Advertisement
ಅನುಕ್ರಮ

ಬೆಳಕಿನ ಹಬ್ಬ ದೀಪಾವಳಿ……| ಅರ್ಥಪೂರ್ಣ ಸಂದೇಶಗಳ ಬಗ್ಗೆ ವಿವೇಕಾನಂದ ಎಚ್‌ ಕೆ ಬರೆಯುತ್ತಾರೆ…|

Share

ಎಷ್ಟೊಂದು ಸುಂದರ ಸಂದೇಶಗಳು,
ಎಷ್ಟೊಂದು ಮನಮೋಹಕ ಶುಭಾಶಯಗಳು,
ಎಷ್ಟೊಂದು ಅದ್ಭುತ ಕಾವ್ಯ ರಚನೆಗಳು,
ಎಷ್ಟೊಂದು ಅರ್ಥಪೂರ್ಣ ವರ್ಣನೆಗಳು,

Advertisement

ಆದರೆ,…….,

ಇವು ಪದಗಳಲ್ಲಿ ಮಾತ್ರ ಮೂಡಿದರೆ ಸಾಕೆ ?
ಇವು ಮನಸ್ಸಿನಾಳಕ್ಕೆ ಇಳಿಯುವುದೆಂದು ?
ವಾಸ್ತವ ನಡವಳಿಕೆಯಾಗಿ ಪರಿವರ್ತನೆ ಹೊಂದುವುದೆಂದು?
ಅವು ಪ್ರಾಯೋಗಿಕ ಆಚರಣೆಗಳಾಗುವುದೆಂದು?
ಇವು ಕೇವಲ ಉಪಯೋಗವಿಲ್ಲದ ಭಾವನಾತ್ಮಕ ಬರಹಗಳೇ ?
ಅರ್ಥ ಕಳೆದುಕೊಂಡ ನಿರ್ಜೀವ ಅಕ್ಷರಗಳೇ ?

ಕತ್ತಲನ್ನು ಅಜ್ಞಾನಕ್ಕೂ ಬೆಳಕನ್ನು ಜ್ಞಾನಕ್ಕೂ ಹೋಲಿಸಲಾಗುತ್ತದೆ,
ಕತ್ತಲನ್ನು ದುಷ್ಟತನಕ್ಕೂ ಬೆಳಕನ್ನು ಒಳ್ಳೆಯತನಕ್ಕೂ ಉದಾಹರಿಸಲಾಗುತ್ತದೆ.

ಹೌದು, ಆದರೆ ಅದು ಆಗುವುದು ಯಾವಾಗ,
ತಲತಲಾಂತರದಿಂದ ಆಚರಿಸುತ್ತಿರುವ ಈ ಹಬ್ಬದಲ್ಲಿ ನಾವು ನಮ್ಮ ಅಜ್ಞಾನವನ್ನು ತೊರೆದು ಜ್ಞಾನಿಗಳಾಗುತ್ತಿಲ್ಲವೇಕೆ ?

ಒಂದು ವೇಳೆ ಯಾರಾದರೂ ನಾವು ಜ್ಞಾನಿಗಳಾಗಿದ್ದೇವೆ ಎಂದು ಭಾವಿಸುವುದಾದರೆ ಸಂತೋಷ. ನಿಮಗೆ ಧನ್ಯವಾದಗಳು.

ಆದರೆ, ನಾನು ಈಗ ವಾಸಿಸುತ್ತಿರುವ ಸಮಾಜದ ಜನರ ಬದುಕನ್ನು ಗಮನಿಸಿದರೆ ನನಗೆ ಹಾಗೆ ಅನಿಸುತ್ತಿಲ್ಲ.
ನಿಜ, ಕಂಪ್ಯೂಟರ್ ಬಂದಿದೆ, ವಾಟ್ಸಾಪ್ ಪೇಸ್ ಬುಕ್, ಟ್ವಿಟರ್ ಬಂದಿದೆ, ಮೆಟ್ರೋ ಬಂತು, ರಾಕೆಟ್ ಬಂತು,ಅತ್ಯುತ್ತಮ ಕಾರು ಬೈಕು ಮಾಲ್ ಗಳು ಎಲ್ಲಾ ಬಂದಿದೆ, ಇವೆಲ್ಲವೂ ಮನುಷ್ಯನೇ ಸಂಶೋದಿಸಿದ ತಾಂತ್ರಿಕ ಸಾಧನೆಗಳು. ಇದಕ್ಕಾಗಿ ಹೆಮ್ಮೆ ಪಡೋಣ.

ಆದರೆ, ………,

ನಿರ್ಜೀವ ವಸ್ತುಗಳ ವಿಜೃಂಭಣೆಯಲ್ಲಿ ಮರೆಯಾಗುತ್ತಿರುವ ಸಜೀವ ಮೌಲ್ಯಗಳ ನೆನಪಿದೆಯೇ, ವಿಷವಾಗುತ್ತಿರುವ ಗಾಳಿ ನೀರು ಆಹಾರ ಬಿಡಿ,ಮನುಷ್ಯ ಸಂಬಂದಗಳೇ ವ್ಯಾಪಾರಿಕರಣವಾಗುತ್ತಿವೆ. ಸ್ವಂತ ಅಣ್ಣ ತಮ್ಮ ಅಕ್ಕ ತಂಗಿ ಆಸ್ತಿ ಹಂಚಿಕೆಗಾಗಿ ಶತ್ರುಗಳಾಗಿ ಬಹಳ ಕಾಲವಾಯಿತು. ಜಮೀನುಗಳ ಬೆಲೆಯೇರಿಕೆಯೊಂದಿಗೆ ರಕ್ತಸಂಬಂಧಿಗಳ ವಿಶ್ವಾಸ ದ್ರೋಹಗಳು ದಿನನಿತ್ಯದ ಕಸುಬಾಯಿತು. ಹಣಕ್ಕಾಗಿ ಕೊಲೆ ಸುಲಿಗೆಗಳು ಗಂಡು ಹೆಣ್ಣುಗಳೆಂಬ ಬೇದವಿಲ್ಲದೆ ಹವ್ಯಾಸಿ ವೃತ್ತಿಗಳಾದವು.

ಮಾಧ್ಯಮಗಳಲ್ಲಿ ಅಪರಾಧದ ಕಾರ್ಯಕ್ರಮಗಳೇ ಬಹುಬೇಡಿಕೆಯ ಬಹುಲಾಭದಾಯಕ ಸುದ್ದಿಗಳಾದವು.
ಎಲ್ಲೋ ಯಾರೋ ಒಬ್ಬರೋ ಇಬ್ಬರೋ ಪ್ರಾಮಾಣಿಕರನ್ನು ಹಿಡಿದುಕೊಂಡು ಬಂದು ಹಾರ ಹಾಕಿ ಪ್ರಶಸ್ತಿ ನೀಡಿ ಹಾಡಿ ಹೊಗಳಿ ಸನ್ಮಾನಿಸಿ ಕಳಿಸುವ ಸ್ಥಿತಿ ಬಂದಿದೆ.

ಆತ್ಮವಂಚಕ ಮನಸ್ಥಿತಿಯ ಲಫಂಗರೇ ಆಡಳಿತದ ಮುಖ್ಯವಾಹಿನಿಗೆ ಬಂದು ಎಲ್ಲವನ್ನೂ ಆಕ್ರಮಿಸಿಕೊಂಡಿದ್ದಾರೆ.
ಹಾಗಾದರೆ ಈ ಬೆಳಕಿನ ಹಬ್ಬದ ಮಹತ್ವ ಕೇವಲ ಸಿಹಿತಿಂದು ಪಟಾಕಿ ಹಚ್ಚುವುದು ಮಾತ್ರವೇ. ಪರಿವರ್ತನೆ ಆಗದೆ ಜ್ಞಾನದ ಬೆಳಕನ್ನು ಕಾಣದೆ ಇನ್ನೆಷ್ಟುದಿನ ಹೀಗೆ ಕಾಟಾಚಾರದ ಹಬ್ಬ ಆಚರಿಸುವುದು.

ಎಚ್ಚೆತ್ತುಕೊಳ್ಳೋಣ, ಈಗಲಾದರೂ………………..

ಹಬ್ಬಗಳನ್ನು ಅದರ ನಿಜ ಅರ್ಥದಲ್ಲಿ ಆಚರಿಸಿ ಅಳವಡಿಸಿಕೊಳ್ಳೋಣ. ಇದು ಅಸಾಧ್ಯವೇನಲ್ಲ. ಜೀವನ ಶೈಲಿಯಲ್ಲಿ ಸ್ವಲ್ಪ ಬದಲಾವಣೆ ಮಾಡಿಕೊಂಡರೆ ಸಾಕು. ನುಡಿದಂತೆ ನಡೆಯುವ ಒಳ್ಳೆಯ ನಡವಳಿಕೆ ರೂಪಿಸಿಕೊಳ್ಳೋಣ.

ಹಾಗೆಯೇ……….

ಪಟಾಕಿ ಮಾಲಿನ್ಯದ ಬಗ್ಗೆ ಎಚ್ಚರ…….

ಪಟಾಕಿ ಮಾಲಿನ್ಯದ ಬಗ್ಗೆ ಎಚ್ಚರ.......

ನೈಸರ್ಗಿಕವಾಗಿ ಅತ್ಯಂತ ಕೆಟ್ಟ ಪರಿಣಾಮ ಬೀರುತ್ತದೆ ಪಟಾಕಿ………..

ನೈತಿಕವಾಗಿ ಅನಧಿಕೃತ ಕೊಲೆಗಡುಕನಂತೆ ಕೆಲಸ ಮಾಡುತ್ತದೆ ಪಟಾಕಿ…….

ಅತಿ ಹೆಚ್ಚು ಬಾಲಕಾರ್ಮಿಕರನ್ನು ದುಡಿಸಿಕೊಳ್ಳುವ ಉದ್ಯಮ ಪಟಾಕಿ,

ಭಯಂಕರ ರೋಗಗಳಿಗಿಂತ ಬೇಗ ಅನಿರೀಕ್ಷಿತ ಸಾವು ತರುತ್ತದೆ ಪಟಾಕಿ,….

ಸಿಡಿಮದ್ದು ಸಿಡಿಸಿ, ಪರಿಸರ ನಾಶಪಡಿಸಿ, ಸಂಭ್ರಮಿಸಿ ಮಾಡಿಕೊಳ್ಳವ ಪರೋಕ್ಷ ಆತ್ಮಹತ್ಯೆ ಪಟಾಕಿ,

ಬಗಲಲ್ಲಿ ಸಿಡಿಮದ್ದು ಇಟ್ಟುಕೊಂಡು, ಸುರಕ್ಷತೆಯ ಬಗ್ಗೆ ಮೊಸಳೆ ಕಣ್ಣೀರು ಸುರಿಸುವ, ನಾಟಕ ಮಾಡುವ, ಆತ್ಮ ವಂಚನೆ ಮಾಡಿಸುತ್ತದೆ ಪಟಾಕಿ,……..

ಚಿಕ್ಕಮಕ್ಕಳನ್ನು ಹೆದರಿಸುತ್ತದೆ, ವಯಸ್ಸಾದವರಿಗೆ ಕಿರಿಕಿರಿ ಮಾಡುತ್ತದೆ, ಮಹಿಳೆಯರಿಗೆ ಇಷ್ಟವಾಗುವುದಿಲ್ಲ. ಮೂಕ ಪ್ರಾಣಿಗಳನ್ನು ಓಡಿಸುತ್ತದೆ, ಪಕ್ಷಿಗಳಿಗೆ ಪ್ರಾಣಭಯ ಉಂಟು ಮಾಡುತ್ತದೆ ಪಟಾಕಿ,……….

ಕ್ಷಣಮಾತ್ರದಲ್ಲಿ ಯಾವುದೇ ಉಪಯೋಗವಿಲ್ಲದೆ ಕೋಟ್ಯಾಂತರ ಹಣ ನೀರ ಮೇಲಿನ ಹೋಮದಂತೆ ಕರಗಿಸಿ ಹೊಗೆ ಉಗುಳುವ ಶಕ್ತಿ ಇರುವುದೇ ಪಟಾಕಿ,……..

ಪುಂಡ ಪೋಕರಿಗಳ ಚೆಲ್ಲಾಟಕ್ಕೆ ಬೇಕು ಪಟಾಕಿ, ಪುಢಾರಿಗಳ, ಬಕೆಟ್ ರಾಜಕಾರಣಿಗಳ ಪ್ರದರ್ಶನಕ್ಕೆ ಬೇಕು ಪಟಾಕಿ, ಹಬ್ಬ, ಉತ್ಸವ, ಕ್ರಿಕೆಟ್ ನ ಅಂಧಾಭಿಮಾನಿಗಳಿಗೆ ಬೇಕು ಪಟಾಕಿ,……….

ಬಡತನ, ಶೊಷಣೆ, ಬೂಟಾಟಿಕೆಯ ಸಂಕೇತ ಪಟಾಕಿ, ಶಾಸ್ತ್ರ, ಸಂಪ್ರದಾಯ, ಸಂಸ್ಕೃತಿ ಹೆಸರಿನ ದುರುಪಯೋಗ ಪಟಾಕಿ, ಮೌಢ್ಯ, ಅಜ್ಞಾನ, ಡಾಂಬಿಕತನ, ಉಢಾಪೆಗಳ ಪ್ರದರ್ಶನ ಪಟಾಕಿ,….

ಕೇವಲ ಕೆಲವು ಜನರಿಗೆ ಉದ್ಯೋಗ ನೀಡಿದೆ ಮತ್ತು ಅವರ ಆರ್ಥಿಕ ಚ್ಯೆತನ್ಯಕ್ಕೆ, ದಾರಿ ಮಾಡಿಕೊಟ್ಟಿದೆ ಎಂಬ ಒಂದು ಒಳ್ಳೆಯ ಅಂಶ ಬಿಟ್ಟರೆ, ಅತ್ಯಂತ, ಅಪಾಯಕಾರಿ ಆಚರಣೆ ಈ ಪಟಾಕಿ ಸುಡುವುದು……

ದೀಪಾವಳಿ ಹಬ್ಬದ ಸಂದರ್ಭದಲ್ಲಿ ಆಸ್ಪತ್ರೆ ಗಳಲ್ಲಿ,ಇದಕ್ಕಾಗಿ ವಿಶೇಷ ಹೆಚ್ಚುವರಿ ವ್ಯವಸ್ಥೆ ಮಾಡಿಕೊಳ್ಳುತ್ತಾರೆ ಎಂದರೆ ಇದರ ಭಯಂಕರ ಹಾವಳಿ ಊಹಿಸಿ, ಮಕ್ಕಳು ಕಣ್ಣು ಕಳೆದುಕೊಳ್ಳುವ, ದೇಹ ಸುಟ್ಟುಕೊಳ್ಳುವ ದೃಶ್ಯ ನೆನಪಿಸಿಕೊಳ್ಳಿ……..

ಆದರೂ ಇದನ್ನು ಬಹಿಷ್ಕರಿಸಿಲ್ಲ ನಮ್ಮ ನಾಗರಿಕ ಸಮಾಜ,
ಆದರೂ ಇದನ್ನು ನಿಷೇದಿಸಿಲ್ಲ ನಮ್ಮನ್ನಾಳುವ ಸರ್ಕಾರ,
ಮೊಸಳೆ ಕಣ್ಣೀರು ಮಾತ್ರ ಎಲ್ಲರಿಂದ, ಸಮರ್ಥನೆ ಬೇರೆ ಕೆಲವರಿಂದ,…….

ಪಟಾಕಿ ವಿಷಯದಲ್ಲಿ ಸುರಕ್ಷತೆ ಎಂಬುದು ಸಧ್ಯಕ್ಕೆ ನಮ್ಮ ದೇಶದಲ್ಲಿ ಭ್ರಮೆ ಅಷ್ಟೆ,
ಈ ಪಟಾಕಿ ಸಾವು ನಿನ್ನೆ ಮೊನ್ನೆಯದಲ್ಲ, ನಮ್ಮ ಮೂರ್ಖ ಸಂಭ್ರಮಕ್ಕೆ
ಕಾರ್ಮಿಕರ ಬಲಿದಾನ ಪ್ರತಿವರ್ಷ ನಿರಂತರ,……

ಮಾನವೀಯ ದೃಷ್ಟಿಯಿಂದ ಪಟಾಕಿ ಅವಲಂಬಿತರಿಗೆ ಪರಿಹಾರ ನೀಡಿ ಇದನ್ನು ನಿಲ್ಲಿಸಿ,
ಸತ್ತ ಮೇಲೆ ಪರಿಹಾರ ನೀಡುವ ಪರಿಪಾಠ ನಿಲ್ಲಿಸಿ……..

ಬೆಳಕಿನ ಹಬ್ಬ ಕೆಲವರ ಪಾಲಿಗೆ ಕತ್ತಲಾಗುವುದು ಬೇಡ.
ಹಬ್ಬದ ಸಂಭ್ರಮ ಎಲ್ಲರಿಗೂ ಸುಖ ಸಂತೋಷ ತರಲಿ……..

ಪಟಾಕಿಗೆ ಅನುಕೂಲಕರ ಪರ್ಯಾಯ ಮಾರ್ಗ ಹುಡುಕೋಣ.
ಇದು ಧರ್ಮದ – ಸಂಪ್ರದಾಯದ ವಿಷಯ ಅಲ್ಲ. ನಮ್ಮದೇ ಪ್ರಕೃತಿಯ ರಕ್ಷಣೆಯ ವಿಷಯ……..

ಹಿಂದೆ ಜನಸಂಖ್ಯೆ ಕಡಿಮೆ ಇತ್ತು. ಜನರ ಕೊಳ್ಳುವ ಶಕ್ತಿ ಅಷ್ಟಾಗಿ ಇರಲಿಲ್ಲ. ಗಿಡಮರಗಳು ಯಥೇಚ್ಛವಾಗಿದ್ದವು. ಆಗ ಪಟಾಕಿ ಒಂದು ಸಂಭ್ರಮವಾಗಿತ್ತು.
ಈಗ ಉಸಿರಾಡುವ ಗಾಳಿಯೇ ವಿಷವಾಗಿರುವಾಗ ಇದನ್ನು ಸಂಪ್ರದಾಯದ ಹೆಸರಲ್ಲಿ ಮುಂದುವರಿಸುವುದು ಬೇಡ,
ಎಂದಿನಂತೆ ಮಣ್ಣಿನ ದೀಪ ಹಚ್ಚಿ ಆಚರಿಸೋಣ……….

ಪಟಾಕಿ ನಿಷೇಧ ಕೇವಲ ದೀಪಾವಳಿಗೆ ಮಾತ್ರವಲ್ಲ, ಯಾವುದೇ ಧರ್ಮದ ಯಾವುದೇ ಆಚರಣೆಗಳ ಎಲ್ಲಾ ಸಂದರ್ಭಕ್ಕೂ‌ ಅನ್ವಯಿಸಬೇಕು……

ಇತರೆ ಧರ್ಮದ ಕೆಲವು ಆಚರಣೆಗಳು ಪರಿಸರ ನಾಶ ಎಂದಾದರೆ ಮುಲಾಜಿಲ್ಲದೆ ಅದನ್ನು ನಿಷೇಧಿಸಬೇಕು. ಪರಿಸರ ರಕ್ಷಣೆಯ ವಿಷಯ ಧರ್ಮ ರಕ್ಷಣೆಗಿಂತ ಬಹುಮಖ್ಯ……..

ನಾವು ಆರೋಗ್ಯವಾಗಿದ್ದರೆ ಮಾತ್ರ ಉಳಿದದ್ದೆಲ್ಲ ಅಲ್ಲವೇ. ಆದ್ದರಿಂದ ಈ ಬಾರಿ ಕನಿಷ್ಠ ನಮ್ಮ ಮಿತಿಯಲ್ಲಿ ಸಾಧ್ಯವಾದಷ್ಟು ಪಟಾಕಿ ನಿಯಂತ್ರಿಸಿಕೊಳ್ಳೋಣ. ನಮ್ಮದೇ ಹಿತಕ್ಕಾಗಿ…..

# ವಿವೇಕಾನಂದ ಎಚ್‌ ಕೆ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ವಿವೇಕಾನಂದ ಎಚ್‌ ಕೆ

ಸಾಮಾಜಿಕ ಕಾರ್ಯಕರ್ತ ( ಪ್ರಬುದ್ಧ ಮನಸ್ಸು, ಪ್ರಬುದ್ಧ ಸಮಾಜ,ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ ಮನಸ್ಸುಗಳ ಅಂತರಂಗದ ಚಳವಳಿಯನ್ನು  ಜ್ಞಾನ ಭಿಕ್ಷಾ ಪಾದಯಾತ್ರೆಯ ಮೂಲಕ ನಡೆಸುತ್ತಿರುವ ಸಾಮಾಜಿಕ ಕಾರ್ಯಕರ್ತ)

Published by
ವಿವೇಕಾನಂದ ಎಚ್‌ ಕೆ

Recent Posts

ಹವಾಮಾನ ವರದಿ | 21-04-2026 | ಕರಾವಳಿ-ಮಲೆನಾಡಿನಲ್ಲಿ ಮಳೆ ಜೋರಾಗಲಿದೆ, ಉತ್ತರ ಒಳನಾಡಿಗೂ ಗುಡುಗು ಮಳೆ..!

ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…

1 hour ago

ವಿದ್ಯುತ್ ದರ ಶಾಕ್..! ಸಣ್ಣ ಕೈಗಾರಿಕೆಗಳಿಗೆ ಭಾರೀ ಹೊರೆ – ಉಮಾ ರೆಡ್ಡಿ ಎಚ್ಚರಿಕೆ

ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…

9 hours ago

ಮುಳಬಾಗಿಲಿನಲ್ಲಿ ಹೋಟೆಲ್ ಮೇಲೆ ದಾಳಿ : 30 ಲೀಟರ್ ಹಳೆಯ ತುಪ್ಪ ಜಪ್ತಿ, ದಂಡ

ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…

9 hours ago

ರೈತರಿಗೆ ಗುಡ್ ನ್ಯೂಸ್..! ತೊಗರಿ ಖರೀದಿ ಅವಧಿ ಮೇ 15ರವರೆಗೆ ವಿಸ್ತರಣೆ

ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…

9 hours ago

ವಿಜಯಪುರದಲ್ಲಿ ತಾಪಮಾನ ಹೆಚ್ಚಳ : ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ AC ವಾರ್ಡ್ ಸಿದ್ಧ

ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…

9 hours ago

ಹೊಸರುಚಿ | ಗುಜ್ಜೆ ಮಂಚೂರಿ – ಕರಾವಳಿಯ ಸಾಂಪ್ರದಾಯಿಕ ರುಚಿಗೆ ಚೈನೀಸ್ ಟ್ವಿಸ್ಟ್

ಗುಜ್ಜೆ ಬಳಸಿ ತಯಾರಿಸುವ ಮಂಚೂರಿ ರುಚಿಕರ ಫ್ಯೂಷನ್ ತಿನಿಸಾಗಿದೆ. ಮನೆಯಲ್ಲಿ ಸುಲಭವಾಗಿ ಮಾಡುವ…

19 hours ago