ಅರಣ್ಯ ಕಾಯಿದೆ 1963 ರ ಸೆಕ್ಷನ್ 4 ರಡಿ ಅಧಿಸೂಚನೆ ಆಗುವ ಮುನ್ನ ಮಂಜೂರಾಗಿರುವ ಭೂಮಿಯನ್ನು ಅರಣ್ಯದಿಂದ ಕೈಬಿಡಲು ಸರ್ಕಾರಕ್ಕೆ ಅವಕಾಶವಿದ್ದು, ಅಧಿಸೂಚನೆಯ ನಂತರ 30-40 ವರ್ಷಗಳಿಂದ ಮನೆಕಟ್ಟಿರುವ, ಉಳಿಮೆ ಮಾಡುತ್ತಿರುವ ಜನರಿಗೆ ನ್ಯಾಯ ಕೊಡಿಸಲು ಕೇಂದ್ರ ಹಾಗೂ ಸುಪ್ರೀಂಕೋರ್ಟ್ಗೆ ವಿಶೇಷ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ತಿಳಿಸಿದ್ದಾರೆ.
ವಿಕಾಸಸೌಧದಲ್ಲಿ ಚಿಕ್ಕಮಗಳೂರು ಜಿಲ್ಲೆಯ ಶಾಸಕರುಗಳು ಮತ್ತು ಅರಣ್ಯ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳೊಂದಿಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಅವರು, ವಸತಿ ಪ್ರದೇಶ, ಪಟ್ಟಾಭೂಮಿ ಇತ್ಯಾದಿ ಇರುವ ಪರಿಭಾವಿತ ಅರಣ್ಯ ಹಾಗೂ ಸೆಕ್ಷನ್ 4 ಅಧಿಸೂಚನೆ ನಂತರ ಮಂಜೂರಾಗಿರುವ ಜಮೀನಿಗೆ ಪರ್ಯಾಯವಾಗಿ ಬೇರೆಡೆ ಲಭ್ಯವಿರುವ ಅರಣ್ಯೇತರ ಭೂಮಿ ನೀಡಿ ಈ ಜಮೀನನ್ನು ಅರಣ್ಯ ವ್ಯಾಪ್ತಿಯಿಂದ ಕೈಬಿಡುವಂತೆ ಸುಪ್ರೀಂಕೋರ್ಟ್ ಮತ್ತು ಕೇಂದ್ರಕ್ಕೆ ಮನವಿ ಸಲ್ಲಿಸಲಾಗುವುದು ಎಂದು ತಿಳಿಸಿದರು. ಹಲವು ಪ್ರಕರಣಗಳಲ್ಲಿ ಸೆಕ್ಷನ್ 4 ಅಧಿಸೂಚನೆ ಆಗಿ 60-70 ವರ್ಷವಾಗಿದ್ದರೂ ಇನ್ನೂ ಸೆಕ್ಷನ್ 17 ಆಗಿರುವುದಿಲ್ಲ. 1980 ರ ಅರಣ್ಯ ಸಂರಕ್ಷಣಾ ಕಾಯಿದೆ ಜಾರಿ ಬಳಿಕ ಈಗ ಅಂತಹ ಅರಣ್ಯ ಕೈಬಿಡುವುದು ಕಷ್ಟಸಾಧ್ಯವಾಗಿದೆ. ಹೀಗಾಗಿ ಕೇಂದ್ರ ಹಾಗೂ ಸುಪ್ರೀಂಕೋರ್ಟ್ಗೆ ಮನವಿ ಮಾಡುವುದು ಅನಿವಾರ್ಯ ಎಂದು ತಿಳಿಸಿದರು.
ತೆಂಗು–ಅಡಿಕೆ ತೋಟಗಳ ನಡುವೆ ಅರಿಶಿಣ, ಏಲಕ್ಕಿ, ಮೆಣಸು ಬೆಳೆದು ತುಮಕೂರು ಜಿಲ್ಲೆಯ ರೈತರು…
ಮುಂಗಾರು ಮಳೆಯ ಕೊರತೆ ಎದುರಿಸುತ್ತಿರುವ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಹೆಚ್ಚಿಸಲು ಸರ್ಕಾರ…
ಕಸ್ತೂರಿ ರಂಗನ್ ವರದಿ ಜಾರಿಗೆ ಕರ್ನಾಟಕ ಸರ್ಕಾರ ಅವಕಾಶ ನೀಡುವುದಿಲ್ಲ ಎಂದು ಶಿಕ್ಷಣ…
ಭಾರತದ 126 ಪ್ರಮುಖ ನಗರಗಳ ಹವಾಮಾನ ಸಿದ್ಧತೆಯನ್ನು ಅಳೆಯಲಾಗಿದ್ದರೂ, 2021ರ ಮೌಲ್ಯಮಾಪನದಲ್ಲಿ ರಾಷ್ಟ್ರೀಯ…
ಭಾರತದ ಕಾಫಿ ರಫ್ತು ಗಳಿಕೆ 2021-22ರ ಸುಮಾರು 1 ಶತಕೋಟಿ ಡಾಲರ್ನಿಂದ 2025-26ರಲ್ಲಿ…
ಮೀನಿನ ಮುಳ್ಳು ಮತ್ತು ಹುರುಪೆಯನ್ನು ವೈಜ್ಞಾನಿಕವಾಗಿ ಸಂಸ್ಕರಿಸಿ ಹಲ್ಲುಗಳ ಪುನರ್ ನಿರ್ಮಾಣ ಹಾಗೂ…