ಅರಣ್ಯ ಕಾಯಿದೆ 1963 ರ ಸೆಕ್ಷನ್ 4 ರಡಿ ಅಧಿಸೂಚನೆ ಆಗುವ ಮುನ್ನ ಮಂಜೂರಾಗಿರುವ ಭೂಮಿಯನ್ನು ಅರಣ್ಯದಿಂದ ಕೈಬಿಡಲು ಸರ್ಕಾರಕ್ಕೆ ಅವಕಾಶವಿದ್ದು, ಅಧಿಸೂಚನೆಯ ನಂತರ 30-40 ವರ್ಷಗಳಿಂದ ಮನೆಕಟ್ಟಿರುವ, ಉಳಿಮೆ ಮಾಡುತ್ತಿರುವ ಜನರಿಗೆ ನ್ಯಾಯ ಕೊಡಿಸಲು ಕೇಂದ್ರ ಹಾಗೂ ಸುಪ್ರೀಂಕೋರ್ಟ್ಗೆ ವಿಶೇಷ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ತಿಳಿಸಿದ್ದಾರೆ.
ವಿಕಾಸಸೌಧದಲ್ಲಿ ಚಿಕ್ಕಮಗಳೂರು ಜಿಲ್ಲೆಯ ಶಾಸಕರುಗಳು ಮತ್ತು ಅರಣ್ಯ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳೊಂದಿಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಅವರು, ವಸತಿ ಪ್ರದೇಶ, ಪಟ್ಟಾಭೂಮಿ ಇತ್ಯಾದಿ ಇರುವ ಪರಿಭಾವಿತ ಅರಣ್ಯ ಹಾಗೂ ಸೆಕ್ಷನ್ 4 ಅಧಿಸೂಚನೆ ನಂತರ ಮಂಜೂರಾಗಿರುವ ಜಮೀನಿಗೆ ಪರ್ಯಾಯವಾಗಿ ಬೇರೆಡೆ ಲಭ್ಯವಿರುವ ಅರಣ್ಯೇತರ ಭೂಮಿ ನೀಡಿ ಈ ಜಮೀನನ್ನು ಅರಣ್ಯ ವ್ಯಾಪ್ತಿಯಿಂದ ಕೈಬಿಡುವಂತೆ ಸುಪ್ರೀಂಕೋರ್ಟ್ ಮತ್ತು ಕೇಂದ್ರಕ್ಕೆ ಮನವಿ ಸಲ್ಲಿಸಲಾಗುವುದು ಎಂದು ತಿಳಿಸಿದರು. ಹಲವು ಪ್ರಕರಣಗಳಲ್ಲಿ ಸೆಕ್ಷನ್ 4 ಅಧಿಸೂಚನೆ ಆಗಿ 60-70 ವರ್ಷವಾಗಿದ್ದರೂ ಇನ್ನೂ ಸೆಕ್ಷನ್ 17 ಆಗಿರುವುದಿಲ್ಲ. 1980 ರ ಅರಣ್ಯ ಸಂರಕ್ಷಣಾ ಕಾಯಿದೆ ಜಾರಿ ಬಳಿಕ ಈಗ ಅಂತಹ ಅರಣ್ಯ ಕೈಬಿಡುವುದು ಕಷ್ಟಸಾಧ್ಯವಾಗಿದೆ. ಹೀಗಾಗಿ ಕೇಂದ್ರ ಹಾಗೂ ಸುಪ್ರೀಂಕೋರ್ಟ್ಗೆ ಮನವಿ ಮಾಡುವುದು ಅನಿವಾರ್ಯ ಎಂದು ತಿಳಿಸಿದರು.
ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…
ಕರಾವಳಿಯಲ್ಲಿ ಮಳೆಯ ಸಾಧ್ಯತೆ ಇದ್ದರೂ ಗಾಳಿಯ ಪ್ರಭಾವದಿಂದ ಅದು ಕಡಿಮೆಯಾಗಬಹುದು. ಉಳಿದ ಕರ್ನಾಟಕದಲ್ಲಿ…
ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.
ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…
ಏಪ್ರಿಲ್ 4ರವರೆಗೆ ಮಳೆ ಮುಂದುವರಿಯಲಿದೆ, ಬಳಿಕ ತಾತ್ಕಾಲಿಕ ಕಡಿಮೆ. ಏಪ್ರಿಲ್ 10ರಿಂದ ಮತ್ತೆ…
ಏಪ್ರಿಲ್ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…