Advertisement
MIRROR FOCUS

2ನೇ ಹೆಚ್ಚುವರಿ ಭಾಷೆಯಾಗಿ ತುಳುವನ್ನು ಘೋಷಿಸಿ | ತುಳುವಿನಲ್ಲೇ ಸ್ಪೀಕರ್‌ಗೆ ಮನವಿ‌ ಮಾಡಿದ ಶಾಸಕ ಅಶೋಕ್ ರೈ

Share

ಅವಿಭಜಿತ ದಕ್ಷಿಣ ಕನ್ನಡ(Dakshina Kannada) ಹಾಗೂ ಉಡುಪಿ(Udupi) ಜಿಲ್ಲೆಯ ಕೆಲವು ತಾಲೂಕುಗಳನ್ನು ತುಳುನಾಡು(Tulunadu) ಎನ್ನಲಾಗುತ್ತದೆ. ಇಲ್ಲಿನ ಬಹುತೇಕ ಮಂದಿ ತುಳು ಭಾಷೆಯನ್ನು(Tulu language) ಮಾತನಾಡುತ್ತಿದ್ದಾರೆ. ಇತ್ತೀಚೆಗೆ ತುಳು ಲಿಪಿ(Tulu inscription) ಕಲಿಯುವ ಅಭಿಯಾನವೂ ಆರಂಭವಾಗಿದೆ. ಹಲವು ದಶಕಗಳಿಂದ ತುಳು ಭಾಷೆಯನ್ನು 8ನೇ ಪರಿಚ್ಚೇದಕ್ಕೆ ಸೇರಿಸಬೇಕು ಅನ್ನುವುದು ತುಳುವರ ಕೂಗು. ಆದರೆ ಅದು ಇದುವರೆಗೆ ಸಾಧ್ಯವಾಗಿಲ್ಲ. ಇದೀಗ ತುಳು ಭಾಷೆಯನ್ನು (Tulu language) 2ನೇ ಹೆಚ್ಚುವರಿ ಭಾಷೆಯಾಗಿ ಘೋಷಿಸಿ ಎಂದು ಶಾಸಕ ಅಶೋಕ್ ರೈ ವಿಧಾನಸಭೆಯಲ್ಲಿ ಒತ್ತಾಯಿಸಿದರು. ತುಳುವಲ್ಲೇ ಮಾತನಾಡಿದ ಅಶೋಕ್ ರೈ (Ashok Kumar Rai) ಅವರು ಸದನದಲ್ಲಿ ಮನವಿ ಮನವಿ ಮಾಡಿದ್ದರು. ಆ ಕಡೆಯಿಂದ ಸ್ಪೀಕರ್ ಯು.ಟಿ ಖಾದರ್‌ (UT Khader) ಕೂಡ ತುಳುವಿನಲ್ಲೇ ಉತ್ತರ ಕೊಟ್ಟರು.

ಈ ವೇಳೆ ನೀವಿಬ್ಬರೇ ಮಾತನಾಡಿದ್ರೆ ಹೇಗೆ? ನಮಗೆ ನಿಮ್ಮ ಭಾಷೆ ಹೇಗೆ ಗೊತ್ತಾಗಬೇಕು? ಅಂತ ಹಲವು ಶಾಸಕರು ತಮಾಷೆಗೆಳೆದ ಪ್ರಸಂಗವೂ ಸದನದಲ್ಲಿ ನಡೆಯಿತು. ನೀವು ಏನು ಹೇಳಿದ್ರಿ‌ ನಮಗೆ ಗೊತ್ತಾಗಲಿಲ್ಲ. ನಾವೇನು ಮಂಗಳೂರಿನ (Mangaluru) ಅಧಿವೇಶನದಲ್ಲಿ ಇದ್ದೇವಾ? ಅಂತಾ ಪ್ರತಿಪಕ್ಷ ನಾಯಕ ಆರ್.‌ ಅಶೋಕ್‌ (R Ashoka) ಜೋರಾಗಿ ನಕ್ಕು, ಕನ್ನಡದಲ್ಲಿ ಮಾತನಾಡಿ ಎಂದರು. ಈ ವೇಳೆ ವೇದವ್ಯಾಸ ಕಾಮತ್‌ ರಿಂದಲೂ (Veda Vyasa Kamath) ತುಳು ಸಂಭಾಷಣೆ ನಡೆಯಿತು. ಶಾಸಕ ಅಶೋಕ್ ರೈ ಹೇಳಿದಂತೆ 2ನೇ ಅಧಿಕೃತ ಭಾಷೆ ಮಾಡಿ ಎಂದು ಸದನದಲ್ಲಿ ಕೈಮುಗಿದು ಮನವಿ ಮಾಡಿದರು.

ಇದರಿಂದ ತಂಗಡಗಿ ಅನುಪಸ್ಥಿತಿಯಲ್ಲಿ ಪ್ರಿಯಾಂಕ್ ಖರ್ಗೆ ಉತ್ತರ ನೀಡಿ, ಬೇರೆ ರಾಜ್ಯಗಳಲ್ಲಿ ಎರಡು ಭಾಷೆಗಳಿವೆ. ಬಿಹಾರದಲ್ಲೂ ಎರಡು ಭಾಷೆಗಳಿವೆ, ಸ್ವಂತ ಖರ್ಚಿನಲ್ಲಿ ಅಧ್ಯಯನ ಮಾಡಿ ತಂದಿದ್ದಾರೆ. ತುಳು ಭಾಷೆಯ ಪ್ರಾಚೀನತೆ ಇತಿಹಾಸ ಗಮನಕ್ಕಿದೆ. ನನ್ನ ಬಾಲ್ಯ ಸ್ನೇಹಿತ ಶ್ರವಣ್ ಅನ್ನುವವರಿದ್ದರು. ಅವರಿಗೆ ಅವರ ತಾಯಿ ತುಳುವಿನಲ್ಲೇ ಬೈಯ್ಯುತ್ತಿದ್ರು. ಹಾಗಾಗಿ ನೀವೇನು ಹೇಳಿದ್ರಿ ನನಗೂ ಅರ್ಥವಾಗಿದೆ. ನಾನು ಇದರ ಪರವಾಗಿದ್ದೇನೆ. ನಾಳೆಯೇ ಸಚಿವರ ಗಮನಕ್ಕೆ ತರುತ್ತೇನೆ. ಸಭೆ ಮಾಡಿ ನಿರ್ಧಾರ ಮಾಡ್ತೇವೆ, ಅಂತ ಸದನಕ್ಕೆ ಪ್ರಿಯಾಂಕ್ ಖರ್ಗೆ ಉತ್ತರ ನೀಡಿದರು. ಈ ವೇಳೆ ಲಂಬಾಣಿಯನ್ನೂ ಸೇರಿಸುವಂತೆ ಉಪಾಧ್ಯಕ್ಷ ರುದ್ರಪ್ಪ ಲಮಾಣಿ, ಮನವಿ ಮಾಡಿದರು. 8ನೇ ಪರಿಚ್ಚೇದಕ್ಕೆ ಸೇರಿಸಲು ಮನವಿ‌ ಮಾಡಿದರು.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ವಿಷು ಹಬ್ಬದ ಅರ್ಥವೇನು ಗೊತ್ತಾ..? ಸೂರ್ಯ ಸಂಕ್ರಮಣದ ಈ ರಹಸ್ಯ ನಿಮ್ಮ ಜೀವನವೇ ಬದಲಾಯಿಸಬಹುದು..!

ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…

5 hours ago

ಬೇಸಿಗೆ ಬಿತ್ತನೆ ಭರ್ಜರಿ ಏರಿಕೆ..! 64 ಲಕ್ಷ ಹೆಕ್ಟೇರ್ ದಾಟಿದ ಕೃಷಿ ವ್ಯಾಪ್ತಿ, 0.77 ಲಕ್ಷ ಹೆಕ್ಟೇರ್ ಹೆಚ್ಚಳ

ಈ ವರ್ಷ ಬೇಸಿಗೆ ಬಿತ್ತನೆ 64 ಲಕ್ಷ ಹೆಕ್ಟೇರ್ ದಾಟಿದ್ದು, ಕಳೆದ ವರ್ಷಕ್ಕಿಂತ…

5 hours ago

ಮುಂದಿನ 5 ದಿನ ತಾಪಮಾನ ಏರಿಕೆ ಎಚ್ಚರಿಕೆ ! ಉತ್ತರ-ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಬಿಸಿಗಾಳಿ ತೀವ್ರ

ಮುಂದಿನ ಐದು ದಿನಗಳಲ್ಲಿ ಉತ್ತರ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ತಾಪಮಾನ ಹೆಚ್ಚಾಗಲಿದೆ…

19 hours ago

ಹವಾಮಾನ ವರದಿ | 14-04-2026 | ಕರ್ನಾಟಕದಲ್ಲಿ ಉರಿಬಿಸಿಲು…! ಆದರೆ ಮಳೆಯೂ ಬರುತ್ತಿದೆ ! ಯಾವಾಗ ಗೊತ್ತಾ? – ಸದ್ಯ ರೈತರಿಗೆ ಸಲಹೆ ಏನು..?

ರಾಜ್ಯದಲ್ಲಿ ಬಿಸಿಲಿನ ತೀವ್ರತೆ ಮುಂದುವರಿದಿದ್ದು, ಏಪ್ರಿಲ್ 18ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ.…

23 hours ago

ಇರಾನ್-ಇಸ್ರೇಲ್ ಯುದ್ಧದ ಪರಿಣಾಮ – ಮಾವಿನ ರಫ್ತು ಕುಸಿತ, ರೈತರಿಗೆ ಹೊಡೆತ | ಅಲ್ಫೋನ್ಸೊ ಬೆಲೆ ಅರ್ಧಕ್ಕೆ ಇಳಿಕೆ

ಇರಾನ್-ಇಸ್ರೇಲ್ ಯುದ್ಧದಿಂದ ಮಾವಿನ ರಫ್ತು ಕುಸಿತಗೊಂಡು ಬೆಲೆ ತೀವ್ರವಾಗಿ ಇಳಿಕೆಯಾಗಿದೆ. ರೈತರು ನಷ್ಟದಲ್ಲಿ…

1 day ago

ಬೇಸಿಗೆಯ ತಾಪಕ್ಕೆ ತುತ್ತಾದ ವನ್ಯಜೀವಿಗಳಿಗೆ ನೀರಿನ ಜೀವಧಾರೆ | ಕೋಲಾರ ಬಲಮಂದೆ ಗ್ರಾಮ ಪಂಚಾಯಿತಿ ಮಾದರಿ ಕಾರ್ಯ

ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ವ್ಯವಸ್ಥೆ ಮಾಡಿ ಬಲಮಂದೆ ಗ್ರಾಮ ಪಂಚಾಯಿತಿ ಮಾದರಿಯಾಗಿದೆ. ಟ್ಯಾಂಕರ್,…

1 day ago