Advertisement
MIRROR FOCUS

2ನೇ ಹೆಚ್ಚುವರಿ ಭಾಷೆಯಾಗಿ ತುಳುವನ್ನು ಘೋಷಿಸಿ | ತುಳುವಿನಲ್ಲೇ ಸ್ಪೀಕರ್‌ಗೆ ಮನವಿ‌ ಮಾಡಿದ ಶಾಸಕ ಅಶೋಕ್ ರೈ

Share

ಅವಿಭಜಿತ ದಕ್ಷಿಣ ಕನ್ನಡ(Dakshina Kannada) ಹಾಗೂ ಉಡುಪಿ(Udupi) ಜಿಲ್ಲೆಯ ಕೆಲವು ತಾಲೂಕುಗಳನ್ನು ತುಳುನಾಡು(Tulunadu) ಎನ್ನಲಾಗುತ್ತದೆ. ಇಲ್ಲಿನ ಬಹುತೇಕ ಮಂದಿ ತುಳು ಭಾಷೆಯನ್ನು(Tulu language) ಮಾತನಾಡುತ್ತಿದ್ದಾರೆ. ಇತ್ತೀಚೆಗೆ ತುಳು ಲಿಪಿ(Tulu inscription) ಕಲಿಯುವ ಅಭಿಯಾನವೂ ಆರಂಭವಾಗಿದೆ. ಹಲವು ದಶಕಗಳಿಂದ ತುಳು ಭಾಷೆಯನ್ನು 8ನೇ ಪರಿಚ್ಚೇದಕ್ಕೆ ಸೇರಿಸಬೇಕು ಅನ್ನುವುದು ತುಳುವರ ಕೂಗು. ಆದರೆ ಅದು ಇದುವರೆಗೆ ಸಾಧ್ಯವಾಗಿಲ್ಲ. ಇದೀಗ ತುಳು ಭಾಷೆಯನ್ನು (Tulu language) 2ನೇ ಹೆಚ್ಚುವರಿ ಭಾಷೆಯಾಗಿ ಘೋಷಿಸಿ ಎಂದು ಶಾಸಕ ಅಶೋಕ್ ರೈ ವಿಧಾನಸಭೆಯಲ್ಲಿ ಒತ್ತಾಯಿಸಿದರು. ತುಳುವಲ್ಲೇ ಮಾತನಾಡಿದ ಅಶೋಕ್ ರೈ (Ashok Kumar Rai) ಅವರು ಸದನದಲ್ಲಿ ಮನವಿ ಮನವಿ ಮಾಡಿದ್ದರು. ಆ ಕಡೆಯಿಂದ ಸ್ಪೀಕರ್ ಯು.ಟಿ ಖಾದರ್‌ (UT Khader) ಕೂಡ ತುಳುವಿನಲ್ಲೇ ಉತ್ತರ ಕೊಟ್ಟರು.

ಈ ವೇಳೆ ನೀವಿಬ್ಬರೇ ಮಾತನಾಡಿದ್ರೆ ಹೇಗೆ? ನಮಗೆ ನಿಮ್ಮ ಭಾಷೆ ಹೇಗೆ ಗೊತ್ತಾಗಬೇಕು? ಅಂತ ಹಲವು ಶಾಸಕರು ತಮಾಷೆಗೆಳೆದ ಪ್ರಸಂಗವೂ ಸದನದಲ್ಲಿ ನಡೆಯಿತು. ನೀವು ಏನು ಹೇಳಿದ್ರಿ‌ ನಮಗೆ ಗೊತ್ತಾಗಲಿಲ್ಲ. ನಾವೇನು ಮಂಗಳೂರಿನ (Mangaluru) ಅಧಿವೇಶನದಲ್ಲಿ ಇದ್ದೇವಾ? ಅಂತಾ ಪ್ರತಿಪಕ್ಷ ನಾಯಕ ಆರ್.‌ ಅಶೋಕ್‌ (R Ashoka) ಜೋರಾಗಿ ನಕ್ಕು, ಕನ್ನಡದಲ್ಲಿ ಮಾತನಾಡಿ ಎಂದರು. ಈ ವೇಳೆ ವೇದವ್ಯಾಸ ಕಾಮತ್‌ ರಿಂದಲೂ (Veda Vyasa Kamath) ತುಳು ಸಂಭಾಷಣೆ ನಡೆಯಿತು. ಶಾಸಕ ಅಶೋಕ್ ರೈ ಹೇಳಿದಂತೆ 2ನೇ ಅಧಿಕೃತ ಭಾಷೆ ಮಾಡಿ ಎಂದು ಸದನದಲ್ಲಿ ಕೈಮುಗಿದು ಮನವಿ ಮಾಡಿದರು.

ಇದರಿಂದ ತಂಗಡಗಿ ಅನುಪಸ್ಥಿತಿಯಲ್ಲಿ ಪ್ರಿಯಾಂಕ್ ಖರ್ಗೆ ಉತ್ತರ ನೀಡಿ, ಬೇರೆ ರಾಜ್ಯಗಳಲ್ಲಿ ಎರಡು ಭಾಷೆಗಳಿವೆ. ಬಿಹಾರದಲ್ಲೂ ಎರಡು ಭಾಷೆಗಳಿವೆ, ಸ್ವಂತ ಖರ್ಚಿನಲ್ಲಿ ಅಧ್ಯಯನ ಮಾಡಿ ತಂದಿದ್ದಾರೆ. ತುಳು ಭಾಷೆಯ ಪ್ರಾಚೀನತೆ ಇತಿಹಾಸ ಗಮನಕ್ಕಿದೆ. ನನ್ನ ಬಾಲ್ಯ ಸ್ನೇಹಿತ ಶ್ರವಣ್ ಅನ್ನುವವರಿದ್ದರು. ಅವರಿಗೆ ಅವರ ತಾಯಿ ತುಳುವಿನಲ್ಲೇ ಬೈಯ್ಯುತ್ತಿದ್ರು. ಹಾಗಾಗಿ ನೀವೇನು ಹೇಳಿದ್ರಿ ನನಗೂ ಅರ್ಥವಾಗಿದೆ. ನಾನು ಇದರ ಪರವಾಗಿದ್ದೇನೆ. ನಾಳೆಯೇ ಸಚಿವರ ಗಮನಕ್ಕೆ ತರುತ್ತೇನೆ. ಸಭೆ ಮಾಡಿ ನಿರ್ಧಾರ ಮಾಡ್ತೇವೆ, ಅಂತ ಸದನಕ್ಕೆ ಪ್ರಿಯಾಂಕ್ ಖರ್ಗೆ ಉತ್ತರ ನೀಡಿದರು. ಈ ವೇಳೆ ಲಂಬಾಣಿಯನ್ನೂ ಸೇರಿಸುವಂತೆ ಉಪಾಧ್ಯಕ್ಷ ರುದ್ರಪ್ಪ ಲಮಾಣಿ, ಮನವಿ ಮಾಡಿದರು. 8ನೇ ಪರಿಚ್ಚೇದಕ್ಕೆ ಸೇರಿಸಲು ಮನವಿ‌ ಮಾಡಿದರು.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

16 hours ago

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…

1 day ago

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

2 days ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

2 days ago

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುತ್ತಿದೆಯೇ? – ಹೊಸ ಅಧ್ಯಯನದ ಎಚ್ಚರಿಕೆ

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…

2 days ago

ಹವಾಮಾನ ಬದಲಾವಣೆಯಿಂದ ರೈತರ ರಕ್ಷಣೆಗೆ ಸರ್ಕಾರದ ತಂತ್ರ – 310 ಜಿಲ್ಲೆಗಳು ಅಪಾಯದಲ್ಲಿ, 2,661 ಸಹಿಷ್ಣು ತಳಿಗಳ ಅಭಿವೃದ್ಧಿ

ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…

2 days ago