ದೀಪಾವಳಿ ಹಬ್ಬದ ಸಂಭ್ರಮ ಎಲ್ಲೆಡೆ ಮನೆ ಮಾಡಿದೆ. ಹಬ್ಬದ ವಾತಾವರಣ ಇರುವ ಕಡೆ ಬೆಲೆ ಏರಿಕೆಯ ಬಿಸಿ ಪ್ರತೀ ಬಾರಿಯಂತೆ ಈ ಬಾರಿಯೂ ಸಾಮಾನ್ಯ ಜನರಿಗೆ ತಟ್ಟಿದೆ. ಖಾಸಗಿ ಬಸ್ಸುಗಳು ದೀಪಾವಳಿ ಹಬ್ಬದ ನೆಪದಲ್ಲಿ ಪ್ರಯಾಣ ದರವನ್ನು ಎರಡು ಪಟ್ಟು ಹೆಚ್ಚಳ ಮಾಡಿದೆ. ದೀಪಾವಳಿ ಹಿನ್ನೆಲೆ ತರಕಾರಿ, ಹೂವು, ಹಣ್ಣುಗಳ ಬೆಲೆಯಲ್ಲೂ ಏರಿಕೆಯಾಗಿದೆ.
ದೀಪಾವಳಿ ಸಂದರ್ಭ ಬೆಂಗಳೂರು, ಮೈಸೂರು, ಹುಬ್ಬಳ್ಳಿ ಸೇರಿದಂತೆ ದೂರದ ಊರುಗಳಲ್ಲಿದ್ದ ಮಂದಿ ಹಬ್ಬಕ್ಕೆಂದು ತಮ್ಮ ಊರುಗಳಿಗೆ ಆಗಮಿಸುವುದು ಸಾಮಾನ್ಯ. ಈಗ ಸಾಮಾನ್ಯ ದಿನಕ್ಕಿಂತ ಎರಡು ಪಟ್ಟು ಹೆಚ್ಚುವರಿ ಹಣ ನೀಡಿ ಬಸ್ಗಳಲ್ಲಿ ಬರಬೇಕಾದ ಅನಿವಾರ್ಯ ಎದುರಾಗಿದೆ. ಹಬ್ಬದ ಹಿನ್ನೆಲೆಯಲ್ಲಿ ಕೆಎಸ್ಸಾರ್ಟಿಸಿ ಮತ್ತು ಖಾಸಗಿ ಬಸ್ಗಳಲ್ಲಿ ಈಗಾಗಲೇ ಬಹುತೇಕ ಸೀಟುಗಳು ಬುಕ್ಕಿಂಗ್ ಆಗಿವೆ. ಕೆಎಸ್ಆರ್ಟಿಸಿ ಹೆಚ್ಚುವರಿ ಬಸ್ಸುಗಳನ್ನೂ ಓಡಿಸುತ್ತಿದೆ. ಆದರೆ ಖಾಸಗಿ ಬಸ್ಸುಗಳಲ್ಲಿ ಎರಡು ಪಟ್ಟು ಹೆಚ್ಚು ದರವನ್ನು ನಿಗದಿ ಮಾಡಲಾಗಿದೆ.
ದೀಪಾವಳಿ ಸಂದರ್ಭ ಹೂವು, ಹಣ್ಣು, ತರಕಾರಿಗಳಿಗೆ ಬೇಡಿಕೆ ವ್ಯಕ್ತವಾಗುತ್ತದೆ. ಈ ಬಾರಿ ಇದೆಲ್ಲವೂ ಬೆಲೆ ಏರಿಕೆಯ ಹಾದಿಯಲ್ಲಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಅಪಾರ ಪ್ರಮಾಣದ ಬೆಳೆಹಾನಿಯಾಗಿದ್ದು, ಇದರ ಪರಿಣಾಮ ತರಕಾರಿ, ಹೂವು, ಹಣ್ಣುಗಳ ಬೆಲೆಯಲ್ಲೂ ಭಾರೀ ಏರಿಕೆಯಾಗಿದೆ. ಮಲ್ಲಿಗೆ ಹೂವು 1 ಕೆಜಿಗೆ 500 ರೂ.ನಿಂದ 550 ರೂ.ವರೆಗೆ ಏರಿಕೆಯಾದರೆ, ಕನಕಾಂಬರ ಹೂವು ಕೆಜಿಗೆ 1,200 ರೂ.ವರೆಗೂ ಏರಿಕೆ ಕಂಡಿದೆ. ಪಟಾಕಿಗಳ ಬೆಲೆಯಲ್ಲಿ ಕೂಡ ಏರಿಕೆಯಾಗಿದ್ದು, ಈ ವರ್ಷ 100 ರಿಂದ 150% ರಷ್ಟು ಪಟಾಕಿಗಳ ಬೆಲೆ ಏರಿಕೆ ಮಾಡಲಾಗಿದೆ.
ರಾಜ್ಯದಲ್ಲಿ 6395 ಆನೆಗಳಿದ್ದು, ಕೊಡಗು, ಚಿಕ್ಕಮಗಳೂರು, ಹಾಸನ ಜಿಲ್ಲೆಯಲ್ಲಿ ಕಾಫಿ ತೋಟಗಳಲ್ಲಿ ನೂರಾರು…
ಬದುಕಿನ ದೀವಿಗೆ ಜ್ಞಾನ. ಅದು ಜ್ಞಾನ ದೀವಿಗೆ. ಜ್ಞಾನಕ್ಕೆ ಮುಪ್ಪಿಲ್ಲ, ಸಾವಿಲ್ಲ. ಅದು…
ರಾಜ್ಯದಲ್ಲಿ 1 ಕೋಟಿ ಲೀಟರ್ ಹಾಲು ಉತ್ಪಾದನೆಯಾಗುತ್ತಿದ್ದು, ಬೇಸಿಗೆಯಲ್ಲಿ 89 ಲಕ್ಷ ಲೀಟರ್ಗೆ…
ಹೆಚ್ಚಿನ ಮಾಹಿತಿಗೆ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಕರ್ನಾಟಕದಲ್ಲಿ 80 ಸಕ್ಕರೆ ಕಾರ್ಖಾನೆಗಳಿದ್ದು, ಈ ಪೈಕಿ ಕೆಲವು ಮುಚ್ಚಿಹೋಗಿವೆ. ಈಗಿರುವ ಕಾರ್ಖಾನೆಗಳಿಗೆ…
ಕುಡಿಯುವ ನೀರು ಮತ್ತು ಮೇವಿನ ಸಮಸ್ಯೆ ಕುರಿತು ಕೈಗೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಕುರಿತು…