ಸುದ್ದಿಗಳು

ದೀಪಾವಳಿ ಹಬ್ಬ | ತರಕಾರಿ, ಹೂವು, ಹಣ್ಣುಗಳ ಬೆಲೆಯಲ್ಲಿಏರಿಕೆ | ಖಾಸಗಿ ಬಸ್ ಗಳ ದರ ಎರಡು ಪಟ್ಟು ಹೆಚ್ಚಳ | ಹಬ್ಬವೆಂದರೆ ಸಾಮಾನ್ಯ ಜನರಿಗೆ ಪ್ರತೀ ಬಾರಿ ಏರಿಕೆಯ ಬಿಸಿ…!‌ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ದೀಪಾವಳಿ ಹಬ್ಬದ ಸಂಭ್ರಮ ಎಲ್ಲೆಡೆ ಮನೆ ಮಾಡಿದೆ. ಹಬ್ಬದ ವಾತಾವರಣ ಇರುವ ಕಡೆ ಬೆಲೆ ಏರಿಕೆಯ ಬಿಸಿ ಪ್ರತೀ ಬಾರಿಯಂತೆ ಈ ಬಾರಿಯೂ ಸಾಮಾನ್ಯ ಜನರಿಗೆ ತಟ್ಟಿದೆ. ಖಾಸಗಿ ಬಸ್ಸುಗಳು ದೀಪಾವಳಿ ಹಬ್ಬದ ನೆಪದಲ್ಲಿ ಪ್ರಯಾಣ ದರವನ್ನು ಎರಡು ಪಟ್ಟು ಹೆಚ್ಚಳ ಮಾಡಿದೆ. ದೀಪಾವಳಿ ಹಿನ್ನೆಲೆ ತರಕಾರಿ, ಹೂವು, ಹಣ್ಣುಗಳ ಬೆಲೆಯಲ್ಲೂ ಏರಿಕೆಯಾಗಿದೆ.

Advertisement
Advertisement

ದೀಪಾವಳಿ ಸಂದರ್ಭ  ಬೆಂಗಳೂರು, ಮೈಸೂರು, ಹುಬ್ಬಳ್ಳಿ ಸೇರಿದಂತೆ ದೂರದ ಊರುಗಳಲ್ಲಿದ್ದ ಮಂದಿ ಹಬ್ಬಕ್ಕೆಂದು ತಮ್ಮ ಊರುಗಳಿಗೆ ಆಗಮಿಸುವುದು ಸಾಮಾನ್ಯ. ಈಗ ಸಾಮಾನ್ಯ ದಿನಕ್ಕಿಂತ ಎರಡು ಪಟ್ಟು ಹೆಚ್ಚುವರಿ ಹಣ ನೀಡಿ ಬಸ್‌ಗಳಲ್ಲಿ ಬರಬೇಕಾದ ಅನಿವಾರ್ಯ ಎದುರಾಗಿದೆ. ಹಬ್ಬದ ಹಿನ್ನೆಲೆಯಲ್ಲಿ ಕೆಎಸ್ಸಾರ್ಟಿಸಿ ಮತ್ತು ಖಾಸಗಿ ಬಸ್‌ಗಳಲ್ಲಿ ಈಗಾಗಲೇ ಬಹುತೇಕ ಸೀಟುಗಳು ಬುಕ್ಕಿಂಗ್‌ ಆಗಿವೆ. ಕೆಎಸ್‌ಆರ್‌ಟಿಸಿ ಹೆಚ್ಚುವರಿ ಬಸ್ಸುಗಳನ್ನೂ ಓಡಿಸುತ್ತಿದೆ. ಆದರೆ ಖಾಸಗಿ ಬಸ್ಸುಗಳಲ್ಲಿ  ಎರಡು ಪಟ್ಟು ಹೆಚ್ಚು ದರವನ್ನು ನಿಗದಿ ಮಾಡಲಾಗಿದೆ.

ದೀಪಾವಳಿ ಸಂದರ್ಭ ಹೂವು, ಹಣ್ಣು, ತರಕಾರಿಗಳಿಗೆ ಬೇಡಿಕೆ ವ್ಯಕ್ತವಾಗುತ್ತದೆ. ಈ ಬಾರಿ ಇದೆಲ್ಲವೂ ಬೆಲೆ ಏರಿಕೆಯ ಹಾದಿಯಲ್ಲಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಅಪಾರ ಪ್ರಮಾಣದ ಬೆಳೆಹಾನಿಯಾಗಿದ್ದು, ಇದರ ಪರಿಣಾಮ ತರಕಾರಿ, ಹೂವು, ಹಣ್ಣುಗಳ ಬೆಲೆಯಲ್ಲೂ ಭಾರೀ ಏರಿಕೆಯಾಗಿದೆ. ಮಲ್ಲಿಗೆ ಹೂವು 1 ಕೆಜಿಗೆ 500 ರೂ.ನಿಂದ 550 ರೂ.ವರೆಗೆ ಏರಿಕೆಯಾದರೆ, ಕನಕಾಂಬರ ಹೂವು ಕೆಜಿಗೆ 1,200 ರೂ.ವರೆಗೂ ಏರಿಕೆ ಕಂಡಿದೆ. ಪಟಾಕಿಗಳ ಬೆಲೆಯಲ್ಲಿ ಕೂಡ  ಏರಿಕೆಯಾಗಿದ್ದು, ಈ ವರ್ಷ 100 ರಿಂದ‌ 150% ರಷ್ಟು ಪಟಾಕಿಗಳ ಬೆಲೆ ಏರಿಕೆ ಮಾಡಲಾಗಿದೆ.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ರೈತರಿಗೆ ಆಶಾದಾಯಕ ಕೃಷಿಭಾಗ್ಯ ಯೋಜನೆ

ಮಂಗಳೂರು ತಾಲೂಕಿನ ಎಲ್ಲಾ ಗ್ರಾಮಗಳು ಮಳೆಯಾಶ್ರಿತ ಕೃಷಿಯ ಮೇಲೆ ಹೆಚ್ಚು ಅವಲಂಬಿತವಾಗಿರುವುದರಿಂದ ಹವಾಮಾನ…

17 minutes ago

ಬೆಳೆ ವಿಮೆ | ದತ್ತಾಂಶ ತಾಳೆ ಹೊಂದಿಸಲು  ಮೇ 31 ಕೊನೆಯ ದಿನ

ಮರುವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ನೋಂದಾವಣೆಗೊಂಡ ರೈತರ ತಾಲೂಕಿನಲ್ಲಿ ವಿಮೆ ಮಾಡಿಸಲಾಗಿರುವ…

22 minutes ago

ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆ | ಕೊಡಗು ಜಿಲ್ಲೆಯ ಬಹುತೇಕ ಕಡೆ ಮಳೆ |

ಇಂದು ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಳೆಯಾಗಿದೆ. ಪ್ರಮುಖವಾಗಿ ಕುಮುಟಾ ಮತ್ತು ಅಂಕೋಲಾದಲ್ಲಿ…

27 minutes ago

ಬೆಂಗಳೂರು-ಮೈಸೂರಿನಲ್ಲಿ ವಿವಿಧ  ತಳಿಗಳ ಮಾವು, ಹಲಸು ಪ್ರದರ್ಶನ ಮತ್ತು ಮಾರಾಟ

ಬೆಂಗಳೂರಿನ ಲಾಲ್ ಬಾಗ್ ನಲ್ಲಿರುವ ಡಾ. ಎಂ.ಎಚ್ ಮರೀಗೌಡ ಸಭಾಂಗಣದಲ್ಲಿ  ಮೂರು ದಿನಗಳ…

44 minutes ago

ಸುಳ್ಯದಲ್ಲಿ ಜೇನು ಚಾಕಲೇಟ್ ಬಿಡುಗಡೆ | ಜೇನಿನಿಂದಲೇ ಚಾಕಲೇಟ್ ಉತ್ತಮ ಬೆಳವಣಿಗೆ – ಶೋಭಾ ಕರಂದ್ಲಾಜೆ

ಜೇನು ಕೃಷಿ ಲಾಭದಾಯಕವಾಗಿದ್ದು, ರೈತರು ಈ ಕೃಷಿಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು ಎಂದು ಕೇಂದ್ರ…

54 minutes ago

ಹವಾಮಾನ ವರದಿ | 23.05.2025 | ಮುಂದಿನ 10 ದಿನಗಳವರೆಗೂ ರಾಜ್ಯದಲ್ಲಿ ಉತ್ತಮ ಮಳೆ

24.05.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…

7 hours ago