Advertisement
MIRROR FOCUS

ರೈತ ಆತ್ಮಹತ್ಯೆ ಪ್ರಕರಣಗಳಲ್ಲಿ ಇಳಿಕೆ

Share

ರಾಜ್ಯದಲ್ಲಿ ರೈತರ ಆತ್ಮಹತ್ಯೆ ಪ್ರಕರಣಗಳಲ್ಲಿ ಇಳಿಕೆಯಾಗಿರುವುದು ಖುಷಿಯ ಸಂಗತಿಯಾಗಿದೆ. 2023-24 ರಲ್ಲಿ 1254 ಪ್ರಕರಣ, 2024-25 ರಲ್ಲಿ 1178    ಪ್ರಕರಣ ಹಾಗೂ 2025-26 ರಲ್ಲಿ ನವೆಂಬರ್ ವರೆಗೆ ಒಟ್ಟು 377 ರೈತರು ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ವರದಿಯಾಗಿದೆ.

ವಿಧಾನಪರಿಷತ್‌ ಕಲಾಪದಲ್ಲಿ ಸದಸ್ಯ ಕೇಶವಪ್ರಸಾದ್‌ ಅವರು ಕಳೆದ ಎರಡು ವರ್ಷದ ಅವಧಿಯಲ್ಲಿ ನಡೆದಿರುವ ರೈತ ಆತ್ಮಹತ್ಯೆಯ ಬಗ್ಗೆ ಕೇಳಿರುವ ಪ್ರಶ್ನೆಗೆ ಕಂದಾಯ ಸಚಿವರು ಉತ್ತರಿಸಿದ್ದರು. 2023-24 ರಲ್ಲಿ ಬೆಳಗಾವಿ, ಹಾವೇರು, ಧಾರವಾಡ ಜಿಲ್ಲೆಗಳಲ್ಲಿ 100 ಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದರು. 2024-25 ರಲ್ಲಿ ಬೆಳಗಾವಿ, ಹಾವೇರಿ, ಕಲಬುರಗಿ ಜಿಲ್ಲೆಗಳಲ್ಲಿ 100 ಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ವರ್ಷ ಇದುವರೆಗೆ ಬೆಳಗಾವಿಯಲ್ಲಿ 36, ಕಲಬುರಗಿಯಲ್ಲಿ 4o, ಹಾವೇರಿಯಲ್ಲಿ 35  ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಉಡುಪಿ, ಕೋಲಾರ, ದಕ್ಷಿಣ ಕನ್ನಡ, ಕೊಡಗು ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ರೈತ ಆತ್ಮಹತ್ಯೆ ಪ್ರಕರಣಗಳು ತೀರಾ ಕಡಿಮೆ ಇದೆ.  ಬಹುತೇಕ ಕಡೆಗಳಲ್ಲಿ ಸಾಲಬಾಧೆ ಹಾಗೂ ಇತರ ಸಮಸ್ಯೆ ಹೇಳಲಾಗಿದೆ. ಸಾಲಬಾಧೆಯಿಂದ ಮೃತಪಟ್ಟ ರೈತನ ಕುಟುಂಬಕ್ಕೆ ಪರಿಹಾರವಾಗಿ 5 ಲಕ್ಷ ರೂಪಾಯಿ ನೀಡಲಾಗುತ್ತಿದೆ. ಆದರೆ ಎಲ್ಲಾ ತನಿಖೆಗಳನ್ನು ನಡೆಸಿ ಈ ಪರಿಹಾರವನ್ನು ವಿಲೇವಾರಿ ಮಾಡಲಾಗುತ್ತಿದೆ. ರೈತರು ಸಾಲಬಾಧೆಯಿಂದ ಬಳಲುತ್ತಿದ್ದರೆ ಇಲಾಖೆಗಳು ಖುದ್ದಾಗಿ ರೈತನ ಮನೆಗೆ ತೆರಳಿ ಸರ್ಕಾರದ ಯೋಜನೆಗಳ ಬಗ್ಗೆ ಮಾಹಿತಿ ನೀಡಿ, ಮಾನಸಿಕ ಧೈರ್ಯ ತುಂಬುವ ಕೆಲಸ ಮಾಡಲಾಗುತ್ತಿದೆ ಎಂದು ಇಲಾಖೆಯು ಉತ್ತರದಲ್ಲಿ ತಿಳಿಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!

ಏಪ್ರಿಲ್‌ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…

9 hours ago

ಗ್ಯಾಸ್ ಸಿಲಿಂಡರ್ ಕೊರತೆ ಪರಿಣಾಮ : ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆ

ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…

9 hours ago

ಹಸಿರು ಅಮೋನಿಯಾ ಒಪ್ಪಂದಗಳು | ಭಾರತದ ಇಂಧನ ಭದ್ರತೆಗೆ ಹೊಸ ಬಲ..! 2030 ಗುರಿಗೆ ವೇಗ

ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…

9 hours ago

ಕರಾವಳಿಯಲ್ಲಿ ಮಳೆಯ ರಭಸ | ಸುಬ್ರಹ್ಮಣ್ಯ ಆಸುಪಾಸಿನಲ್ಲಿ 50 ಮಿಮೀಗೂ ಹೆಚ್ಚು! ರಾಜ್ಯದ ಹಲವೆಡೆ ಇನ್ನೂ 2 ದಿನ ಮಳೆ ಅಲರ್ಟ್

ಮಾರ್ಚ್ ತಿಂಗಳಲ್ಲಿ ಅಪರೂಪದ ಭಾರೀ ಮಳೆ ಸುಬ್ರಹ್ಮಣ್ಯದಲ್ಲಿ ದಾಖಲಾಗಿದೆ. ರಾಜ್ಯದ ಹಲವೆಡೆ ಇನ್ನೂ…

9 hours ago

“ಕೃಷಿ ಕೂಳೆ ಸುಡುವುದು ಮುಗಿದುಹೋಯ್ತು…!” | ರೈತರಿಗೆ ಹೊಸ ಆದಾಯದ ದಾರಿ, ಕೂಳೆಯಿಂದ ಬಿಟುಮೆನ್ ತಯಾರಿ

ಕೃಷಿ ಕೂಳೆ ಈಗ ಮಾಲಿನ್ಯದ ಮೂಲವಲ್ಲ, ರೈತರಿಗೆ ಆದಾಯದ ಮೂಲವಾಗುತ್ತಿದೆ. ಬಯೋ-ಬಿಟುಮೆನ್ ತಂತ್ರಜ್ಞಾನ…

1 day ago

“ಮಹಿಳೆಯರಿಗೆ ಶಕ್ತಿ ನೀಡಿದರೆ ಕೃಷಿ ಬಲವಾಗುತ್ತದೆ..!” | ವಿಶ್ವದ ಗಮನ ಸೆಳೆಯುತ್ತಿದೆ ಇನ್‌ಕ್ಲೂಸಿವ್‌ ಅಗ್ರಿಕಲ್ಚರ್‌ ಮಾದರಿ

ಮಹಿಳೆಯರನ್ನು ಕೃಷಿ ಮೌಲ್ಯ ಸರಪಳಿಯಲ್ಲಿ ಸೇರಿಸಿದರೆ ಆದಾಯ ಮತ್ತು ಉತ್ಪಾದನೆ ಹೆಚ್ಚುತ್ತದೆ. Inclusive…

1 day ago