ದೀಪಾವಳಿ ಹಬ್ಬ | ತರಕಾರಿ, ಹೂವು, ಹಣ್ಣುಗಳ ಬೆಲೆಯಲ್ಲಿಏರಿಕೆ | ಖಾಸಗಿ ಬಸ್ ಗಳ ದರ ಎರಡು ಪಟ್ಟು ಹೆಚ್ಚಳ | ಹಬ್ಬವೆಂದರೆ ಸಾಮಾನ್ಯ ಜನರಿಗೆ ಪ್ರತೀ ಬಾರಿ ಏರಿಕೆಯ ಬಿಸಿ…!‌ |

October 23, 2022
2:23 PM

ದೀಪಾವಳಿ ಹಬ್ಬದ ಸಂಭ್ರಮ ಎಲ್ಲೆಡೆ ಮನೆ ಮಾಡಿದೆ. ಹಬ್ಬದ ವಾತಾವರಣ ಇರುವ ಕಡೆ ಬೆಲೆ ಏರಿಕೆಯ ಬಿಸಿ ಪ್ರತೀ ಬಾರಿಯಂತೆ ಈ ಬಾರಿಯೂ ಸಾಮಾನ್ಯ ಜನರಿಗೆ ತಟ್ಟಿದೆ. ಖಾಸಗಿ ಬಸ್ಸುಗಳು ದೀಪಾವಳಿ ಹಬ್ಬದ ನೆಪದಲ್ಲಿ ಪ್ರಯಾಣ ದರವನ್ನು ಎರಡು ಪಟ್ಟು ಹೆಚ್ಚಳ ಮಾಡಿದೆ. ದೀಪಾವಳಿ ಹಿನ್ನೆಲೆ ತರಕಾರಿ, ಹೂವು, ಹಣ್ಣುಗಳ ಬೆಲೆಯಲ್ಲೂ ಏರಿಕೆಯಾಗಿದೆ.

Advertisement
Advertisement

ದೀಪಾವಳಿ ಸಂದರ್ಭ  ಬೆಂಗಳೂರು, ಮೈಸೂರು, ಹುಬ್ಬಳ್ಳಿ ಸೇರಿದಂತೆ ದೂರದ ಊರುಗಳಲ್ಲಿದ್ದ ಮಂದಿ ಹಬ್ಬಕ್ಕೆಂದು ತಮ್ಮ ಊರುಗಳಿಗೆ ಆಗಮಿಸುವುದು ಸಾಮಾನ್ಯ. ಈಗ ಸಾಮಾನ್ಯ ದಿನಕ್ಕಿಂತ ಎರಡು ಪಟ್ಟು ಹೆಚ್ಚುವರಿ ಹಣ ನೀಡಿ ಬಸ್‌ಗಳಲ್ಲಿ ಬರಬೇಕಾದ ಅನಿವಾರ್ಯ ಎದುರಾಗಿದೆ. ಹಬ್ಬದ ಹಿನ್ನೆಲೆಯಲ್ಲಿ ಕೆಎಸ್ಸಾರ್ಟಿಸಿ ಮತ್ತು ಖಾಸಗಿ ಬಸ್‌ಗಳಲ್ಲಿ ಈಗಾಗಲೇ ಬಹುತೇಕ ಸೀಟುಗಳು ಬುಕ್ಕಿಂಗ್‌ ಆಗಿವೆ. ಕೆಎಸ್‌ಆರ್‌ಟಿಸಿ ಹೆಚ್ಚುವರಿ ಬಸ್ಸುಗಳನ್ನೂ ಓಡಿಸುತ್ತಿದೆ. ಆದರೆ ಖಾಸಗಿ ಬಸ್ಸುಗಳಲ್ಲಿ  ಎರಡು ಪಟ್ಟು ಹೆಚ್ಚು ದರವನ್ನು ನಿಗದಿ ಮಾಡಲಾಗಿದೆ.

Advertisement

ದೀಪಾವಳಿ ಸಂದರ್ಭ ಹೂವು, ಹಣ್ಣು, ತರಕಾರಿಗಳಿಗೆ ಬೇಡಿಕೆ ವ್ಯಕ್ತವಾಗುತ್ತದೆ. ಈ ಬಾರಿ ಇದೆಲ್ಲವೂ ಬೆಲೆ ಏರಿಕೆಯ ಹಾದಿಯಲ್ಲಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಅಪಾರ ಪ್ರಮಾಣದ ಬೆಳೆಹಾನಿಯಾಗಿದ್ದು, ಇದರ ಪರಿಣಾಮ ತರಕಾರಿ, ಹೂವು, ಹಣ್ಣುಗಳ ಬೆಲೆಯಲ್ಲೂ ಭಾರೀ ಏರಿಕೆಯಾಗಿದೆ. ಮಲ್ಲಿಗೆ ಹೂವು 1 ಕೆಜಿಗೆ 500 ರೂ.ನಿಂದ 550 ರೂ.ವರೆಗೆ ಏರಿಕೆಯಾದರೆ, ಕನಕಾಂಬರ ಹೂವು ಕೆಜಿಗೆ 1,200 ರೂ.ವರೆಗೂ ಏರಿಕೆ ಕಂಡಿದೆ. ಪಟಾಕಿಗಳ ಬೆಲೆಯಲ್ಲಿ ಕೂಡ  ಏರಿಕೆಯಾಗಿದ್ದು, ಈ ವರ್ಷ 100 ರಿಂದ‌ 150% ರಷ್ಟು ಪಟಾಕಿಗಳ ಬೆಲೆ ಏರಿಕೆ ಮಾಡಲಾಗಿದೆ.

 

Advertisement
Advertisement
Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಏರಿದ ತಾಪಮಾನ : ರಾಜ್ಯದಲ್ಲಿ ಇಂದಿನಿಂದ 5 ದಿನ ಬೀಸಲಿದೆ ಬಿಸಿಗಾಳಿ ಎಚ್ಚರಿಕೆ..!
April 25, 2024
11:01 PM
by: The Rural Mirror ಸುದ್ದಿಜಾಲ
ನೆಲ್ಯಾಡಿ | ವಿಶ್ವವಿದ್ಯಾನಿಲಯ ಕಾಲೇಜು ಶಿಕ್ಷಕ-ರಕ್ಷಕ ಸಂಘದ ಮಹಾಸಭೆ | ನೂತನ ಪದಾಧಿಕಾರಿಗಳ ನೇಮಕ
April 25, 2024
10:12 PM
by: ದ ರೂರಲ್ ಮಿರರ್.ಕಾಂ
ಇತ್ತೀಚಿಗೆ ಮಕ್ಕಳ ಬೆಳವಣಿಗೆ ಕುಂಠಿತವಾಗುತ್ತಿದೆ | ಮಕ್ಕಳ ತೂಕ ಮತ್ತು ಎತ್ತರವನ್ನು ಹೆಚ್ಚಿಸುವ ಆಹಾರಗಳು |
April 25, 2024
3:13 PM
by: The Rural Mirror ಸುದ್ದಿಜಾಲ
ಕೊನೆಗೂ ಗಾಂಧಿ ಕುಡಿಗಳ ಕ್ಷೇತ್ರ ಫಿಕ್ಸ್‌ | ರಾಯ್ ಬರೇಲಿಯಿಂದ ಪ್ರಿಯಾಂಕಾ, ಅಮೇಥಿಯಿಂದ ರಾಹುಲ್ ಸ್ಪರ್ಧೆ ಬಹುತೇಕ ಖಚಿತ |
April 25, 2024
3:00 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror