Advertisement
MIRROR FOCUS

ರೈತ ಆತ್ಮಹತ್ಯೆ ಪ್ರಕರಣಗಳಲ್ಲಿ ಇಳಿಕೆ

Share

ರಾಜ್ಯದಲ್ಲಿ ರೈತರ ಆತ್ಮಹತ್ಯೆ ಪ್ರಕರಣಗಳಲ್ಲಿ ಇಳಿಕೆಯಾಗಿರುವುದು ಖುಷಿಯ ಸಂಗತಿಯಾಗಿದೆ. 2023-24 ರಲ್ಲಿ 1254 ಪ್ರಕರಣ, 2024-25 ರಲ್ಲಿ 1178    ಪ್ರಕರಣ ಹಾಗೂ 2025-26 ರಲ್ಲಿ ನವೆಂಬರ್ ವರೆಗೆ ಒಟ್ಟು 377 ರೈತರು ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ವರದಿಯಾಗಿದೆ.

ವಿಧಾನಪರಿಷತ್‌ ಕಲಾಪದಲ್ಲಿ ಸದಸ್ಯ ಕೇಶವಪ್ರಸಾದ್‌ ಅವರು ಕಳೆದ ಎರಡು ವರ್ಷದ ಅವಧಿಯಲ್ಲಿ ನಡೆದಿರುವ ರೈತ ಆತ್ಮಹತ್ಯೆಯ ಬಗ್ಗೆ ಕೇಳಿರುವ ಪ್ರಶ್ನೆಗೆ ಕಂದಾಯ ಸಚಿವರು ಉತ್ತರಿಸಿದ್ದರು. 2023-24 ರಲ್ಲಿ ಬೆಳಗಾವಿ, ಹಾವೇರು, ಧಾರವಾಡ ಜಿಲ್ಲೆಗಳಲ್ಲಿ 100 ಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದರು. 2024-25 ರಲ್ಲಿ ಬೆಳಗಾವಿ, ಹಾವೇರಿ, ಕಲಬುರಗಿ ಜಿಲ್ಲೆಗಳಲ್ಲಿ 100 ಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ವರ್ಷ ಇದುವರೆಗೆ ಬೆಳಗಾವಿಯಲ್ಲಿ 36, ಕಲಬುರಗಿಯಲ್ಲಿ 4o, ಹಾವೇರಿಯಲ್ಲಿ 35  ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಉಡುಪಿ, ಕೋಲಾರ, ದಕ್ಷಿಣ ಕನ್ನಡ, ಕೊಡಗು ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ರೈತ ಆತ್ಮಹತ್ಯೆ ಪ್ರಕರಣಗಳು ತೀರಾ ಕಡಿಮೆ ಇದೆ.  ಬಹುತೇಕ ಕಡೆಗಳಲ್ಲಿ ಸಾಲಬಾಧೆ ಹಾಗೂ ಇತರ ಸಮಸ್ಯೆ ಹೇಳಲಾಗಿದೆ. ಸಾಲಬಾಧೆಯಿಂದ ಮೃತಪಟ್ಟ ರೈತನ ಕುಟುಂಬಕ್ಕೆ ಪರಿಹಾರವಾಗಿ 5 ಲಕ್ಷ ರೂಪಾಯಿ ನೀಡಲಾಗುತ್ತಿದೆ. ಆದರೆ ಎಲ್ಲಾ ತನಿಖೆಗಳನ್ನು ನಡೆಸಿ ಈ ಪರಿಹಾರವನ್ನು ವಿಲೇವಾರಿ ಮಾಡಲಾಗುತ್ತಿದೆ. ರೈತರು ಸಾಲಬಾಧೆಯಿಂದ ಬಳಲುತ್ತಿದ್ದರೆ ಇಲಾಖೆಗಳು ಖುದ್ದಾಗಿ ರೈತನ ಮನೆಗೆ ತೆರಳಿ ಸರ್ಕಾರದ ಯೋಜನೆಗಳ ಬಗ್ಗೆ ಮಾಹಿತಿ ನೀಡಿ, ಮಾನಸಿಕ ಧೈರ್ಯ ತುಂಬುವ ಕೆಲಸ ಮಾಡಲಾಗುತ್ತಿದೆ ಎಂದು ಇಲಾಖೆಯು ಉತ್ತರದಲ್ಲಿ ತಿಳಿಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 10.08.2026 | ಕರ್ನಾಟಕದಲ್ಲಿ ಬಿಟ್ಟು ಬಿಟ್ಟು ಸಾಮಾನ್ಯ ಮಳೆ; ಆಗಸ್ಟ್‌ 12ರಂದು ಕರಾವಳಿಯಲ್ಲಿ ಮಳೆ ಹೆಚ್ಚಳ ಸಾಧ್ಯತೆ

ಮಧ್ಯಪ್ರದೇಶದಲ್ಲಿ ಹೊಸ ತಿರುವಿಕೆ ಪರಿಣಾಮ: ಕರಾವಳಿ, ಮಲೆನಾಡಿನಲ್ಲಿ ಮಳೆ ಚುರುಕು ಸಾಧ್ಯತೆ ಕರ್ನಾಟಕದ…

14 hours ago

ಕಡಿಮೆ ನೀರು, ಕಡಿಮೆ ಗೊಬ್ಬರ… ಹೆಚ್ಚು ಇಳುವರಿ – ಕೃಷಿಯಲ್ಲಿ ಹೊಸ ಕ್ರಾಂತಿ

ಕಡಿಮೆ ಸಂಪನ್ಮೂಲ ಬಳಸಿ ಹೆಚ್ಚು ಉತ್ಪಾದನೆ ಪಡೆಯಲು ಸ್ಮಾರ್ಟ್ ಸಂಪನ್ಮೂಲ ನಿರ್ವಹಣೆ ಅಗತ್ಯವಾಗಿದೆ.…

23 hours ago

ಬರದತ್ತ ಇಂಗ್ಲೆಂಡ್‌ – ಆಹಾರ ಕೊರತೆ, ಕಾಡ್ಗಿಚ್ಚಿನ ಎಚ್ಚರಿಕೆ – ಕೃಷಿಗೆ ಭಾರಿ ಹೊಡೆತ – ರೈತರಿಗೆ ₹4,400 ಕೋಟಿ ನಷ್ಟದ ಅಂದಾಜು

ತೀವ್ರ ಬರ ಮತ್ತು ಉಷ್ಣಾಂಶದಿಂದ ಇಂಗ್ಲೆಂಡ್‌ನಲ್ಲಿ ಕೃಷಿ ಉತ್ಪಾದನೆ ಕುಸಿದಿದ್ದು, ಆಹಾರ ಕೊರತೆ…

23 hours ago

ಹವಾಮಾನ ವರದಿ | 09.08.2026 | ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ ಕ್ಷೀಣ; ಆಗಸ್ಟ್‌ 11ರಿಂದ ಮಲೆನಾಡಿನಲ್ಲೂ ಮಳೆ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಸಣ್ಣ ಅವಧಿಯ ಸಾಮಾನ್ಯ ಮಳೆ ಮಾತ್ರ; ಮಲೆನಾಡಿನಲ್ಲಿ ಮಳೆ ಕಡಿಮೆಯಾಗುವ…

2 days ago

ಕೃಷಿ ಉತ್ಪನ್ನಕ್ಕೆ ಮೌಲ್ಯವರ್ಧನೆ – ಒಡಿಶಾದಲ್ಲಿ ₹43,437 ಕೋಟಿ ಹೂಡಿಕೆ ಪ್ರಸ್ತಾವನೆ

ಆಹಾರ ಸಂಸ್ಕರಣಾ ವಲಯದಲ್ಲಿ ಒಡಿಶಾ ₹43,437 ಕೋಟಿ ಮೌಲ್ಯದ ಹೂಡಿಕೆ ಪ್ರಸ್ತಾವನೆಗಳನ್ನು ಆಕರ್ಷಿಸಿದ್ದು,…

2 days ago

ಕರ್ನಾಟಕದ 69.60 ಲಕ್ಷ ಹೆಕ್ಟೇರ್ ಭೂಮಿ ಹಾನಿ – ಕೃಷಿ ಉತ್ಪಾದಕತೆಗೆ ದೊಡ್ಡ ಸವಾಲು

ಕರ್ನಾಟಕದಲ್ಲಿ 69.60 ಲಕ್ಷ ಹೆಕ್ಟೇರ್ ಭೂಮಿ ಭೂಸವಕಳಿ ವ್ಯಾಪ್ತಿಯಲ್ಲಿದೆ ಎಂದು ಕೇಂದ್ರ ಸರ್ಕಾರದ…

2 days ago