ಬಂಡಿಪುರ ಅರಣ್ಯದಲ್ಲಿ ವಾಹನಗಳ ರಾತ್ರಿ ಸಂಚಾರ ನಿರ್ಬಂಧ ತೆರವಿಗೆ ಚರ್ಚಿಸಿ ನಿರ್ಧಾರ | ಅರಣ್ಯ ಸಚಿವ ಈಶ್ವರ್ ಖಂಡ್ರೆ

March 29, 2025
9:58 AM

ಬಂಡಿಪುರ ರಕ್ಷಿತಾರಣ್ಯದಲ್ಲಿ ವಾಹನಗಳ ರಾತ್ರಿ ಸಂಚಾರ ನಿರ್ಬಂಧ ತೆರವು ಕುರಿತು ಮುಖ್ಯಮಂತ್ರಿ ಹಾಗೂ ಕಾನೂನು ತಜ್ಞರೊಂದಿಗೆ ಸಮಾಲೋಚಿಸಿ, ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ.

ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಸ್ತುತ ಈ ಪ್ರಕರಣ ಸವೋಚ್ಚ ನ್ಯಾಯಾಲಯದಲ್ಲಿದೆ. ಈಗ ರಾತ್ರಿ 9 ರಿಂದ ಬೆಳಗ್ಗೆ 6 ಗಂಟೆಯವರೆಗೆ ನಿರ್ಬಂಧ ಜಾರಿಯಲ್ಲಿದೆ. ಕೇರಳ ಹಾಗೂ ಕರ್ನಾಟಕ ರಾಜ್ಯಗಳ ಬಾಂಧವ್ಯವನ್ನು ಗಮನದಲ್ಲಿಟ್ಟುಕೊಂಡು ನಿರ್ಬಂಧ ತೆರವಿಗೆ ಎಲ್ಲರೊಂದಿಗೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.ಇದೇ ವೇಳೆ ರಾಜ್ಯದಲ್ಲಿ ಹಾಲಿನ ದರ ಏರಿಕೆ ಕುರಿತು ಪ್ರತಿಕ್ರಿಯಿಸಿದ ಸಚಿವರು, ಬೇರೆ ರಾಜ್ಯಗಳಿಗೆ ಹೋಲಿಸಿದರೆ, ಕರ್ನಾಟಕದಲ್ಲಿ ದರ ಕಡಿಮೆ ಇದೆ. ರೈತರಿಗೆ ನೆರವಾಗಲು ಸರ್ಕಾರ ಈ ನಿರ್ಧಾರ ಕೈಗೊಂಡಿದೆ ಎಂದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!
April 1, 2026
6:29 AM
by: ದ ರೂರಲ್ ಮಿರರ್.ಕಾಂ
ಗ್ಯಾಸ್ ಸಿಲಿಂಡರ್ ಕೊರತೆ ಪರಿಣಾಮ : ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆ
April 1, 2026
6:13 AM
by: ಮಿರರ್‌ ಡೆಸ್ಕ್
ಹಸಿರು ಅಮೋನಿಯಾ ಒಪ್ಪಂದಗಳು | ಭಾರತದ ಇಂಧನ ಭದ್ರತೆಗೆ ಹೊಸ ಬಲ..! 2030 ಗುರಿಗೆ ವೇಗ
April 1, 2026
6:07 AM
by: ಮಿರರ್‌ ಡೆಸ್ಕ್
ಕರಾವಳಿಯಲ್ಲಿ ಮಳೆಯ ರಭಸ | ಸುಬ್ರಹ್ಮಣ್ಯ ಆಸುಪಾಸಿನಲ್ಲಿ 50 ಮಿಮೀಗೂ ಹೆಚ್ಚು! ರಾಜ್ಯದ ಹಲವೆಡೆ ಇನ್ನೂ 2 ದಿನ ಮಳೆ ಅಲರ್ಟ್
April 1, 2026
5:56 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror