Advertisement
MIRROR FOCUS

ದೀಪಾವಳಿ ಶುಭಾಶಯ | ಬೆಳಕಿನ ಹಬ್ಬದ ಜ್ಞಾನದ ಜ್ಯೋತಿ…… | ವಿವೇಕಾನಂದ ಎಚ್‌ ಕೆ ಬರೆಯುತ್ತಾರೆ ಮನಸ್ಸಿನ ಕನ್ನಡಿಯಲ್ಲಿ |

Share

ಬೆಳಕಿನ ಹಬ್ಬದ ಜ್ಞಾನದ ಜ್ಯೋತಿ……, ಜ್ಞಾನ – ಬುದ್ದಿ – ತಿಳಿವಳಿಕೆ…..  ಎಂಬ ಸಾಮಾನ್ಯ ಅರ್ಥದ ಅನುಭವ ಅಥವಾ ಅನುಭಾವ ಮುಗಿದು ಹೋಗುವ ವಸ್ತುಗಳ ಪಟ್ಟಿಯಲ್ಲಿ ಸೇರುತ್ತದೆ………

ಸಾಮಾನ್ಯವಾಗಿ ಪ್ರಕೃತಿಯಲ್ಲಿ ಎರಡು ರೀತಿಯ ವಸ್ತುಗಳನ್ನು ಪಟ್ಟಿ ಮಾಡಲಾಗಿದೆ. ಮುಗಿದ ಹೋಗುವ ಮತ್ತು ಎಂದೂ ಮುಗಿಯದ ವಸ್ತುಗಳು ಎಂದು….

ಜ್ಞಾನ ಮೊದಲ ಪಟ್ಟಿಯಲ್ಲಿ ಸೇರುತ್ತದೆ. ಆದರೆ ಅದರ ವಿಶೇಷತೆ ಎಂದರೆ ಅದಕ್ಕೆ ಎರಡನೇ ಪಟ್ಟಿಯಲ್ಲಿಯೂ ಸ್ಥಾನ ಕಲ್ಪಿಸಬಹುದು. ಅದು ವ್ಯಕ್ತಿಗಳ ಶ್ರಮ ಸಾಧನೆ ಮತ್ತು ಪ್ರಯತ್ನದ ಮೇಲೆ ಅವಲಂಬಿಸಿರುತ್ತದೆ……

ಒಂದಷ್ಟು ಜನ ಜ್ಞಾನ ಎಂದರೆ ಹಣ ಅಧಿಕಾರ ಆಸ್ತಿ ಸಂಪಾದನೆ ಎಂದು ಭಾವಿಸಿರುತ್ತಾರೆ. ಅದರ ಆಧಾರದ ಮೇಲೆ ಜ್ಞಾನವನ್ನು ಅಳೆಯುತ್ತಾರೆ.

ಇನ್ನೊಂದಿಷ್ಟು ಜನ ಅಕ್ಷರ ಕಲಿಕೆಯ ಮೂಲಕ ಅಂಕಗಳ ಆಧಾರದ ಮೇಲೆ ಪಡೆಯುವ ಉದ್ಯೋಗ ಸಂಬಳ ಮತ್ತು ಸ್ಥಾನಮಾನಗಳನ್ನು ಜ್ಞಾನದ ಬಲದಿಂದ ಪಡೆದದ್ದು ಎಂದು ಅರ್ಥೈಸುತ್ತಾರೆ.

ಮತ್ತೆ ಕೆಲವರು ಜ್ಞಾನವೆಂಬುದು ಅರಿವಿನ ಕ್ರಮ. ಅದು ಒಂದು ಜೀವನಶೈಲಿ. ಬದುಕಿನ ಅನುಭವದ ಮೂಲಕ ಗಳಿಸಿಕೊಳ್ಳವ ತಿಳಿವಳಿಕೆ ಎಂದು ಕರೆಯುತ್ತಾರೆ.

ಇನ್ನೂ ಹಲವರು ಜ್ಞಾನ ಓದಿನಿಂದ, ಪ್ರಯಾಣ ಪ್ರವಾಸದಿಂದ, ಸಜ್ಜನರ ಸಹವಾಸದಿಂದ, ಚಿಂತನೆಗಳಿಂದ, ಅಲೌಕಿಕ ಶಕ್ತಿಗಳಿಂದ, ಧ್ಯಾನ ಯೋಗ ಮುಂತಾದ ಆಧ್ಯಾತ್ಮಿಕ ಶಕ್ತಿಯಿಂದ ಮೂಡುವ ಅನುಭಾವ ಎಂದೂ ಕರೆಯುತ್ತಾರೆ.

ಈ ಎಲ್ಲಾ ಅಭಿಪ್ರಾಯಗಳು ಜ್ಞಾನಕ್ಕೆ ಹೇರುವ ಮಿತಿಗಳು ಅಥವಾ ನಮ್ಮ ಅನುಕೂಲಕ್ಕೆ ತಕ್ಕಂತೆ ಅರ್ಥೈಸಿ ನಾವು ಮಾಡಿಕೊಳ್ಳಬಹುದಾದ ಸಮಾಧಾನ ಮಾತ್ರ.

ಏಕೆಂದರೆ ಜ್ಞಾನವೆಂಬುದು ಒಂದು ಮಿತಿಗೆ ಒಳಪಡುವ ಅನುಭಾವವಲ್ಲ. ಅದನ್ನು ನಿರ್ಧಿಷ್ಟವಾಗಿ ಹೀಗೆ ಎಂದು ಕಟ್ಟಿಹಾಕಲು ಸಾಧ್ಯವಿಲ್ಲ. ಅದು ನಿಂತ ನೀರಲ್ಲ. ಹರಿಯುವ ನದಿ. ಆದರೆ ಅದನ್ನು ನಾವು ಆಗಾಗ ತುಂಬಿಸುತ್ತಿರಬೇಕು. ಅದು ನಿರಂತರವಾಗಿ ತನ್ನ ಚಲನಶೀಲ ಗುಣವನ್ನು ಉಳಿಸಿಕೊಳ್ಳಬೇಕಾದರೆ ನಮ್ಮ ಪ್ರಯತ್ನವೂ ಮುಖ್ಯ. ಎಂದೋ ಏನೋ ಓದಿದ ಕೇಳಿದ ನೋಡಿದ ಚಿಂತಿಸಿದ ವಿಷಯಗಳ ಮೇಲೆ ರೂಪಿಸಿಕೊಂಡ ಜ್ಞಾನ ಎಲ್ಲಾ ಕಾಲಕ್ಕೂ ಸಲ್ಲುತ್ತದೆ ಅಷ್ಟು ಸಾಕು ಎಂಬ ಅಜ್ಞಾನ ಕೆಲವರಲ್ಲಿ ಇರುತ್ತದೆ.

ಐಎಎಸ್‌ ಕೆಎಎಸ್ ಸೇರಿ ಆ ರೀತಿಯ ಅಧಿಕಾರಿಗಳೇ ಇರಬಹುದು, ವೈದ್ಯ, ಇಂಜಿನಿಯರ್ ಶಿಕ್ಷಕ ವಕೀಲ ಚಾಲಕ ಸೇರಿ ಆ ರೀತಿಯ ವೃತ್ತಿ ನಿರತರೇ ಇರಬಹುದು, ರಾಜಕಾರಣಿ ಧರ್ಮಾಧಿಕಾರಿ ವ್ಯಾಪಾರಿ ರೀತಿಯ ಮಹತ್ವಾಕಾಂಕ್ಷಿಗಳೇ ಇರಬಹುದು ಅಥವಾ ಇವುಗಳಿಗೆ ಸೇರದ ಇನ್ನೂ ಯಾರೇ ಆಗಿರಲಿ ಒಂದು ಹಂತದವರೆಗೆ ಕಷ್ಟ ಪಟ್ಟು ಆ ವಿಷಯದಲ್ಲಿ ಜ್ಞಾನವನ್ನು ಪಡೆಯಲು ಪ್ರಯತ್ನಿಸುತ್ತಾರೆ ಮತ್ತು ಅದನ್ನು ತಮ್ಮ ಭೌತಿಕ ಬೆಳವಣಿಗೆಗೆ ಉಪಯೋಗಿಸಿಕೊಳ್ಳುತ್ತಾರೆ. ಅಲ್ಲಿ ಒಂದಷ್ಟು ಯಶಸ್ಸು ಹಣ ಅಧಿಕಾರ ಸಿಕ್ಕ ನಂತರ ಜ್ಞಾನವನ್ನು ನಿರ್ಲಕ್ಷಿಸುತ್ತಾರೆ ಅಥವಾ ವೇಗ ಮತ್ತು ಸ್ಪರ್ಧಾತ್ಮಕ ಮಾರುಕಟ್ಟೆಯಲ್ಲಿ ಕಳೆದುಹೋಗುತ್ತಾರೆ ಅಥವಾ ತಮಗೆ ಈಗಾಗಲೇ ಜ್ಞಾನದ ಅರಿವು ಸಾಕಷ್ಟು ಇದೆ. ಅದೇ ಕಾರಣದಿಂದಾಗಿ ನಾವು ಈ ಯಶಸ್ಸು ಪಡೆದಿರುವುದು ಎಂದು ಭಾವಿಸಿ ತೃಪ್ತರಾಗಿರುತ್ತಾರೆ ಅಥವಾ ಆ ರೀತಿಯ ಅಜ್ಞಾನ ಅಹಂಕಾರ ಮನೋಭಾವ ಹೊಂದಿರುತ್ತಾರೆ.

ಆ ಪರಿಸ್ಥಿತಿಯನ್ನೇ ಮುಗಿದ ಹೋಗುವ ಜ್ಞಾನದ ಹಂತ ಎಂದು ಕರೆಯುವುದು. ನಮ್ಮ ಅರಿವಿಗೆ ನಾವು ಹೇರಿಕೊಳ್ಳುವ ಮಾನಸಿಕ ಮಿತಿ ಇದು. ಇದು ಕ್ರಮೇಣ ನಮ್ಮ ಮಾನಸಿಕ ಸಮತೋಲನವನ್ನು ಕಾಯ್ದುಕೊಳ್ಳಲು ವಿಫಲವಾಗಿ ಅತೃಪ್ತಿ ಅಸಮಾಧಾನ ಅಸಹನೆಗೆ ಕಾರಣವಾಗುತ್ತದೆ. ಏಕೆಂದರೆ ನಮಗರಿವಿಲ್ಲದೆ ಜ್ಞಾನವೆಂಬ ಅರಿವಿನ ವಿಟಮಿನ್ ಕೊರತೆ ನಮಗೆ ಕಾಡುತ್ತದೆ ಮತ್ತು ನಮಗಿರುವ ಜ್ಞಾನದ ಮಟ್ಟ ನಮ್ಮ ಮಾನಸಿಕ ಸಮತೋಲನ ಕಾಪಾಡಲು ಸಾಕಾಗುವುದಿಲ್ಲ.

ಆದ್ದರಿಂದ ಆ ಜ್ಞಾನವೆಂಬ ಅನುಭಾವವನ್ನು ನಿರಂತರವಾಗಿ ಬ್ಯಾಟರಿ ಚಾರ್ಜ್ ಮಾಡುವಂತೆ ಆಗಾಗ ಮಾಡುತ್ತಲೇ ಇರಬೇಕು. ಅದು ಕಡಿಮೆಯಾಗುತ್ತಿದ್ದಂತೆ ಮತ್ತೆ ಮತ್ತೆ ಚಾರ್ಜ್ ಮಾಡಬೇಕು. ಇಲ್ಲದಿದ್ದರೆ ಅದು ಡೆಡ್ ಸ್ಥಿತಿಗೆ ಬರುತ್ತದೆ ಮುಂದೆ ಅದನ್ನು ಉಪಯೋಗಿಸುವುದು ಕಷ್ಟ.

ಆದರೆ, ಜ್ಞಾನದ ಬ್ಯಾಟರಿಯನ್ನು ಹೇಗೆ ಚಾರ್ಜ್ ಮಾಡಬೇಕು ಎಂಬುದು ವ್ಯಕ್ತಿಯ ಮಾನಸಿಕ, ದೈಹಿಕ, ಆರ್ಥಿಕ, ಸಾಮಾಜಿಕ, ಶೈಕ್ಷಣಿಕ, ಪ್ರದೇಶವಾರು ಸೇರಿ ಅನೇಕ ವಿಷಯಗಳನ್ನು ಅವಲಂಬಿಸಿರುತ್ತದೆ. ಕಾಯಕದಿಂದ, ಯೋಗದಿಂದ, ಧ್ಯಾನದಿಂದ, ಭಕ್ತಿಯಿಂದ, ಅಧ್ಯಯನದಿಂದ, ಚಿಂತನೆಯಿಂದ, ಪ್ರವಾಸದಿಂದ, ಅಭ್ಯಾಸದಿಂದ, ಯೋಚನಾ ಶಕ್ತಿಯ ಹೊಸ ಪ್ರಯೋಗಗಳಿಂದ, ಜನರ ಒಡನಾಟದಿಂದ, ಪ್ರಕೃತಿಯ ಮಡಿಲಿನ ವಾಸದಿಂದ, ಕೆಲವೊಮ್ಮೆ ಮೌನದಿಂದ, ನಿರ್ಲಿಪ್ತತೆಯಿಂದ, ಕಲಿಕೆಯಿಂದ, ವಿಶಾಲ ಹೃದಯದಿಂದ ಹೀಗೆ ನಾನಾ ರೀತಿಯಲ್ಲಿ ಅದನ್ನು ಚಾರ್ಜ್ ಮಾಡಿಕೊಳ್ಳವ ಅವಕಾಶ ಮತ್ತು ಸಾಧ್ಯತೆ ಇರುತ್ತದೆ. ಇದರಿಂದಾಗಿ ನಮ್ಮ ಒಟ್ಟು ವ್ಯಕ್ತಿತ್ವ ವಿಕಸನವಾಗಿ ನಮ್ಮ ಜೀವನಮಟ್ಟ ಸುಧಾರಿಸುತ್ತದೆ.

ಜ್ಞಾನಕ್ಕೆ ಅಪಾರ ಶಕ್ತಿ ಇದೆ. ಅದು ನಮ್ಮ ನೋವು ನಲಿವುಗಳನ್ನು ನಿಯಂತ್ರಿಸುತ್ತದೆ. ಮಾನಸಿಕ ಮತ್ತು ದೈಹಿಕ ಸಮತೋಲನ ಕಾಪಾಡುತ್ತದೆ. ಕ್ರಿಯೆ ಪ್ರತಿಕ್ರಿಯೆಗಳು ನಮ್ಮ ಹಿಡಿತಕ್ಕೆ ಸಿಗುವಂತೆ ಮಾಡುತ್ತದೆ. ನಮ್ಮೊಳಗಿನ ಅಜ್ಞಾನವನ್ನು ನಮಗೆ ತಿಳಿಸಿಕೊಡುತ್ತದೆ. ಹಾಗೆಯೇ ನಮ್ಮೊಳಗಿನ ಅಪಾರ ಸಾಮರ್ಥ್ಯವನ್ನು ನಮಗೆ ಪರಿಚಯಿಸಿ ಸಾಧನೆ ಮಾಡಲು ಪ್ರೇರೇಪಿಸುತ್ತದೆ. ನಮ್ಮ ದೈನಂದಿನ ಸಮಸ್ಯೆಗಳಿಗೆ ಪರಿಹಾರವನ್ನು ಸೂಚಿಸುತ್ತದೆ.

ಬೆಳಕಿ ಹಬ್ಬ ದೀಪಾವಳಿಯ ಜ್ಯೋತಿ ಬೆಳಗುವ ಸಾಂಪ್ರದಾಯಿಕ ವ್ಯವಸ್ಥೆಯ ಸಾಂಕೇತಿಕತೆ ಇದನ್ನು ಪ್ರತಿಬಿಂಬಿಸುತ್ತದೆ. ನಾವು ನಮ್ಮೊಳಗಿನ ಜ್ಞಾನದ ಹಣತೆಯನ್ನು ಬೆಳಗಿಸುವ ಸಂಕಲ್ಪ ಮಾಡಲು ಈ ಹಬ್ಬವನ್ನು ಉಪಯೋಗಿಸಿಕೊಳ್ಳೋಣ ಎಂದು ಮನವಿ ಮಾಡುತ್ತಾ…… ಎಲ್ಲರಿಗೂ ದೀಪಾವಳಿ ಹಬ್ಬದ ಶುಭಾಶಯಗಳು….

# ವಿವೇಕಾನಂದ ಎಚ್‌ ಕೆ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ವಿವೇಕಾನಂದ ಎಚ್‌ ಕೆ

ಸಾಮಾಜಿಕ ಕಾರ್ಯಕರ್ತ ( ಪ್ರಬುದ್ಧ ಮನಸ್ಸು, ಪ್ರಬುದ್ಧ ಸಮಾಜ,ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ ಮನಸ್ಸುಗಳ ಅಂತರಂಗದ ಚಳವಳಿಯನ್ನು  ಜ್ಞಾನ ಭಿಕ್ಷಾ ಪಾದಯಾತ್ರೆಯ ಮೂಲಕ ನಡೆಸುತ್ತಿರುವ ಸಾಮಾಜಿಕ ಕಾರ್ಯಕರ್ತ)

Published by
ವಿವೇಕಾನಂದ ಎಚ್‌ ಕೆ

Recent Posts

ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ

ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…

10 hours ago

ರಾಜ್ಯದಲ್ಲಿ ಬರದ ಛಾಯೆ- ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ

ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…

10 hours ago

ಹುಲಿ-ಚಿರತೆ ಹಾವಳಿ ನಿಯಂತ್ರಣಕ್ಕೆ ಆಗ್ರಹ – ಚಾಮರಾಜನಗರದಲ್ಲಿ ಅರಣ್ಯ ಇಲಾಖೆ ವಿರುದ್ಧ ರೈತ ಸಂಘಟನೆಗಳ ಪ್ರತಿಭಟನೆ

ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…

10 hours ago

ಮುಂಗಾರು ದುರ್ಬಲ: ಯಾದಗಿರಿ ರೈತರಿಗೆ ಕೃಷಿ ಇಲಾಖೆಯ ಮಹತ್ವದ ಸಲಹೆ

ಯಾದಗಿರಿ ಜಿಲ್ಲೆಯಲ್ಲಿ ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ತೇವಾಂಶ ಸಂರಕ್ಷಣೆ, ಬೀಜೋಪಚಾರ ಹಾಗೂ ಕಡಿಮೆ…

10 hours ago

ಬ್ರಿಟನ್‌ನಲ್ಲಿ ಉರಿ ಬಿಸಿಲು – ಎರಡು ತಿಂಗಳಲ್ಲಿ 2,700ಕ್ಕೂ ಹೆಚ್ಚು ಸಾವು..! ಹವಾಮಾನ ಬದಲಾವಣೆಯಿಂದ ಶೇ.40ಕ್ಕೂ ಹೆಚ್ಚು ಜೀವಹಾನಿ ಎಂದ ಅಧ್ಯಯನ

ಬ್ರಿಟನ್‌ನಲ್ಲಿ ಮೇ–ಜೂನ್ ಉಷ್ಣ ಅಲೆಗಳಿಂದ 2,700ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಈ ಸಾವುಗಳಲ್ಲಿ…

10 hours ago

ನೈಸರ್ಗಿಕ ಕೃಷಿಗೆ ರಾಜಸ್ಥಾನದ ದೊಡ್ಡ ಹೆಜ್ಜೆ : 32 ಸಂಸ್ಥೆಗಳೊಂದಿಗೆ ಒಪ್ಪಂದ, ರೈತರಿಗೆ ತಂತ್ರಜ್ಞಾನ – ಮಾರುಕಟ್ಟೆ ಬೆಂಬಲ

ನೈಸರ್ಗಿಕ ಕೃಷಿ ಮತ್ತು ಕೃಷಿ ತಂತ್ರಜ್ಞಾನ ಅಭಿವೃದ್ಧಿಗೆ ರಾಜಸ್ಥಾನ ಸರ್ಕಾರ 32 ಸಂಸ್ಥೆಗಳೊಂದಿಗೆ…

18 hours ago