Advertisement
MIRROR FOCUS

ರೈತ ಆತ್ಮಹತ್ಯೆ ಪ್ರಕರಣಗಳಲ್ಲಿ ಇಳಿಕೆ

Share

ರಾಜ್ಯದಲ್ಲಿ ರೈತರ ಆತ್ಮಹತ್ಯೆ ಪ್ರಕರಣಗಳಲ್ಲಿ ಇಳಿಕೆಯಾಗಿರುವುದು ಖುಷಿಯ ಸಂಗತಿಯಾಗಿದೆ. 2023-24 ರಲ್ಲಿ 1254 ಪ್ರಕರಣ, 2024-25 ರಲ್ಲಿ 1178    ಪ್ರಕರಣ ಹಾಗೂ 2025-26 ರಲ್ಲಿ ನವೆಂಬರ್ ವರೆಗೆ ಒಟ್ಟು 377 ರೈತರು ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ವರದಿಯಾಗಿದೆ.

ವಿಧಾನಪರಿಷತ್‌ ಕಲಾಪದಲ್ಲಿ ಸದಸ್ಯ ಕೇಶವಪ್ರಸಾದ್‌ ಅವರು ಕಳೆದ ಎರಡು ವರ್ಷದ ಅವಧಿಯಲ್ಲಿ ನಡೆದಿರುವ ರೈತ ಆತ್ಮಹತ್ಯೆಯ ಬಗ್ಗೆ ಕೇಳಿರುವ ಪ್ರಶ್ನೆಗೆ ಕಂದಾಯ ಸಚಿವರು ಉತ್ತರಿಸಿದ್ದರು. 2023-24 ರಲ್ಲಿ ಬೆಳಗಾವಿ, ಹಾವೇರು, ಧಾರವಾಡ ಜಿಲ್ಲೆಗಳಲ್ಲಿ 100 ಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದರು. 2024-25 ರಲ್ಲಿ ಬೆಳಗಾವಿ, ಹಾವೇರಿ, ಕಲಬುರಗಿ ಜಿಲ್ಲೆಗಳಲ್ಲಿ 100 ಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ವರ್ಷ ಇದುವರೆಗೆ ಬೆಳಗಾವಿಯಲ್ಲಿ 36, ಕಲಬುರಗಿಯಲ್ಲಿ 4o, ಹಾವೇರಿಯಲ್ಲಿ 35  ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಉಡುಪಿ, ಕೋಲಾರ, ದಕ್ಷಿಣ ಕನ್ನಡ, ಕೊಡಗು ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ರೈತ ಆತ್ಮಹತ್ಯೆ ಪ್ರಕರಣಗಳು ತೀರಾ ಕಡಿಮೆ ಇದೆ.  ಬಹುತೇಕ ಕಡೆಗಳಲ್ಲಿ ಸಾಲಬಾಧೆ ಹಾಗೂ ಇತರ ಸಮಸ್ಯೆ ಹೇಳಲಾಗಿದೆ. ಸಾಲಬಾಧೆಯಿಂದ ಮೃತಪಟ್ಟ ರೈತನ ಕುಟುಂಬಕ್ಕೆ ಪರಿಹಾರವಾಗಿ 5 ಲಕ್ಷ ರೂಪಾಯಿ ನೀಡಲಾಗುತ್ತಿದೆ. ಆದರೆ ಎಲ್ಲಾ ತನಿಖೆಗಳನ್ನು ನಡೆಸಿ ಈ ಪರಿಹಾರವನ್ನು ವಿಲೇವಾರಿ ಮಾಡಲಾಗುತ್ತಿದೆ. ರೈತರು ಸಾಲಬಾಧೆಯಿಂದ ಬಳಲುತ್ತಿದ್ದರೆ ಇಲಾಖೆಗಳು ಖುದ್ದಾಗಿ ರೈತನ ಮನೆಗೆ ತೆರಳಿ ಸರ್ಕಾರದ ಯೋಜನೆಗಳ ಬಗ್ಗೆ ಮಾಹಿತಿ ನೀಡಿ, ಮಾನಸಿಕ ಧೈರ್ಯ ತುಂಬುವ ಕೆಲಸ ಮಾಡಲಾಗುತ್ತಿದೆ ಎಂದು ಇಲಾಖೆಯು ಉತ್ತರದಲ್ಲಿ ತಿಳಿಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ

ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…

4 hours ago

ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…

11 hours ago

ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ

ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…

1 day ago

ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್

ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…

2 days ago

ರಾಜ್ಯದಲ್ಲಿ ಬರದ ಛಾಯೆ | 178 ತಾಲ್ಲೂಕುಗಳಲ್ಲಿ ತೀವ್ರ ಮಳೆ ಕೊರತೆ, ಜಲಾಶಯಗಳ ನೀರಿನ ಮಟ್ಟ ಶೇ.40ಕ್ಕೆ ಕುಸಿತ

ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…

2 days ago

ಪುತ್ತೂರಿಗೆ ಪುತ್ತಿಲ? ಪುತ್ತೂರಿನ ರಾಜಕೀಯದ ಹೊಸ ವ್ಯಾಕರಣ

ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…

2 days ago