು ಮಂದಿ…
ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರು ಭಾಗಗಳಲ್ಲಿ ಮಧ್ಯಾಹ್ನ ನಂತರ ಗುಡುಗು-ಮಿಂಚು ಸಹಿತ ಸಾಧಾರಣ…