Advertisement
ಸುದ್ದಿಗಳು

ದೀಪಾವಳಿ | ಮಂಗಳೂರಿನಲ್ಲಿ ಸೌಹಾರ್ದ ದೀಪಾವಳಿಯ ಸಂಭ್ರಮ |

Share

ದೇಶಾದ್ಯಂತ ಆಚರಿಸಲ್ಪಡುವ ಬೆಳಕಿನ ಹಬ್ಬ ದೀಪಾವಳಿಯನ್ನು(Deepavali) ಸೌಹಾರ್ದ ದೀಪಾವಳಿಯನ್ನಾಗಿ ಆಚರಿಸಬೇಕೆಂಬ ಉದ್ದೇಶದಿಂದ  ಸಮಾನ ಮನಸ್ಕರು ಮಂಗಳೂರು (Mangalore) ಇದರ ಆಶ್ರಯದಲ್ಲಿ ಮಂಗಳೂರು ನಗರದ ಸ್ಟೇಟ್ ಬ್ಯಾಂಕ್ ಬಳಿಯಲ್ಲಿರುವ ಹ್ಯಾಮಿಲ್ಟನ್ ವೃತ್ತದಲ್ಲಿ ಸೌಹಾರ್ದ ದೀಪಾವಳಿಯನ್ನು ಆಚರಿಸಲಾಯಿತು.

ಸರ್ವ ಜನತೆಯ ಮನೆ ಮನ ಬೆಳಗಿಸುವ ಹಬ್ಬವಾದ ದೀಪಾವಳಿಯು ಅಜ್ಞಾನ, ಅಂಧಶ್ರದ್ದೆ, ದ್ವೇಷ ತುಂಬಿದ ಕತ್ತಲೆಯನ್ನು ಹೋಗಲಾಡಿಸಿ, ವಿಜ್ಞಾನ, ವೈಜ್ಞಾನಿಕ ಮನೋಭಾವ, ಪ್ರೀತಿ ತುಂಬಿದ ಬೆಳಕನ್ನು ಮೂಡಿಸಬೇಕಾಗಿದೆ. ಆ ಮೂಲಕ ಸೌಹಾರ್ದತೆ ಮಾನವೀಯತೆ ಬೆಳಗಿಸಬೇಕೆಂಬ ಆಶಯದೊಂದಿಗೆ ಜರುಗಿದ ದೀಪಾವಳಿ ಕಾರ್ಯಕ್ರಮದಲ್ಲಿ ಮಾಜಿ ಮೇಯರ್ ಶಶಿಧರ್ ಹೆಗ್ಡೆ, ಡಿವೈಎಫ್‌ಐ ನಾಯಕರಾದ ಮುನೀರ್ ಕಾಟಿಪಳ್ಳ, ಮಾಜಿ ಉಪಮೇಯರ್ ಮಹಮ್ಮದ್ ಕುಂಜತ್ತಬೈಲ್, ಸ್ಥಳೀಯ ಕಾರ್ಪೊರೇಟರ್ ಅಬ್ದುಲ್ ಲತೀಫ್, ಕಾರ್ಮಿಕ ನಾಯಕರಾದ ಸುನಿಲ್ ಕುಮಾರ್ ಬಜಾಲ್, ಸಾಮರಸ್ಯ ಮಂಗಳೂರಿನ ಮಂಜುಳಾ ನಾಯಕ್, ಸಮರ್ಥ್ ಭಟ್, ಯುವಜನ ನಾಯಕರಾದ ಸಂತೋಷ್ ಬಜಾಲ್, ನವೀನ್ ಕೊಂಚಾಡಿ, ಮನೋಜ್ ವಾಮಂಜೂರು, ತಯ್ಯೂಬ್ ಬೆಂಗರೆ, ಸಾಮಾಜಿಕ ಚಿಂತಕರಾದ ಅಸುಂತ ಡಿಸೋಜ, ಕ್ವೀನಿ ಪರ್ಸಿ ಆನಂದ್ ಮುಂತಾದವರು ಹಾಜರಿದ್ದರು.

ಖ್ಯಾತ ಹಾಡುಗಾರ್ತಿ ಮೇಘನಾ ಕುಂದಾಪುರ ಅವರಿಂದ ಸೌಹಾರ್ದ ಹಾಡುಗಳು ಪ್ರಸ್ತುತಗೊಂಡವು. ಬಳಿಕ ಪಟಾಕಿ ಸಿಡಿಸಿ ಸಿಹಿತಿಂಡಿ ಹಂಚಲಾಯಿತು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಮಂಗಳೂರಿನ ಸಚಿವ ಸಂಪುಟ ಸಭೆ | ‘ಅಡಿಕೆ ಜೈವಿಕ ಆರ್ಥಿಕತೆ ಮಿಷನ್’ ಘೋಷಣೆಗೆ ಆಗ್ರಹ

ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…

8 hours ago

ಮಳೆಗೆ ಬೆಂಗಳೂರು ತತ್ತರ – ಸಂಜೆ ಏಕಾಏಕಿ ಸುರಿದ ಧಾರಾಕಾರ ಮಳೆಗೆ ರಸ್ತೆಗಳು ಜಲಾವೃತ

ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಏಕಾಏಕಿ ಸುರಿದ ಭಾರೀ ಮಳೆಗೆ ಹಲವು ರಸ್ತೆಗಳು ಜಲಾವೃತವಾಗಿ…

9 hours ago

ಹವಾಮಾನ ವರದಿ | 15-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಚುರುಕಾಗುವ ಸೂಚನೆ

ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…

19 hours ago

ಹವಾಮಾನ ವರದಿ | 14-09-2026 | ಸೆ.18ರ ಬಳಿಕ ಮಳೆ ಚಿತ್ರಣ ಬದಲಾಗಬಹುದೇ?

ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…

2 days ago

ನನ್ನ ಚಿತ್ರ-ನನ್ನ ಖುಷಿ | ಬಣ್ಣಗಳ ಮೂಲಕ ಅರಳಿದ ಗಣೇಶ

ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…

2 days ago