ರಾಜ್ಯದಲ್ಲಿ ಖಾದಿ ಚಟುವಟಿಕೆ ಇಲ್ಲದಿರುವ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ಖಾದಿ ಚಟುವಟಿಕೆ ಉತ್ತೇಜಿಸಲು ಖಾದಿ ಮಂಡಳಿ ಸ್ಥಾಪನೆಗೆ ಉದ್ದೇಶಿಸಲಾಗಿದೆ ಎಂದು ಕರ್ನಾಟಕ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ಅಧ್ಯಕ್ಷ ಬಸನಗೌಡ ತುರವಿಹಾಳ ತಿಳಿಸಿದ್ದಾರೆ.
ದಾವಣಗೆರೆಯಲ್ಲಿ ಆರಂಭಗೊಂಡ ರಾಜ್ಯ ಮಟ್ಟದ ಖಾದಿ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳ ಉದ್ಘಾಟಿಸಿ ಅವರು ಮಾತನಾಡಿದರು. ಖಾದಿ ಚಟುವಟಿಕೆ ಇಲ್ಲದ ಈ ಐದು ಜಿಲ್ಲೆಗಳಲ್ಲಿ ಆಸಕ್ತ ಸಂಸ್ಥೆಗಳು ನೋಂದಣಿಯಾದಲ್ಲಿ ಖಾದಿ ಉತ್ಪಾದನೆ ಅಗತ್ಯವಿರುವ ಚರಕ ಮತ್ತು ಮಗ್ಗಗಳ ಖರೀದಿಗೆ ಸಹಕಾರ ಕಲ್ಪಿಸಲು ಉದ್ದೇಶಿಸಲಾಗಿದೆ ಎಂದು ಹೇಳಿದರು. ಖಾದಿ ಉತ್ಪನ್ನದ ಗುಣಮಟ್ಟ ಸುಧಾರಿಸುವ ತಂತ್ರಜ್ಞಾನ ಅಭಿವೃದ್ಧಿಪಡಿಸಲು ರಾಜ್ಯದಲ್ಲಿ ಟೆಕ್ಸ್ಟೈಲ್ ವಿಷಯದಲ್ಲಿ ಎಂಜಿನಿಯರಿಂಗ್ ಪದವಿ ನೀಡುತ್ತಿರುವ 3 ಕಾಲೇಜುಗಳಿಗೆ ಸಂಶೋಧನ ನೆರವು ನೀಡಲು ಉದ್ದೇಶಿಸಲಾಗಿದೆ ಎಂದು ಅವರು ತಿಳಿಸಿದರು.
ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 10ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳು ಗೋಚರಿಸಿವೆ.…
ದೇಹ, ಮನಸ್ಸು ಮತ್ತು ಆತ್ಮದ ಸಮತೋಲನವೇ ನಿಜವಾದ ಆರೋಗ್ಯ ಎಂದು ರಾಮಚಂದ್ರಾಪುರ ಶ್ರೀ…
2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…
ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…
ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…