Advertisement
ಸುದ್ದಿಗಳು

ದೀಪಾವಳಿ | ಮಂಗಳೂರಿನಲ್ಲಿ ಸೌಹಾರ್ದ ದೀಪಾವಳಿಯ ಸಂಭ್ರಮ |

Share

ದೇಶಾದ್ಯಂತ ಆಚರಿಸಲ್ಪಡುವ ಬೆಳಕಿನ ಹಬ್ಬ ದೀಪಾವಳಿಯನ್ನು(Deepavali) ಸೌಹಾರ್ದ ದೀಪಾವಳಿಯನ್ನಾಗಿ ಆಚರಿಸಬೇಕೆಂಬ ಉದ್ದೇಶದಿಂದ  ಸಮಾನ ಮನಸ್ಕರು ಮಂಗಳೂರು (Mangalore) ಇದರ ಆಶ್ರಯದಲ್ಲಿ ಮಂಗಳೂರು ನಗರದ ಸ್ಟೇಟ್ ಬ್ಯಾಂಕ್ ಬಳಿಯಲ್ಲಿರುವ ಹ್ಯಾಮಿಲ್ಟನ್ ವೃತ್ತದಲ್ಲಿ ಸೌಹಾರ್ದ ದೀಪಾವಳಿಯನ್ನು ಆಚರಿಸಲಾಯಿತು.

ಸರ್ವ ಜನತೆಯ ಮನೆ ಮನ ಬೆಳಗಿಸುವ ಹಬ್ಬವಾದ ದೀಪಾವಳಿಯು ಅಜ್ಞಾನ, ಅಂಧಶ್ರದ್ದೆ, ದ್ವೇಷ ತುಂಬಿದ ಕತ್ತಲೆಯನ್ನು ಹೋಗಲಾಡಿಸಿ, ವಿಜ್ಞಾನ, ವೈಜ್ಞಾನಿಕ ಮನೋಭಾವ, ಪ್ರೀತಿ ತುಂಬಿದ ಬೆಳಕನ್ನು ಮೂಡಿಸಬೇಕಾಗಿದೆ. ಆ ಮೂಲಕ ಸೌಹಾರ್ದತೆ ಮಾನವೀಯತೆ ಬೆಳಗಿಸಬೇಕೆಂಬ ಆಶಯದೊಂದಿಗೆ ಜರುಗಿದ ದೀಪಾವಳಿ ಕಾರ್ಯಕ್ರಮದಲ್ಲಿ ಮಾಜಿ ಮೇಯರ್ ಶಶಿಧರ್ ಹೆಗ್ಡೆ, ಡಿವೈಎಫ್‌ಐ ನಾಯಕರಾದ ಮುನೀರ್ ಕಾಟಿಪಳ್ಳ, ಮಾಜಿ ಉಪಮೇಯರ್ ಮಹಮ್ಮದ್ ಕುಂಜತ್ತಬೈಲ್, ಸ್ಥಳೀಯ ಕಾರ್ಪೊರೇಟರ್ ಅಬ್ದುಲ್ ಲತೀಫ್, ಕಾರ್ಮಿಕ ನಾಯಕರಾದ ಸುನಿಲ್ ಕುಮಾರ್ ಬಜಾಲ್, ಸಾಮರಸ್ಯ ಮಂಗಳೂರಿನ ಮಂಜುಳಾ ನಾಯಕ್, ಸಮರ್ಥ್ ಭಟ್, ಯುವಜನ ನಾಯಕರಾದ ಸಂತೋಷ್ ಬಜಾಲ್, ನವೀನ್ ಕೊಂಚಾಡಿ, ಮನೋಜ್ ವಾಮಂಜೂರು, ತಯ್ಯೂಬ್ ಬೆಂಗರೆ, ಸಾಮಾಜಿಕ ಚಿಂತಕರಾದ ಅಸುಂತ ಡಿಸೋಜ, ಕ್ವೀನಿ ಪರ್ಸಿ ಆನಂದ್ ಮುಂತಾದವರು ಹಾಜರಿದ್ದರು.

ಖ್ಯಾತ ಹಾಡುಗಾರ್ತಿ ಮೇಘನಾ ಕುಂದಾಪುರ ಅವರಿಂದ ಸೌಹಾರ್ದ ಹಾಡುಗಳು ಪ್ರಸ್ತುತಗೊಂಡವು. ಬಳಿಕ ಪಟಾಕಿ ಸಿಡಿಸಿ ಸಿಹಿತಿಂಡಿ ಹಂಚಲಾಯಿತು.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಜಗತ್ತು ನಮ್ಮ ಜೊತೆಗಿದೆ ಎಂಬ ಭ್ರಮೆ

ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…

5 hours ago

ತೆಂಗಿನ ಎಣ್ಣೆಯಿಂದ ವಿಮಾನದ ಇಂಧನ ? ಜೆಟ್‌ ಎಂಜಿನ್‌ ಪರೀಕ್ಷೆಯಲ್ಲಿ ಕುತೂಹಲ ಮೂಡಿಸಿದ ಫಲಿತಾಂಶ

ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…

12 hours ago

ಕೃಷಿ ಇನ್ನು ಕೇವಲ ಬೆಳೆ ಬೆಳೆಯುವುದಲ್ಲ – ಯುವಕರಿಗೆ ಸ್ಟಾರ್ಟ್‌ಅಪ್ ಕ್ಷೇತ್ರ

ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…

15 hours ago

ಬರಪೀಡಿತ ಪ್ರದೇಶಗಳ ರೈತರಿಗೆ ಗುಡ್‌ನ್ಯೂಸ್ ; ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ

ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…

24 hours ago

ರಾಜ್ಯದ 102 ತಾಲೂಕುಗಳಲ್ಲಿ ಬರದ ಛಾಯೆ – ತಿಂಗಳಾಂತ್ಯಕ್ಕೆ ಕೇಂದ್ರಕ್ಕೆ ವರದಿ ಸಲ್ಲಿಕೆ

ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…

24 hours ago

ಮಂಗಳೂರಿನ ಅಶ್ಮಿತ್ ಎ.ಜೆ. ಅವರಿಗೆ ‘ಸರಿಗಮಪ 2026’ರ ಕಿರೀಟ

ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…

1 day ago