ದೀಪಾವಳಿ ಹಬ್ಬ | ತರಕಾರಿ, ಹೂವು, ಹಣ್ಣುಗಳ ಬೆಲೆಯಲ್ಲಿಏರಿಕೆ | ಖಾಸಗಿ ಬಸ್ ಗಳ ದರ ಎರಡು ಪಟ್ಟು ಹೆಚ್ಚಳ | ಹಬ್ಬವೆಂದರೆ ಸಾಮಾನ್ಯ ಜನರಿಗೆ ಪ್ರತೀ ಬಾರಿ ಏರಿಕೆಯ ಬಿಸಿ…!‌ |

October 23, 2022
2:23 PM

ದೀಪಾವಳಿ ಹಬ್ಬದ ಸಂಭ್ರಮ ಎಲ್ಲೆಡೆ ಮನೆ ಮಾಡಿದೆ. ಹಬ್ಬದ ವಾತಾವರಣ ಇರುವ ಕಡೆ ಬೆಲೆ ಏರಿಕೆಯ ಬಿಸಿ ಪ್ರತೀ ಬಾರಿಯಂತೆ ಈ ಬಾರಿಯೂ ಸಾಮಾನ್ಯ ಜನರಿಗೆ ತಟ್ಟಿದೆ. ಖಾಸಗಿ ಬಸ್ಸುಗಳು ದೀಪಾವಳಿ ಹಬ್ಬದ ನೆಪದಲ್ಲಿ ಪ್ರಯಾಣ ದರವನ್ನು ಎರಡು ಪಟ್ಟು ಹೆಚ್ಚಳ ಮಾಡಿದೆ. ದೀಪಾವಳಿ ಹಿನ್ನೆಲೆ ತರಕಾರಿ, ಹೂವು, ಹಣ್ಣುಗಳ ಬೆಲೆಯಲ್ಲೂ ಏರಿಕೆಯಾಗಿದೆ.

ದೀಪಾವಳಿ ಸಂದರ್ಭ  ಬೆಂಗಳೂರು, ಮೈಸೂರು, ಹುಬ್ಬಳ್ಳಿ ಸೇರಿದಂತೆ ದೂರದ ಊರುಗಳಲ್ಲಿದ್ದ ಮಂದಿ ಹಬ್ಬಕ್ಕೆಂದು ತಮ್ಮ ಊರುಗಳಿಗೆ ಆಗಮಿಸುವುದು ಸಾಮಾನ್ಯ. ಈಗ ಸಾಮಾನ್ಯ ದಿನಕ್ಕಿಂತ ಎರಡು ಪಟ್ಟು ಹೆಚ್ಚುವರಿ ಹಣ ನೀಡಿ ಬಸ್‌ಗಳಲ್ಲಿ ಬರಬೇಕಾದ ಅನಿವಾರ್ಯ ಎದುರಾಗಿದೆ. ಹಬ್ಬದ ಹಿನ್ನೆಲೆಯಲ್ಲಿ ಕೆಎಸ್ಸಾರ್ಟಿಸಿ ಮತ್ತು ಖಾಸಗಿ ಬಸ್‌ಗಳಲ್ಲಿ ಈಗಾಗಲೇ ಬಹುತೇಕ ಸೀಟುಗಳು ಬುಕ್ಕಿಂಗ್‌ ಆಗಿವೆ. ಕೆಎಸ್‌ಆರ್‌ಟಿಸಿ ಹೆಚ್ಚುವರಿ ಬಸ್ಸುಗಳನ್ನೂ ಓಡಿಸುತ್ತಿದೆ. ಆದರೆ ಖಾಸಗಿ ಬಸ್ಸುಗಳಲ್ಲಿ  ಎರಡು ಪಟ್ಟು ಹೆಚ್ಚು ದರವನ್ನು ನಿಗದಿ ಮಾಡಲಾಗಿದೆ.

ದೀಪಾವಳಿ ಸಂದರ್ಭ ಹೂವು, ಹಣ್ಣು, ತರಕಾರಿಗಳಿಗೆ ಬೇಡಿಕೆ ವ್ಯಕ್ತವಾಗುತ್ತದೆ. ಈ ಬಾರಿ ಇದೆಲ್ಲವೂ ಬೆಲೆ ಏರಿಕೆಯ ಹಾದಿಯಲ್ಲಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಅಪಾರ ಪ್ರಮಾಣದ ಬೆಳೆಹಾನಿಯಾಗಿದ್ದು, ಇದರ ಪರಿಣಾಮ ತರಕಾರಿ, ಹೂವು, ಹಣ್ಣುಗಳ ಬೆಲೆಯಲ್ಲೂ ಭಾರೀ ಏರಿಕೆಯಾಗಿದೆ. ಮಲ್ಲಿಗೆ ಹೂವು 1 ಕೆಜಿಗೆ 500 ರೂ.ನಿಂದ 550 ರೂ.ವರೆಗೆ ಏರಿಕೆಯಾದರೆ, ಕನಕಾಂಬರ ಹೂವು ಕೆಜಿಗೆ 1,200 ರೂ.ವರೆಗೂ ಏರಿಕೆ ಕಂಡಿದೆ. ಪಟಾಕಿಗಳ ಬೆಲೆಯಲ್ಲಿ ಕೂಡ  ಏರಿಕೆಯಾಗಿದ್ದು, ಈ ವರ್ಷ 100 ರಿಂದ‌ 150% ರಷ್ಟು ಪಟಾಕಿಗಳ ಬೆಲೆ ಏರಿಕೆ ಮಾಡಲಾಗಿದೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಮಲೆನಾಡು ತಪ್ಪಲಲ್ಲಿ ಧಾರಾಕಾರ ಮಳೆ – ಹಲವು ಕಡೆ ಕೆಲವೇ ಗಂಟೆಯಲ್ಲಿ 100 ಮಿಮೀ ದಾಟಿದ ಮಳೆ
August 25, 2026
1:40 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ |25-08-2026 | ಕರಾವಳಿ, ಮಲೆನಾಡಿನಲ್ಲೂ ಬಿಡುವಿನ ಅವಧಿ ಹೆಚ್ಚಳ -ಕೆಲವೆಡೆ ಉತ್ತಮ ಮಳೆ – ರಾಜ್ಯದಲ್ಲಿ ಮಳೆ ಪರಿಸ್ಥಿತಿ ಹೇಗೆ..?
August 25, 2026
1:04 PM
by: ಸಾಯಿಶೇಖರ್ ಕರಿಕಳ
ಕರಾವಳಿಗೆ ವಾಡಿಕೆ ಮಳೆ, ಮಲೆನಾಡು ದಾಟದ ಮುಂಗಾರು ಮೋಡ..!
August 25, 2026
12:13 PM
by: ದ ರೂರಲ್ ಮಿರರ್.ಕಾಂ
ಬೆಲೆ ಏರಿಕೆಯನ್ನಷ್ಟೇ ನೋಡುವುದಲ್ಲ ; ಮುಂದಿನ ಮಾರುಕಟ್ಟೆಯನ್ನು ನಿರ್ಮಿಸುವ ಕಾಲ
August 25, 2026
10:38 AM
by: ಅರುಣ್‌ ಕುಮಾರ್ ಕಾಂಚೋಡು

You cannot copy content of this page - Copyright -The Rural Mirror