Advertisement
ಸುದ್ದಿಗಳು

ದೀಪಾವಳಿ | ಹೆಚ್ಚು ಶಬ್ದದ ಪಟಾಕಿ, ಸಿಡಿಮದ್ದು ಉಪಯೋಗಿಸದಂತೆ ಸಲಹೆ

Share

ಸಾರ್ವಜನಿಕ ಆಸ್ತಿ ಮತ್ತು ಆರೋಗ್ಯದ ಸಂರಕ್ಷಣೆ, ಪರಿಸರ ಮಾಲಿನ್ಯ ಮತ್ತು ಶಬ್ದ ಮಾಲಿನ್ಯ ನಿಯಂತ್ರಣದಲ್ಲಿಡುವ ಉದ್ದೇಶದಿಂದ  ಪರಿಸರ ಸಂರಕ್ಷಣೆ ನಿಯಮಾವಳಿಗಳು 1999 ರನ್ವಯ ಹಾಗೂ ಸುಪ್ರೀಂ ಕೋರ್ಟ್‍ನ ಆದೇಶ ಡಬ್ಲ್ಯೂ.ಪಿ(ಸಿ)72/98, 2005ರ ಜುಲೈ 21ರ ಪ್ರಕಾರ 125 ಡಿ.ಬಿ(ಎ.ಐ) ಅಥವಾ 145 ಡಿ.ಬಿ(ಸಿ)ಪಿಕೆ ಕ್ಕಿಂತ (ಪಟಾಕಿ ಸಿಡಿಸುವ ಸ್ಥಳದಿಂದ 4ಮೀ. ಅಂತರದಲ್ಲಿ)  ಹೆಚ್ಚು ಶಬ್ದ ಮಾಡುವ ಪಟಾಕಿ ಹಾಗೂ  ಸಿಡಿಮದ್ದುಗಳ ಮಾರಾಟ ಮತ್ತು ಉಪಯೋಗವನ್ನು ನಿಷೇಧಿಸಲಾಗಿದೆ.

ಆದ ಕಾರಣ ಸಾರ್ವಜನಿಕರು 125ಡಿ.ಬಿ(ಎ.ಐ) ಅಥವಾ 145 ಡಿ.ಬಿ(ಸಿ)ಪಿ.ಕೆ ಕ್ಕಿಂತ ಹೆಚ್ಚು ಶಬ್ದ ಮಾಡುವ ಪಟಾಕಿ ಹಾಗೂ ಸಿಡಿಮದ್ದುಗಳನ್ನು ಉಪಯೋಗಿಸಬಾರದು ಹಾಗೂ ರಾತ್ರಿ 10 ರಿಂದ ಬೆಳಿಗ್ಗೆ 6 ಗಂಟೆಯವರೆಗೆ ಪಟಾಕಿ, ಸಿಡಿಮದ್ದು ಸಿಡಿಸುವುದನ್ನು ನಿಷೇಧಿಸಲಾಗಿದೆ. ದಿನದ ಯಾವುದೇ ಸಮಯದಲ್ಲಿ ನಿಶಬ್ದ ವಲಯಗಳೆಂದು ಘೋಷಿಸಲ್ಪಟ್ಟಿರುವ ಸ್ಥಳಗಳ (ಆಸ್ಪತ್ರೆ, ಶಾಲೆ, ಪ್ರಾರ್ಥನಾ ಮಂದಿರ, ಇತ್ಯಾದಿಗಳು) ಸುತ್ತಮುತ್ತ ಯಾವುದೇ ರೀತಿಯ ಶಬ್ದ ಉಂಟು ಮಾಡುವ  ನಿಷೇಧಿತ ಪಟಾಕಿ, ಸಿಡಿಮದ್ದು ಬಳಸಬಾರದು. ಸುಪ್ರೀಂ ಕೋರ್ಟ್ ಮೇಲ್ಕಾಣಿಸಿದ ನಿರ್ದೇಶನಗಳಲ್ಲಿ ಅನುಮತಿಸಿರುವ ಹಸಿರು ಪಟಾಕಿಗಳನ್ನು ಮಾತ್ರ ಉಪಯೋಗಿಸಬೇಕು.

ನಗರ ಮತ್ತು ಪಟ್ಟಣದ ಚಿಕ್ಕ ಚಿಕ್ಕ ಬೀದಿಗಳಲ್ಲಿ ಪಟಾಕಿ ಮತ್ತು ಸಿಡಿಮದ್ದುಗಳನ್ನು, ಬಾಣ ಬಿರುಸುಗಳನ್ನು ಉಪಯೋಗಿಸುವದರಿಂದ ಅಲ್ಲಿನ ನಿವಾಸಿಗಳಿಗೆ ಹಾನಿಯುಂಟಾಗುವ ಅಥವಾ ಬೆಂಕಿ ಹಾಗೂ ಸ್ಫೋಟದಿಂದ ಅಪಾಯಗಳಾಗುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಪಟಾಕಿ ಹಾಗೂ ಸಿಡಿಮದ್ದುಗಳನ್ನು ವಸತಿ ಪ್ರದೇಶಗಳಲ್ಲಿ ಉಪಯೋಗಿಸುವ ಬದಲು ಮೈದಾನಗಳಲ್ಲಿ ಸಿಡಿಸಬೇಕು.

ಅಲ್ಲದೇ ಸಾರ್ವಜನಿಕರಲ್ಲಿ ದೀಪಾವಳಿ ಹಬ್ಬವನ್ನು ಸಿಡಿಮದ್ದು, ಪಟಾಕಿಗಳನ್ನು ಉಪಯೋಗಿಸದೇ ದೀಪದ ಹಬ್ಬವನ್ನಾಗಿ ಆಚರಿಸುವಂತೆ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಪ್ರಾದೇಶಿಕ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

15 hours ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

24 hours ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

1 day ago

ರಸಗೊಬ್ಬರದಲ್ಲಿ ಆತ್ಮನಿರ್ಭರತೆ ಅನಿವಾರ್ಯ – ಸಂಕಷ್ಟದಿಂದ ಅವಕಾಶದತ್ತ ಭಾರತ ಸಾಗಬೇಕಿದೆ

ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…

1 day ago

ಹವಾಮಾನ ವರದಿ | 24-07-2026 | ಕರಾವಳಿಯಲ್ಲಿ ಮುಂದುವರಿಯುವ ಮಳೆ, ಜುಲೈ ಅಂತ್ಯದ ವೇಳೆಗೆ ಮುಂಗಾರು ಹೇಗೆ..?

ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…

1 day ago