ದೀಪಾವಳಿ | ಮಂಗಳೂರಿನಲ್ಲಿ ಸೌಹಾರ್ದ ದೀಪಾವಳಿಯ ಸಂಭ್ರಮ |

October 26, 2022
8:50 PM

ದೇಶಾದ್ಯಂತ ಆಚರಿಸಲ್ಪಡುವ ಬೆಳಕಿನ ಹಬ್ಬ ದೀಪಾವಳಿಯನ್ನು(Deepavali) ಸೌಹಾರ್ದ ದೀಪಾವಳಿಯನ್ನಾಗಿ ಆಚರಿಸಬೇಕೆಂಬ ಉದ್ದೇಶದಿಂದ  ಸಮಾನ ಮನಸ್ಕರು ಮಂಗಳೂರು (Mangalore) ಇದರ ಆಶ್ರಯದಲ್ಲಿ ಮಂಗಳೂರು ನಗರದ ಸ್ಟೇಟ್ ಬ್ಯಾಂಕ್ ಬಳಿಯಲ್ಲಿರುವ ಹ್ಯಾಮಿಲ್ಟನ್ ವೃತ್ತದಲ್ಲಿ ಸೌಹಾರ್ದ ದೀಪಾವಳಿಯನ್ನು ಆಚರಿಸಲಾಯಿತು.

Advertisement
Advertisement

ಸರ್ವ ಜನತೆಯ ಮನೆ ಮನ ಬೆಳಗಿಸುವ ಹಬ್ಬವಾದ ದೀಪಾವಳಿಯು ಅಜ್ಞಾನ, ಅಂಧಶ್ರದ್ದೆ, ದ್ವೇಷ ತುಂಬಿದ ಕತ್ತಲೆಯನ್ನು ಹೋಗಲಾಡಿಸಿ, ವಿಜ್ಞಾನ, ವೈಜ್ಞಾನಿಕ ಮನೋಭಾವ, ಪ್ರೀತಿ ತುಂಬಿದ ಬೆಳಕನ್ನು ಮೂಡಿಸಬೇಕಾಗಿದೆ. ಆ ಮೂಲಕ ಸೌಹಾರ್ದತೆ ಮಾನವೀಯತೆ ಬೆಳಗಿಸಬೇಕೆಂಬ ಆಶಯದೊಂದಿಗೆ ಜರುಗಿದ ದೀಪಾವಳಿ ಕಾರ್ಯಕ್ರಮದಲ್ಲಿ ಮಾಜಿ ಮೇಯರ್ ಶಶಿಧರ್ ಹೆಗ್ಡೆ, ಡಿವೈಎಫ್‌ಐ ನಾಯಕರಾದ ಮುನೀರ್ ಕಾಟಿಪಳ್ಳ, ಮಾಜಿ ಉಪಮೇಯರ್ ಮಹಮ್ಮದ್ ಕುಂಜತ್ತಬೈಲ್, ಸ್ಥಳೀಯ ಕಾರ್ಪೊರೇಟರ್ ಅಬ್ದುಲ್ ಲತೀಫ್, ಕಾರ್ಮಿಕ ನಾಯಕರಾದ ಸುನಿಲ್ ಕುಮಾರ್ ಬಜಾಲ್, ಸಾಮರಸ್ಯ ಮಂಗಳೂರಿನ ಮಂಜುಳಾ ನಾಯಕ್, ಸಮರ್ಥ್ ಭಟ್, ಯುವಜನ ನಾಯಕರಾದ ಸಂತೋಷ್ ಬಜಾಲ್, ನವೀನ್ ಕೊಂಚಾಡಿ, ಮನೋಜ್ ವಾಮಂಜೂರು, ತಯ್ಯೂಬ್ ಬೆಂಗರೆ, ಸಾಮಾಜಿಕ ಚಿಂತಕರಾದ ಅಸುಂತ ಡಿಸೋಜ, ಕ್ವೀನಿ ಪರ್ಸಿ ಆನಂದ್ ಮುಂತಾದವರು ಹಾಜರಿದ್ದರು.

ಖ್ಯಾತ ಹಾಡುಗಾರ್ತಿ ಮೇಘನಾ ಕುಂದಾಪುರ ಅವರಿಂದ ಸೌಹಾರ್ದ ಹಾಡುಗಳು ಪ್ರಸ್ತುತಗೊಂಡವು. ಬಳಿಕ ಪಟಾಕಿ ಸಿಡಿಸಿ ಸಿಹಿತಿಂಡಿ ಹಂಚಲಾಯಿತು.

 

Advertisement
Advertisement

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಅಡುಗೆಯ ಕಚ್ಚಾ ಎಣ್ಣೆಯ ಮೇಲಿನ ಆಮದು ಸುಂಕ ಕಡಿತ | ತೆಂಗಿಗಿಲ್ಲ ಆತಂಕ.. | ಧಾರಣೆ ಇಳಿಕೆಯ ಆತಂಕವಿಲ್ಲ |
June 4, 2025
11:06 AM
by: ಡಾ|ವಿಘ್ನೇಶ್ವರ ಭಟ್‌ ವರ್ಮುಡಿ
ಅರಣ್ಯದ ಬಗ್ಗೆ ಹೊಸ ಪ್ರಜ್ಞೆಯನ್ನು ಜನರು ಜಾಗೃತಗೊಳಿಸಬೇಕು
June 4, 2025
7:27 AM
by: The Rural Mirror ಸುದ್ದಿಜಾಲ
ಒಂದು ಕ್ರೀಡಾ ಗೆಲುವಿಗೆ ಅಷ್ಟು ಅತಿರೇಕದ ಪ್ರತಿಕ್ರಿಯೆ ಒಳ್ಳೆಯ ಲಕ್ಷಣವಲ್ಲ……
June 4, 2025
7:21 AM
by: ವಿವೇಕಾನಂದ ಎಚ್‌ ಕೆ
ಸೂರ್ಯ-ಶನಿಯಿಂದ ಶಕ್ತಿಶಾಲಿ ಪಂಚಮಿ ಯೋಗ.. | ಏನಿದು ಯೋಗ..? ಯಾವ ರಾಶಿಗೆ ವಿಶೇಷವಾದ ಅನುಕೂಲ..?
June 4, 2025
6:45 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group