ದೀಪಾವಳಿ ಹಬ್ಬದ ಸಂಭ್ರಮ ಎಲ್ಲೆಡೆ ಮನೆ ಮಾಡಿದೆ. ಹಬ್ಬದ ವಾತಾವರಣ ಇರುವ ಕಡೆ ಬೆಲೆ ಏರಿಕೆಯ ಬಿಸಿ ಪ್ರತೀ ಬಾರಿಯಂತೆ ಈ ಬಾರಿಯೂ ಸಾಮಾನ್ಯ ಜನರಿಗೆ ತಟ್ಟಿದೆ. ಖಾಸಗಿ ಬಸ್ಸುಗಳು ದೀಪಾವಳಿ ಹಬ್ಬದ ನೆಪದಲ್ಲಿ ಪ್ರಯಾಣ ದರವನ್ನು ಎರಡು ಪಟ್ಟು ಹೆಚ್ಚಳ ಮಾಡಿದೆ. ದೀಪಾವಳಿ ಹಿನ್ನೆಲೆ ತರಕಾರಿ, ಹೂವು, ಹಣ್ಣುಗಳ ಬೆಲೆಯಲ್ಲೂ ಏರಿಕೆಯಾಗಿದೆ.
ದೀಪಾವಳಿ ಸಂದರ್ಭ ಬೆಂಗಳೂರು, ಮೈಸೂರು, ಹುಬ್ಬಳ್ಳಿ ಸೇರಿದಂತೆ ದೂರದ ಊರುಗಳಲ್ಲಿದ್ದ ಮಂದಿ ಹಬ್ಬಕ್ಕೆಂದು ತಮ್ಮ ಊರುಗಳಿಗೆ ಆಗಮಿಸುವುದು ಸಾಮಾನ್ಯ. ಈಗ ಸಾಮಾನ್ಯ ದಿನಕ್ಕಿಂತ ಎರಡು ಪಟ್ಟು ಹೆಚ್ಚುವರಿ ಹಣ ನೀಡಿ ಬಸ್ಗಳಲ್ಲಿ ಬರಬೇಕಾದ ಅನಿವಾರ್ಯ ಎದುರಾಗಿದೆ. ಹಬ್ಬದ ಹಿನ್ನೆಲೆಯಲ್ಲಿ ಕೆಎಸ್ಸಾರ್ಟಿಸಿ ಮತ್ತು ಖಾಸಗಿ ಬಸ್ಗಳಲ್ಲಿ ಈಗಾಗಲೇ ಬಹುತೇಕ ಸೀಟುಗಳು ಬುಕ್ಕಿಂಗ್ ಆಗಿವೆ. ಕೆಎಸ್ಆರ್ಟಿಸಿ ಹೆಚ್ಚುವರಿ ಬಸ್ಸುಗಳನ್ನೂ ಓಡಿಸುತ್ತಿದೆ. ಆದರೆ ಖಾಸಗಿ ಬಸ್ಸುಗಳಲ್ಲಿ ಎರಡು ಪಟ್ಟು ಹೆಚ್ಚು ದರವನ್ನು ನಿಗದಿ ಮಾಡಲಾಗಿದೆ.
ದೀಪಾವಳಿ ಸಂದರ್ಭ ಹೂವು, ಹಣ್ಣು, ತರಕಾರಿಗಳಿಗೆ ಬೇಡಿಕೆ ವ್ಯಕ್ತವಾಗುತ್ತದೆ. ಈ ಬಾರಿ ಇದೆಲ್ಲವೂ ಬೆಲೆ ಏರಿಕೆಯ ಹಾದಿಯಲ್ಲಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಅಪಾರ ಪ್ರಮಾಣದ ಬೆಳೆಹಾನಿಯಾಗಿದ್ದು, ಇದರ ಪರಿಣಾಮ ತರಕಾರಿ, ಹೂವು, ಹಣ್ಣುಗಳ ಬೆಲೆಯಲ್ಲೂ ಭಾರೀ ಏರಿಕೆಯಾಗಿದೆ. ಮಲ್ಲಿಗೆ ಹೂವು 1 ಕೆಜಿಗೆ 500 ರೂ.ನಿಂದ 550 ರೂ.ವರೆಗೆ ಏರಿಕೆಯಾದರೆ, ಕನಕಾಂಬರ ಹೂವು ಕೆಜಿಗೆ 1,200 ರೂ.ವರೆಗೂ ಏರಿಕೆ ಕಂಡಿದೆ. ಪಟಾಕಿಗಳ ಬೆಲೆಯಲ್ಲಿ ಕೂಡ ಏರಿಕೆಯಾಗಿದ್ದು, ಈ ವರ್ಷ 100 ರಿಂದ 150% ರಷ್ಟು ಪಟಾಕಿಗಳ ಬೆಲೆ ಏರಿಕೆ ಮಾಡಲಾಗಿದೆ.
ಏಪ್ರಿಲ್ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…
ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…
ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…
ಮಾರ್ಚ್ ತಿಂಗಳಲ್ಲಿ ಅಪರೂಪದ ಭಾರೀ ಮಳೆ ಸುಬ್ರಹ್ಮಣ್ಯದಲ್ಲಿ ದಾಖಲಾಗಿದೆ. ರಾಜ್ಯದ ಹಲವೆಡೆ ಇನ್ನೂ…
ಕೃಷಿ ಕೂಳೆ ಈಗ ಮಾಲಿನ್ಯದ ಮೂಲವಲ್ಲ, ರೈತರಿಗೆ ಆದಾಯದ ಮೂಲವಾಗುತ್ತಿದೆ. ಬಯೋ-ಬಿಟುಮೆನ್ ತಂತ್ರಜ್ಞಾನ…
ಮಹಿಳೆಯರನ್ನು ಕೃಷಿ ಮೌಲ್ಯ ಸರಪಳಿಯಲ್ಲಿ ಸೇರಿಸಿದರೆ ಆದಾಯ ಮತ್ತು ಉತ್ಪಾದನೆ ಹೆಚ್ಚುತ್ತದೆ. Inclusive…