Advertisement
ಅನುಕ್ರಮ

ಹರುಷದ ಬೆಳಕು ಬರಲಿ

Share
ಬೆಳಕು ತರಲಿ ಹೊಸತು ಹರುಷ
ಹೊಸೆದು ಬಾಳ ಯಾನಕೆ
ಒನಪು ಇರಲಿ ಬೆಸೆದು ಮನಸ
ಬಸಿದು ನೋವ ದೂರಕೆ  ||
ಹಳೆಯ ಕೊಳೆಯು ತೊಲಗಲಿಂದು
ಬೇವನಳಿಸಿ  ಬಾಳಲಿ
ಕಳೆಯು ಮೂಡಿ ಬರಲಿ ಮೊಗದಿ
ಸಿಹಿಯನುಣಿಸಿ ಬದುಕಲಿ  ||
ಸಹನೆಯೊರತೆ ನಿತ್ಯ ಹರಿದು
ಒಲವು ಮೂಡಿ ಅರಳಲಿ
ದ್ವೇಷ ರೋಷ ಕೋಪವಳಿದು
ಗೆಲುವು ಕೂಡಿ ನಲಿಯಲಿ  ||
ಸತ್ಯ ನಿಷ್ಠೆ ನ್ಯಾಯ ಪಥವು
ನಮಗೆ ದಾರಿ ತೋರಲಿ
ನಿತ್ಯ ಸ್ನೇಹವಿರಲು ಮತವು
ಚೆಲುವು ನಗೆಯ ಬೀರಲಿ   ||
ಬಡತನದ  ಶಾಪವಳಿದು
ಹಸಿವು  ದೂರವಾಗಲಿ
ಮುದಿತನಕೆ ಪ್ರೀತಿ ಒಲಿದು
ಬಾಳು ಸ್ವರ್ಗವೆನಿಸಲಿ    ||
* ರೂಪಾಪ್ರಸಾದ ಕೋಡಿಂಬಳ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಅಂಡಮಾನಿಗೆ ಮುಂಗಾರು ಶೀಘ್ರ ಪ್ರವೇಶ ಸಾಧ್ಯತೆ : ಕೇರಳಕ್ಕೆ ಮುಂಗಾರು ಬೇಗನೆ ಆಗಮನದ ಸೂಚನೆ

ಮೇ 15 ರ ಸುಮಾರಿಗೆ ಮುಂಗಾರು ಅಂಡಮಾನ್ ಸಮುದ್ರ ಪ್ರವೇಶಿಸುವ ಸಾಧ್ಯತೆ ಇದೆ.…

9 hours ago

ಹವಾಮಾನ ವರದಿ | 14-05-2026 | ಮೇ 20-25 ರೊಳಗೆ ಕೇರಳಕ್ಕೆ ಮುಂಗಾರು ಪ್ರವೇಶ ಸಾಧ್ಯತೆ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಮುಂದುವರಿದಿದೆ. ಮೇ 20-25ರೊಳಗೆ…

9 hours ago

ಹವಾಮಾನ ವರದಿ | 13-05-2026| ಕರ್ನಾಟಕದಲ್ಲಿ ಇನ್ನೂ ಕೆಲ ದಿನ ಗುಡುಗು ಸಹಿತ ಮಳೆ| ಮೇ 20-25ರೊಳಗೆ ಮುಂಗಾರು ಪ್ರವೇಶ ಸಾಧ್ಯತೆ!

ಕರ್ನಾಟಕದಲ್ಲಿ 14.05.2026ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆಯ ಪ್ರಕಾರ ಕರಾವಳಿ, ಮಲೆನಾಡು…

1 day ago

ಹವಾಮಾನ ವರದಿ | 12-05-2026 | ಮೇ 20ರ ಸುಮಾರಿಗೆ ಕರಾವಳಿಯಲ್ಲಿ ಮುಂಗಾರು ಮಾದರಿಯ ಮಳೆ ಸಾಧ್ಯತೆ..! |

ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲು ಮುಂದುವರಿದರೂ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ…

2 days ago

ರೋಸ್ಟೆಡ್‌ ಅಡಿಕೆ- ಸುಪ್ರೀಂ ಕೋರ್ಟ್‌ ಮಹತ್ವದ ಆದೇಶ | “ರೋಸ್ಟೆಡ್‌ ಅಡಿಕೆ” ವರ್ಗೀಕರಣಕ್ಕೆ ಮುದ್ರೆ, ಜಪ್ತಿ ಸರಕುಗಳಿಗೆ ಮಾರ್ಗಸೂಚಿ

‘ರೋಸ್ಟೆಡ್‌ ಅಡಿಕೆ’ ವರ್ಗೀಕರಣ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ ಅಲಹಾಬಾದ್‌ ಹೈಕೋರ್ಟ್‌ ಆದೇಶಕ್ಕೆ ತಾತ್ಕಾಲಿಕ…

3 days ago