Advertisement
ಸುದ್ದಿಗಳು

ದೀಪಾವಳಿ ಹಬ್ಬ | ತರಕಾರಿ, ಹೂವು, ಹಣ್ಣುಗಳ ಬೆಲೆಯಲ್ಲಿಏರಿಕೆ | ಖಾಸಗಿ ಬಸ್ ಗಳ ದರ ಎರಡು ಪಟ್ಟು ಹೆಚ್ಚಳ | ಹಬ್ಬವೆಂದರೆ ಸಾಮಾನ್ಯ ಜನರಿಗೆ ಪ್ರತೀ ಬಾರಿ ಏರಿಕೆಯ ಬಿಸಿ…!‌ |

Share

ದೀಪಾವಳಿ ಹಬ್ಬದ ಸಂಭ್ರಮ ಎಲ್ಲೆಡೆ ಮನೆ ಮಾಡಿದೆ. ಹಬ್ಬದ ವಾತಾವರಣ ಇರುವ ಕಡೆ ಬೆಲೆ ಏರಿಕೆಯ ಬಿಸಿ ಪ್ರತೀ ಬಾರಿಯಂತೆ ಈ ಬಾರಿಯೂ ಸಾಮಾನ್ಯ ಜನರಿಗೆ ತಟ್ಟಿದೆ. ಖಾಸಗಿ ಬಸ್ಸುಗಳು ದೀಪಾವಳಿ ಹಬ್ಬದ ನೆಪದಲ್ಲಿ ಪ್ರಯಾಣ ದರವನ್ನು ಎರಡು ಪಟ್ಟು ಹೆಚ್ಚಳ ಮಾಡಿದೆ. ದೀಪಾವಳಿ ಹಿನ್ನೆಲೆ ತರಕಾರಿ, ಹೂವು, ಹಣ್ಣುಗಳ ಬೆಲೆಯಲ್ಲೂ ಏರಿಕೆಯಾಗಿದೆ.

Advertisement

ದೀಪಾವಳಿ ಸಂದರ್ಭ  ಬೆಂಗಳೂರು, ಮೈಸೂರು, ಹುಬ್ಬಳ್ಳಿ ಸೇರಿದಂತೆ ದೂರದ ಊರುಗಳಲ್ಲಿದ್ದ ಮಂದಿ ಹಬ್ಬಕ್ಕೆಂದು ತಮ್ಮ ಊರುಗಳಿಗೆ ಆಗಮಿಸುವುದು ಸಾಮಾನ್ಯ. ಈಗ ಸಾಮಾನ್ಯ ದಿನಕ್ಕಿಂತ ಎರಡು ಪಟ್ಟು ಹೆಚ್ಚುವರಿ ಹಣ ನೀಡಿ ಬಸ್‌ಗಳಲ್ಲಿ ಬರಬೇಕಾದ ಅನಿವಾರ್ಯ ಎದುರಾಗಿದೆ. ಹಬ್ಬದ ಹಿನ್ನೆಲೆಯಲ್ಲಿ ಕೆಎಸ್ಸಾರ್ಟಿಸಿ ಮತ್ತು ಖಾಸಗಿ ಬಸ್‌ಗಳಲ್ಲಿ ಈಗಾಗಲೇ ಬಹುತೇಕ ಸೀಟುಗಳು ಬುಕ್ಕಿಂಗ್‌ ಆಗಿವೆ. ಕೆಎಸ್‌ಆರ್‌ಟಿಸಿ ಹೆಚ್ಚುವರಿ ಬಸ್ಸುಗಳನ್ನೂ ಓಡಿಸುತ್ತಿದೆ. ಆದರೆ ಖಾಸಗಿ ಬಸ್ಸುಗಳಲ್ಲಿ  ಎರಡು ಪಟ್ಟು ಹೆಚ್ಚು ದರವನ್ನು ನಿಗದಿ ಮಾಡಲಾಗಿದೆ.

ದೀಪಾವಳಿ ಸಂದರ್ಭ ಹೂವು, ಹಣ್ಣು, ತರಕಾರಿಗಳಿಗೆ ಬೇಡಿಕೆ ವ್ಯಕ್ತವಾಗುತ್ತದೆ. ಈ ಬಾರಿ ಇದೆಲ್ಲವೂ ಬೆಲೆ ಏರಿಕೆಯ ಹಾದಿಯಲ್ಲಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಅಪಾರ ಪ್ರಮಾಣದ ಬೆಳೆಹಾನಿಯಾಗಿದ್ದು, ಇದರ ಪರಿಣಾಮ ತರಕಾರಿ, ಹೂವು, ಹಣ್ಣುಗಳ ಬೆಲೆಯಲ್ಲೂ ಭಾರೀ ಏರಿಕೆಯಾಗಿದೆ. ಮಲ್ಲಿಗೆ ಹೂವು 1 ಕೆಜಿಗೆ 500 ರೂ.ನಿಂದ 550 ರೂ.ವರೆಗೆ ಏರಿಕೆಯಾದರೆ, ಕನಕಾಂಬರ ಹೂವು ಕೆಜಿಗೆ 1,200 ರೂ.ವರೆಗೂ ಏರಿಕೆ ಕಂಡಿದೆ. ಪಟಾಕಿಗಳ ಬೆಲೆಯಲ್ಲಿ ಕೂಡ  ಏರಿಕೆಯಾಗಿದ್ದು, ಈ ವರ್ಷ 100 ರಿಂದ‌ 150% ರಷ್ಟು ಪಟಾಕಿಗಳ ಬೆಲೆ ಏರಿಕೆ ಮಾಡಲಾಗಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಕಡಿಮೆ ದರದಲ್ಲಿ ಅಡಿಕೆ ಆಮದು ಮಾಡಿದರೆ ಸಂಪೂರ್ಣ ಜಪ್ತಿ – ದೆಹಲಿ ಹೈಕೋರ್ಟ್

ಕನಿಷ್ಠ ಆಮದು ದರಕ್ಕಿಂತ ಕಡಿಮೆ ಬೆಲೆಯಲ್ಲಿ ಅಡಿಕೆ ಆಮದು ಮಾಡಿದರೆ ಸರಕುಗಳನ್ನು ಸಂಪೂರ್ಣ…

37 minutes ago

ಹವಾಮಾನ ವರದಿ | 19-02-2026 | ಕರಾವಳಿ–ಮಲೆನಾಡಿನಲ್ಲಿ ಫೆ.21 ರಿಂದ ಮಳೆ ಸಾಧ್ಯತೆ ಹೆಚ್ಚಳ

ಬಂಗಾಳಕೊಲ್ಲಿಯಲ್ಲಿ ಉಂಟಾಗುವ ತಿರುವಿಕೆಯ ಪರಿಣಾಮವಾಗಿ ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ…

9 hours ago

ಬೆಂಗಳೂರು ಕಸ ವಿಲೇವಾರಿ ತಡೆದರೆ ಕಠಿಣ ಕ್ರಮ : ಎಸ್ಮಾ ಕಾಯ್ದೆ ಜಾರಿ ಎಚ್ಚರಿಕೆ

ಬೆಂಗಳೂರು ಕಸ ವಿಲೇವಾರಿಗೆ ಅಡ್ಡಿಪಡಿಸುವವರ ವಿರುದ್ಧ ಎಸ್ಮಾ ಕಾಯ್ದೆಯಡಿ ಪ್ರಕರಣ ದಾಖಲಿಸುವುದಾಗಿ ಡಿ.ಕೆ.…

13 hours ago

ಅಡಿಕೆ ಕ್ಯಾನ್ಸರ್‌ಕಾರಕ ಅಲ್ಲ – WHOಗೆ ಅಧಿಕೃತ ಮನವಿ ಮಾಡಿದ ಉತ್ತರ ಕನ್ನಡ ಸಂಸದ

ಅಡಿಕೆಯನ್ನು Group-1 ಕ್ಯಾನ್ಸರ್ ಕಾರಕ ಪಟ್ಟಿಯಿಂದ ಮರುಪರಿಶೀಲನೆ ಮಾಡಲು WHO ಮತ್ತು IARCಗೆ…

14 hours ago

ಕ್ಯಾಂಪ್ಕೊಗೆ ಸಂಸದ ಬ್ರಿಜೇಶ್ ಚೌಟ ಭೇಟಿ, ಅಡಿಕೆ ಸಮಸ್ಯೆಗಳ ಕುರಿತು ಚರ್ಚೆ

ಪುತ್ತೂರಿನ ಕ್ಯಾಂಪ್ಕೋ ಚಾಕಲೇಟ್ ಫ್ಯಾಕ್ಟರಿಯಲ್ಲಿ ಸಂಸದ ಬ್ರಿಜೇಶ್ ಚೌಟರೊಂದಿಗೆ ಅಡಿಕೆ ಬೆಳೆಗಾರರ ಸಮಸ್ಯೆಗಳು,…

15 hours ago

ಹವಾಮಾನ ವರದಿ | 18-02-2026 | ಕರ್ನಾಟಕದಲ್ಲಿ ಬಿಸಿಲಿನ ನಡುವೆ ತುಂತುರು ಮಳೆ ಸಾಧ್ಯತೆ

19.02.2026 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ…

23 hours ago