ಸುದ್ದಿಗಳು

ದೀಪಾವಳಿ | ಮಂಗಳೂರಿನಲ್ಲಿ ಸೌಹಾರ್ದ ದೀಪಾವಳಿಯ ಸಂಭ್ರಮ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ದೇಶಾದ್ಯಂತ ಆಚರಿಸಲ್ಪಡುವ ಬೆಳಕಿನ ಹಬ್ಬ ದೀಪಾವಳಿಯನ್ನು(Deepavali) ಸೌಹಾರ್ದ ದೀಪಾವಳಿಯನ್ನಾಗಿ ಆಚರಿಸಬೇಕೆಂಬ ಉದ್ದೇಶದಿಂದ  ಸಮಾನ ಮನಸ್ಕರು ಮಂಗಳೂರು (Mangalore) ಇದರ ಆಶ್ರಯದಲ್ಲಿ ಮಂಗಳೂರು ನಗರದ ಸ್ಟೇಟ್ ಬ್ಯಾಂಕ್ ಬಳಿಯಲ್ಲಿರುವ ಹ್ಯಾಮಿಲ್ಟನ್ ವೃತ್ತದಲ್ಲಿ ಸೌಹಾರ್ದ ದೀಪಾವಳಿಯನ್ನು ಆಚರಿಸಲಾಯಿತು.

Advertisement
Advertisement

ಸರ್ವ ಜನತೆಯ ಮನೆ ಮನ ಬೆಳಗಿಸುವ ಹಬ್ಬವಾದ ದೀಪಾವಳಿಯು ಅಜ್ಞಾನ, ಅಂಧಶ್ರದ್ದೆ, ದ್ವೇಷ ತುಂಬಿದ ಕತ್ತಲೆಯನ್ನು ಹೋಗಲಾಡಿಸಿ, ವಿಜ್ಞಾನ, ವೈಜ್ಞಾನಿಕ ಮನೋಭಾವ, ಪ್ರೀತಿ ತುಂಬಿದ ಬೆಳಕನ್ನು ಮೂಡಿಸಬೇಕಾಗಿದೆ. ಆ ಮೂಲಕ ಸೌಹಾರ್ದತೆ ಮಾನವೀಯತೆ ಬೆಳಗಿಸಬೇಕೆಂಬ ಆಶಯದೊಂದಿಗೆ ಜರುಗಿದ ದೀಪಾವಳಿ ಕಾರ್ಯಕ್ರಮದಲ್ಲಿ ಮಾಜಿ ಮೇಯರ್ ಶಶಿಧರ್ ಹೆಗ್ಡೆ, ಡಿವೈಎಫ್‌ಐ ನಾಯಕರಾದ ಮುನೀರ್ ಕಾಟಿಪಳ್ಳ, ಮಾಜಿ ಉಪಮೇಯರ್ ಮಹಮ್ಮದ್ ಕುಂಜತ್ತಬೈಲ್, ಸ್ಥಳೀಯ ಕಾರ್ಪೊರೇಟರ್ ಅಬ್ದುಲ್ ಲತೀಫ್, ಕಾರ್ಮಿಕ ನಾಯಕರಾದ ಸುನಿಲ್ ಕುಮಾರ್ ಬಜಾಲ್, ಸಾಮರಸ್ಯ ಮಂಗಳೂರಿನ ಮಂಜುಳಾ ನಾಯಕ್, ಸಮರ್ಥ್ ಭಟ್, ಯುವಜನ ನಾಯಕರಾದ ಸಂತೋಷ್ ಬಜಾಲ್, ನವೀನ್ ಕೊಂಚಾಡಿ, ಮನೋಜ್ ವಾಮಂಜೂರು, ತಯ್ಯೂಬ್ ಬೆಂಗರೆ, ಸಾಮಾಜಿಕ ಚಿಂತಕರಾದ ಅಸುಂತ ಡಿಸೋಜ, ಕ್ವೀನಿ ಪರ್ಸಿ ಆನಂದ್ ಮುಂತಾದವರು ಹಾಜರಿದ್ದರು.

ಖ್ಯಾತ ಹಾಡುಗಾರ್ತಿ ಮೇಘನಾ ಕುಂದಾಪುರ ಅವರಿಂದ ಸೌಹಾರ್ದ ಹಾಡುಗಳು ಪ್ರಸ್ತುತಗೊಂಡವು. ಬಳಿಕ ಪಟಾಕಿ ಸಿಡಿಸಿ ಸಿಹಿತಿಂಡಿ ಹಂಚಲಾಯಿತು.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಉತ್ತಮ ಮಳೆಯಿಂದ ಹಸಿರಾದ ವನ್ಯಜೀವಿ ತಾಣ | ಚಾಮರಾಜನಗರ ಜಿಲ್ಲೆಯ ಹಲವೆಡೆ ಹಸಿರು ಸಂಭ್ರಮ

ಉತ್ತಮ ಮಳೆಗೆ ಅರಣ್ಯ ಪ್ರದೇಶವೆಲ್ಲ ಹಚ್ಚ ಹಸಿರಿನಿಂದ ಕಂಗೊಳಿಸುತ್ತಿದೆ, ಮಳೆ ಹನಿಗಳಿಗೆ ಮೈಯೊಡ್ಡಿದ…

6 minutes ago

50 ಕೋಟಿಗೂ ಹೆಚ್ಚು ಜನರು ಕೃಷಿ ಕ್ಷೇತ್ರದಲ್ಲಿದ್ದಾರೆ , ಜಿಡಿಪಿಗೆ ಕೃಷಿಯ ಕೊಡುಗೆ ಶೇಕಡಾ 18

ರಾಜ್ಯದ ಅಡಿಕೆ ಬೆಳೆ ಅತ್ಯಂತ ಉತ್ಕೃಷ್ಟ ಗುಣಮಟ್ಟದ್ದಾಗಿದ್ದು, ಇದರಲ್ಲಿ ಯಾವುದೇ ರಾಸಾಯನಿಕ ಇಲ್ಲ.…

40 minutes ago

ಅಡಿಕೆ ಹಾಳೆ ರಫ್ತು ನಿರ್ಬಂಧದ ಸಂಕಷ್ಟದಿಂದ ಪಾರಾಗಲು ಕೈಗೊಳ್ಳಬಹುದಾದ ಪರಿಹಾರೋಪಾಯಗಳು

ನಿಷೇಧವು ಶಾಶ್ವತವಲ್ಲ, ಮತ್ತು ವೈಜ್ಞಾನಿಕ, ತಾಂತ್ರಿಕ, ಮತ್ತು ವಾಣಿಜ್ಯ ರಾಜತಾಂತ್ರಿಕ ಮಾರ್ಗದಿಂದ ಈ…

1 hour ago

ಅಡಿಕೆ ಎನ್ನುವ ಚಿನ್ನದ ಮೊಟ್ಟೆ ಇಡುವ ಕೋಳಿ | ವರವೋ ಶಾಪವೋ?

ಆಹಾರ ಧಾನ್ಯಗಳನ್ನು ಬೆಳೆಸುತ್ತಿದ್ದ ಕೃಷಿಕರು ಅಡಿಕೆ ಕೃಷಿಗೆ ಪರಿವರ್ತನೆ ಆಗಿ ಆಹಾರಕ್ಕಾಗಿ ಪರಾವಲಂಬಿಗಳು…

2 hours ago

ಹೊಸರುಚಿ | ಉಪ್ಪಿನಲ್ಲಿ ಹಾಕಿದ ಹಲಸಿನ ಕಾಯಿ ರೊಟ್ಟಿ

ಉಪ್ಪಿನಲ್ಲಿ ಹಾಕಿದ ಹಲಸಿನ ಕಾಯಿ ರೊಟ್ಟಿಗೆ ಬೇಕಾಗುವ ಸಾಮಗ್ರಿಗಳು: ಉಪ್ಪಿನಲ್ಲಿ ಹಾಕಿದ ಹಲಸಿನ ಕಾಯಿ…

3 hours ago

ಗುರು ಮತ್ತು ಬುಧ ದಶಾಂಕ ಯೋಗ | ಉದ್ಯೋಗದ ಮೇಲೆ ಜಾಕ್ಪಾಟ್ ದೊರೆಯಲಿದೆ

ಹೆಚ್ಚಿನ ಮಾಹಿತಿಗಾಗಿರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

6 hours ago